AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ರೂಮ್​ನಲ್ಲಿ ನಟಿ ಪವಿತ್ರಾ ಲೋಕೇಶ್, ನಟ ನರೇಶ್: ರೂಂ ಮುಂದೆ ರಮ್ಯ ರಘುಪತಿ ಹೈಡ್ರಾಮಾ

ನನ್ನ ಪತಿ ನರೇಶ್ ನನಗೆ ಮೋಸ ಮಾಡಿದ್ದಾರೆ. ಈ ವಿಚಾರದಲ್ಲಿ ನಾನು ಪವಿತ್ರ ಲೋಕೇಶ್​ರನ್ನು ನಾನು ದೂರುವುದಿಲ್ಲ. ನರೇಶ್​ ನನ್ನನ್ನು ಮದುವೆಯಾಗಿದ್ದೇ ರಾಜಕೀಯ ಉದ್ದೇಶಕ್ಕಾಗಿ ಎಂದು ಮೈಸೂರಿನಲ್ಲಿ ರಮ್ಯಾ ರಘುಪತಿ ಹೇಳಿಕೆ ನೀಡಿದ್ದಾರೆ.

ಒಂದೇ ರೂಮ್​ನಲ್ಲಿ ನಟಿ ಪವಿತ್ರಾ ಲೋಕೇಶ್, ನಟ ನರೇಶ್: ರೂಂ ಮುಂದೆ ರಮ್ಯ ರಘುಪತಿ ಹೈಡ್ರಾಮಾ
ನಟಿ ಪವಿತ್ರಾ ಲೋಕೇಶ್, ನಟ ನರೇಶ್​, ನರೇಶ್ ಪತ್ನಿ ರಮ್ಯ ರಘುಪತಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 03, 2022 | 10:55 AM

Share

ಮೈಸೂರು: ಸ್ಯಾಂಡಲ್​ವುಡ್​ (Sandalwood) ಮತ್ತು ಟಾಲಿವುಡ್​ನಲ್ಲಿ (Tollywood) ಸದ್ಯ ಪವಿತ್ರಾ ಲೋಕೇಶ್​ ಹಾಗೂ ನಟ ನರೇಶ್​ ಸುದ್ದಿ ಸದ್ದು ಮಾಡುತ್ತಿದೆ. ಅವರಿಬ್ಬರ ಸಂಬಂಧದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು, ದಿನಕ್ಕೊಂದು ಹೊಸ ಸಂಗತಿ ಹೊರ ಬರುತ್ತಿದೆ. ಸದ್ಯ ಮೈಸೂರು ಹುಣಸೂರು ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ನಟ ನರೇಶ್​-ಪ್ರವಿತಾ ತಂಗಿದ್ದ ವಿಚಾರ ತಿಳಿದು ರೂಂ ಮುಂದೆ ನರೇಶ್ ಪತ್ನಿ ರಮ್ಯ ರಘುಪತಿ ಹೈಡ್ರಾಮಮೆ ಸೃಷ್ಟಿ ಮಾಡಿದ್ದಾರೆ. ಬಾಗಿಲು ಬಡಿಯುತ್ತಿದ್ದರೂ ನರೇಶ್ ಮತ್ತು ಪವಿತ್ರಾ ಲೋಕೇಶ್ ಹೊರ ಬಂದಿಲ್ಲ. ಹೋಟೆಲ್ ರೂಂ ಮುಂದೆಯೇ ಕುಳಿತು ರಮ್ಯ ರಘುಪತಿ ಹೈಡ್ರಾಮಾ ಮಾಡಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ನರೇಶ್ ಹಾಗೂ ಪವಿತ್ರಾ ಲೋಕೇಶ್ ಹೊರಟಿದ್ದು, ಈ ವೇಳೆ ಚಪ್ಪಲಿ ಎತ್ತಿಕೊಂಡ ರಮ್ಯಾ ಹೊಡೆಯಲು ಮುಂದಾದರು. ರಮ್ಯಾರನ್ನು ಪೊಲೀಸರು ಹಾಗೂ ಆಪ್ತ ರಕ್ಷಕರು ತಡೆದರು. ಇದೇ ವೇಳೆ ಪವಿತ್ರಾ ಲೋಕೇಶ್ ವಿರುದ್ದ ರಮ್ಯಾ ವಾಗ್ದಾಳಿ ಮಾಡಿದ್ದು, ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ನರೇಶ್ ಹಾಗೂ ಪವಿತ್ರಾ ಲೋಕೇಶ್ ಹೋಟೆಲ್‌ನಿಂದ ಹೊರ ಹೋದರು.

ಇದನ್ನೂ ಓದಿ: ಮರವಂತೆ ಸಮುದ್ರಕ್ಕೆ ಉರುಳಿದ ಕಾರು! ಸಮುದ್ರ ಪಾಲಾದ ವ್ಯಕ್ತಿಗಾಗಿ ಹುಡುಕಾಟ

ಈ ವಿಚಾರದಲ್ಲಿ ನಾನು ಪವಿತ್ರಾ ಲೋಕೇಶ್​ರನ್ನು ದೂರುವುದಿಲ್ಲ

ಟಿವಿ9ಗೆ ನಟ ನರೇಶ್ ಪತ್ನಿ ರಮ್ಯಾ ರಘುಪತಿ ಹೇಳಿಕೆ ನೀಡಿದ್ದು, ನನ್ನ ಪತಿ ನರೇಶ್ ನನಗೆ ಮೋಸ ಮಾಡಿದ್ದಾರೆ. ಈ ವಿಚಾರದಲ್ಲಿ ನಾನು ಪವಿತ್ರ ಲೋಕೇಶ್​ರನ್ನು ನಾನು ದೂರುವುದಿಲ್ಲ. ನರೇಶ್​ ನನ್ನನ್ನು ಮದುವೆಯಾಗಿದ್ದೇ ರಾಜಕೀಯ ಉದ್ದೇಶಕ್ಕಾಗಿ. ಮದುವೆಯಾಗಿ ಎರಡು ವರ್ಷ‌ ಮಾತ್ರ ನರೇಶ್ ಅನ್ಯೋನ್ಯವಾಗಿದ್ದರು. ಆ ಬಳಿಕ ನನಗೆ ತೊಂದರೆ ಕೊಡುತ್ತಲೇ ಬಂದಿದ್ದಾರೆ. ಆದರೂ ನಾನು ಎಲ್ಲವನ್ನೂ ಸಹಿಸಿಕೊಂಡು ಬಂದಿದ್ದೇನೆ. ನನ್ನ ಮಗನಿಗೋಸ್ಕರ ಎಲ್ಲವನ್ನೂ ಸಹಿಸಿಕೊಂಡಿದ್ದೇನೆ. ಆದರೀಗ ನನಗೆ ಡೈವೋರ್ಸ್ ನೋಟಿಸ್ ಕಳುಹಿಸಿದ್ದಾರೆ. ನಾನು ಯಾವುದೇ ಕಾರಣಕ್ಕೂ ಡೈವೋರ್ಸ್ ಕೊಡುವುದಿಲ್ಲ. ನಾನು ಒಳ್ಳೆಯ ಮನೆತನಕ್ಕೆ ಸೇರಿದವಳು. ನನ್ನ ಉಸಿರು ಇರುವವರೆಗೂ ನ್ಯಾಯಕ್ಕಾಗಿ ಹೋರಾಟ ನಡೆಸುತ್ತೇನೆ ಎಂದು ರಮ್ಯಾ ರಘುಪತಿ ಹೇಳಿಕೆ ನೀಡಿದರು.

ಇದನ್ನೂ ಓದಿ: India Covid Updates: ಭಾರತದಲ್ಲಿ 16,103 ಹೊಸ ಕೊರೊನಾ ಪ್ರಕರಣಗಳು ಪತ್ತೆ, 31 ಮಂದಿ ಸಾವು

Published On - 9:59 am, Sun, 3 July 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ