AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ

ಬೆಡ್​ ಮತ್ತು ವೆಂಟಿಲೇಟರ್​ ಬೇಕು ಎಂದು ಟ್ವೀಟ್​ ಮಾಡಿದ ಕೇವಲ ಮೂರು ಗಂಟೆಗಳ ಬಳಿಕ ಪಿಯಾ ಸಹೋದರ ಇಹಲೋಕ ತ್ಯಜಿಸಿದರು. ‘ನನ್ನ ಸಹೋದರ ಇನ್ನಿಲ್ಲ’ ಎಂದು ಟ್ವೀಟ್​ ಮಾಡುವ ಮೂಲಕ ಅವರು ಶೋಕ ತೋಡಿಕೊಂಡಿದ್ದಾರೆ.

ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ
ಪಿಯಾ ಬಾಜಪೇಯ್
ಮದನ್​ ಕುಮಾರ್​
| Edited By: |

Updated on:May 04, 2021 | 5:29 PM

Share

ಎಲ್ಲೆಲ್ಲೂ ಕೊರೊನಾ ವೈರಸ್​ ರಣಕೇಕೆ ಹಾಕುತ್ತಿದೆ. ಈ ಮಹಾಮಾರಿಯಿಂದಾಗಿ ದೇಶಾದ್ಯಂತ ಸ್ಮಶಾನದ ವಾತಾವರಣ ನಿರ್ಮಾಣ ಆಗುತ್ತಿದೆ. ಜನಸಾಮಾನ್ಯರು ಮಾತ್ರವಲ್ಲದೇ ಸ್ಟಾರ್​ ನಟ-ನಟಿಯರಿಗೂ ಕೊವಿಡ್​ ಕಾಟ ತಪ್ಪುತ್ತಿಲ್ಲ. ಎಷ್ಟೇ ಹಣ, ಪ್ರಭಾವ ಇದ್ದರೂ ತಮ್ಮವರನ್ನು ಉಳಿಸಿಕೊಳ್ಳಲಾಗದ ಸ್ಥಿತಿಯಲ್ಲಿ ಸೆಲೆಬ್ರಿಟಿಗಳು ಇದ್ದಾರೆ. ಹಿಂದಿ ಚಿತ್ರರಂಗದ ಖ್ಯಾತ ನಟಿ ಪಿಯಾ ಬಾಜಪೇಯ್​ ಅವರ ಸಹೋದರ ಕೂಡ ಈಗ ಕೊರೊನಾ ವೈರಸ್​ನಿಂದ ಮೃತಪಟ್ಟಿದ್ದಾರೆ. ಈ ವಿಷಯವನ್ನು ಸ್ವತಃ ಪಿಯಾ ಸೋಶಿಯಲ್​ ಮೀಡಿಯಾ ಮೂಲಕ ಖಚಿತ ಪಡಿಸಿದ್ದಾರೆ.

ಮಂಗಳವಾರ (ಮೇ 4) ಮುಂಜಾನೆ 6 ಗಂಟೆಗೆ ಪಿಯಾ ಟ್ವೀಟ್​ ಮಾಡಿದ್ದರು. ಸಹೋದರನಿಗೆ ಕೊರೊನಾ ಪಾಸಿಟಿವ್​ ಆಗಿದ್ದು, ಅವರ ಪರಿಸ್ಥಿತಿ ಚಿಂತಾಜನಕ ಆಗಿದೆ ಎಂದು ಬರೆದುಕೊಂಡಿದ್ದರು. ಅಲ್ಲದೆ, ‘ತುರ್ತಾಗಿ ನನಗೆ ಸಹಾಯ ಬೇಕಿದೆ. ನನ್ನ ಸಹೋದರ ಸಾಯುತ್ತಿದ್ದಾನೆ. ಉತ್ತರ ಪ್ರದೇಶದ ಫಾರುಕಾಬಾದ್​ನಲ್ಲಿ ಒಂದು ಬೆಡ್​ ಮತ್ತು ವೆಂಟಿಲೇಟರ್​ ಬೇಕಾಗಿದೆ. ನಾವು ತುಂಬ ಕಷ್ಟದಲ್ಲಿದ್ದೇವೆ. ಯಾರಾದರೂ ಸಹಾಯ ಮಾಡಿ ಪ್ಲೀಸ್..’ ಎಂದು ರಿಯಾ ಟ್ವಿಟರ್​ನಲ್ಲಿ ಅಂಗಲಾಚಿದ್ದರು.ಲ

ಈ ಟ್ವೀಟ್​ ಮಾಡಿದ ಕೇವಲ ಮೂರು ಗಂಟೆಗಳ ಬಳಿಕ, ಅಂದರೆ 9 ಗಂಟೆ ಸುಮಾರಿಗೆ ಪಿಯಾ ಸಹೋದರ ಇಹಲೋಕ ತ್ಯಜಿಸಿದರು. ‘ನನ್ನ ಸಹೋದರ ಇನ್ನಿಲ್ಲ’ ಎಂದು ಟ್ವೀಟ್​ ಮಾಡುವ ಮೂಲಕ ಅವರು ಶೋಕ ತೋಡಿಕೊಂಡಿದ್ದಾರೆ. ಸಹಾಯಕ್ಕಾಗಿ ಅವರು ಬಿಜೆಪಿ ಮುಖಂಡ ತಜಿಂದರ್​ ಪಾಲ್​ ಸಿಂಗ್​ ಅವರನ್ನು ಕೂಡ ಬೇಡಿಕೊಂಡಿದ್ದರು. ಆದರೆ ಯಾವುದೇ ಪ್ರಯೋಜನ ಆಗಿಲ್ಲ. ಸಹೋದರನನ್ನು ಕಳೆದುಕೊಂಡಿರುವ ಪಿಯಾಗೆ ಈಗ ನೆಟ್ಟಿಗರು ಸಂತಾಪ ಸೂಚಿಸುತ್ತಿದ್ದಾರೆ.

ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳು ಕೋವಿಡ್​ನಿಂದ ಮೃತರಾದರು. ಹಲವು ಸಿನಿಮಾ, ಟಿವಿ ಶೋ ಹಾಗೂ ವೆಬ್​ ಸೀರಿಸ್​​ಗಳಲ್ಲಿ ಅಭಿನಯಿಸಿದ್ದ ನಟ ಮೇಜರ್​ ಬಿಕ್ರಮ್‌ಜೀತ್ ಕನ್ವರ್‌ಪಾಲ್ ಇತ್ತೀಚೆಗೆ ಕೊವಿಡ್​ಗೆ ಬಲಿಯಾದರು. ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಿರ್ಮಾಪಕರಾದ ರಾಜಶೇಖರ್​, ಡಿ.ಎಸ್​. ಮಂಜುನಾಥ್​ ಮುಂತಾದವರು ಕೂಡ ಈ ಮಹಾಮಾರಿಗೆ ಬಲಿಯಾಗಿರುವುದು ನೋವಿನ ಸಂಗತಿ.

ಇದನ್ನೂ ಓದಿ:

ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊವಿಡ್​ 19 ಸೋಂಕಿನಿಂದ ಸಾವು

ತಲೆ ಬಾಗಿ ಕ್ಷಮೆ ಕೋರುವೆ; ರಾಮು ನಿಧನದ ಬಗ್ಗೆ ಮಾಲಾಶ್ರೀಗೆ ಜಗ್ಗೇಶ್​ ಹೀಗೆ ಹೇಳಿದ್ದೇಕೆ?

Published On - 3:33 pm, Tue, 4 May 21

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್