AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಳೆಯಲ್ಲಿ ನೆನೆಯುತ್ತ ಡ್ಯಾನ್ಸ್​ ಮಾಡಲ್ಲ’ ಎಂದು ಅಸಲಿ ಕಾರಣ ವಿವರಿಸಿದ ನಟಿ ನಿಧಿ

ಮಾಡಿರುವುದು ಕೆಲವೇ ಸಿನಿಮಾಗಳಾದರೂ ನಿಧಿ ಅಗರ್​ವಾಲ್​ ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ದಕ್ಷಿಣ ಭಾರತದಲ್ಲಿ ಮಿಂಚಿದ ಬಳಿಕ ಕೆಲವು ಬಾಲಿವುಡ್ ಚಿತ್ರತಂಡಗಳ ಜೊತೆಗೂ ಅವರು ಮಾತುಕತೆ ಮಾಡುತ್ತಿದ್ದಾರೆ.

‘ಮಳೆಯಲ್ಲಿ ನೆನೆಯುತ್ತ ಡ್ಯಾನ್ಸ್​ ಮಾಡಲ್ಲ’ ಎಂದು ಅಸಲಿ ಕಾರಣ ವಿವರಿಸಿದ ನಟಿ ನಿಧಿ
ನಿಧಿ ಅಗರ್​ವಾಲ್​
TV9 Web
| Edited By: |

Updated on: Jul 25, 2021 | 4:50 PM

Share

ಪಾತ್ರ ಚೆನ್ನಾಗಿ ಮೂಡಿಬರಲಿ ಎಂದು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ ಸಿನಿಮಾ ಕಲಾವಿದರು. ಆದರೆ ಕೆಲವರಿಗೆ ಕೆಲವು ನಿರ್ದಿಷ್ಟ ದೃಶ್ಯಗಳ ಬಗ್ಗೆ ಹಿಂಜರಿಕೆ ಇರುತ್ತದೆ. ಕೆಲವರು ಕಿಸ್ಸಿಂಗ್​ ದೃಶ್ಯಕ್ಕೆ ನೋ ಎನ್ನುತ್ತಾರೆ. ಬೆಡ್​ ರೂಂ ಸೀನ್​ ಇದ್ದರೆ ಕೆಲವು ನಟಿಯರು ಖಂಡಿತಾ ಒಪ್ಪಿಕೊಳ್ಳುವುದಿಲ್ಲ. ಅದೇ ರೀತಿ ಗ್ಲಾಮರಸ್​ ಬೆಡಗಿ ನಿಧಿ ಅಗರ್​ವಾಲ್​ ಅವರು ಕೆಲವೊಂದು ಇತಿಮಿತಿಗಳನ್ನು ಹಾಕಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಮಳೆಯಲ್ಲಿ ನೆನೆಯುವ ಸಾಂಗ್​ನಲ್ಲಿ ಡ್ಯಾನ್ಸ್​ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮಳೆ ಸಾಂಗ್​ಗಳು ಚಿತ್ರರಂಗದಲ್ಲಿ ತುಂಬಾ ಫೇಮಸ್​. ತುಂಬ ಹಿಂದಿನ ಕಾಲದಿಂದಲೂ ಅಂಥ ಕೆಲವು ಸಾಂಗ್​ಗಳು ಸೂಪರ್​ ಹಿಟ್​ ಆಗಿವೆ. ಈಗಲೂ ಕೂಡ ನಿರ್ದೇಶಕರು ಕೆಲವು ಸಿನಿಮಾಗಳಲ್ಲಿ ಮಳೆ ಸಾಂಗ್​ಗೆ ಪ್ರಾಮುಖ್ಯತೆ ನೀಡುತ್ತಾರೆ. ಆದರೆ ನಟಿ ನಿಧಿ ಅಗರ್​ವಾಲ್ ಅವರಿಗೆ ಆ ರೀತಿ ಹಾಡಿನಲ್ಲಿ ನರ್ತಿಸುವುದು ಎಂದರೆ ಅಲರ್ಜಿ. ತಮ್ಮ ಈ ನಿಲುವಿಗೆ ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ.

ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ನಿಧಿ ಅಗರ್​ವಾಲ್​ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಮಳೆ ಹಾಡಿನಲ್ಲಿ ನರ್ತಿಸುವುದು ಅಷ್ಟು ಸುಲಭವಲ್ಲ. ಮಳೆಯಲ್ಲಿ ನೆನೆಯಬೇಕು. ಶಾಟ್ಸ್​ ನಡುವಿನ ಬ್ರೇಕ್​ನಲ್ಲಿ ಮೈ ಒಣಗಿಸಿಕೊಳ್ಳಬೇಕು. ಮತ್ತೆ ನೆನೆಯಬೇಕು. ಅದರಲ್ಲೂ ಮಳೆ ಸುರಿಯುತ್ತಿರುವಾಗ ಕಣ್ಣು ಬಿಟ್ಟುಕೊಂಡು ನಟಿಸುವುದು, ಡ್ಯಾನ್ಸ್​ ಮಾಡುವುದು ತುಂಬ ಕಷ್ಟ. ಅದೇ ಕಾರಣಕ್ಕಾಗಿ ನಾನು ಸದ್ಯಕ್ಕೆ ಮಳೆ ಸಾಂಗ್​ಗಳಲ್ಲಿ ನಟಿಸಲು ಒಪ್ಪಿಕೊಳ್ಳುತ್ತಿಲ್ಲ’ ಎಂದು ಅವರು ಹೇಳಿದ್ದಾರೆ.

ಮಾಡಿರುವುದು ಕೆಲವೇ ಸಿನಿಮಾಗಳಾದರೂ ನಿಧಿ ಅಗರ್​ವಾಲ್​ ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. 2019ರಲ್ಲಿ ತೆರೆಕಂಡ ಇಸ್ಮಾರ್ಟ್​ ಶಂಕರ್​ ಚಿತ್ರದಲ್ಲಿ ಅವರಿಗೆ ಭರ್ಜರಿ ಹಿಟ್ ಸಿಕ್ಕಿದೆ. ಹಿಂದಿ, ತೆಲುಗು ಮತ್ತು ತಮಿಳಿನಲ್ಲಿ ಅವರು ಸಿನಿಪ್ರಿಯರಿಗೆ ಇಷ್ಟ ಆಗಿದ್ದಾರೆ. ಮಾಡೆಲ್​ ಕೂಡ ಆಗಿರುವ ಅವರು ಹಲವು ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿದ್ದಾರೆ. ‘ಹರಿ ಹರ ವೀರ ಮಲ್ಲು’ ಸಿನಿಮಾದಲ್ಲಿ ಅವರು ‘ಪವರ್​ ಸ್ಟಾರ್​’ ಪವನ್​ ಕಲ್ಯಾಣ್​ ಜೊತೆ ನಟಿಸುತ್ತಿದ್ದಾರೆ. ಮಹೇಶ್​ ಬಾಬು ಸಂಬಂಧಿ ಅಶೋಕ್​ ಗಲ್ಲಾ ಅವರ ಚೊಚ್ಚಲ ಚಿತ್ರಕ್ಕೂ ನಿಧಿ ಹೀರೋಯಿನ್​. ಕೆಲವು ಬಾಲಿವುಡ್ ಚಿತ್ರತಂಡಗಳ ಜೊತೆಗೂ ಅವರು ಮಾತುಕತೆ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಶಾರುಖ್​ ಪುತ್ರಿ ಸುಹಾನಾ ಖಾನ್​ ಹಾಟ್​ ಫೋಟೋಶೂಟ್ ವೈರಲ್​; ಅಪ್ಪನ ಕಮೆಂಟ್​ ಏನು?​

ದಕ್ಷಿಣ ಭಾರತದ ಈ ಖ್ಯಾತ ನಟಿಯರ ವಿದ್ಯಾರ್ಹತೆ ಏನು? ಇಲ್ಲಿದೆ ಮಾಹಿತಿ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ