ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ

ಬೆಡ್​ ಮತ್ತು ವೆಂಟಿಲೇಟರ್​ ಬೇಕು ಎಂದು ಟ್ವೀಟ್​ ಮಾಡಿದ ಕೇವಲ ಮೂರು ಗಂಟೆಗಳ ಬಳಿಕ ಪಿಯಾ ಸಹೋದರ ಇಹಲೋಕ ತ್ಯಜಿಸಿದರು. ‘ನನ್ನ ಸಹೋದರ ಇನ್ನಿಲ್ಲ’ ಎಂದು ಟ್ವೀಟ್​ ಮಾಡುವ ಮೂಲಕ ಅವರು ಶೋಕ ತೋಡಿಕೊಂಡಿದ್ದಾರೆ.

ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ
ಪಿಯಾ ಬಾಜಪೇಯ್
Follow us
| Updated By: Digi Tech Desk

Updated on:May 04, 2021 | 5:29 PM

ಎಲ್ಲೆಲ್ಲೂ ಕೊರೊನಾ ವೈರಸ್​ ರಣಕೇಕೆ ಹಾಕುತ್ತಿದೆ. ಈ ಮಹಾಮಾರಿಯಿಂದಾಗಿ ದೇಶಾದ್ಯಂತ ಸ್ಮಶಾನದ ವಾತಾವರಣ ನಿರ್ಮಾಣ ಆಗುತ್ತಿದೆ. ಜನಸಾಮಾನ್ಯರು ಮಾತ್ರವಲ್ಲದೇ ಸ್ಟಾರ್​ ನಟ-ನಟಿಯರಿಗೂ ಕೊವಿಡ್​ ಕಾಟ ತಪ್ಪುತ್ತಿಲ್ಲ. ಎಷ್ಟೇ ಹಣ, ಪ್ರಭಾವ ಇದ್ದರೂ ತಮ್ಮವರನ್ನು ಉಳಿಸಿಕೊಳ್ಳಲಾಗದ ಸ್ಥಿತಿಯಲ್ಲಿ ಸೆಲೆಬ್ರಿಟಿಗಳು ಇದ್ದಾರೆ. ಹಿಂದಿ ಚಿತ್ರರಂಗದ ಖ್ಯಾತ ನಟಿ ಪಿಯಾ ಬಾಜಪೇಯ್​ ಅವರ ಸಹೋದರ ಕೂಡ ಈಗ ಕೊರೊನಾ ವೈರಸ್​ನಿಂದ ಮೃತಪಟ್ಟಿದ್ದಾರೆ. ಈ ವಿಷಯವನ್ನು ಸ್ವತಃ ಪಿಯಾ ಸೋಶಿಯಲ್​ ಮೀಡಿಯಾ ಮೂಲಕ ಖಚಿತ ಪಡಿಸಿದ್ದಾರೆ.

ಮಂಗಳವಾರ (ಮೇ 4) ಮುಂಜಾನೆ 6 ಗಂಟೆಗೆ ಪಿಯಾ ಟ್ವೀಟ್​ ಮಾಡಿದ್ದರು. ಸಹೋದರನಿಗೆ ಕೊರೊನಾ ಪಾಸಿಟಿವ್​ ಆಗಿದ್ದು, ಅವರ ಪರಿಸ್ಥಿತಿ ಚಿಂತಾಜನಕ ಆಗಿದೆ ಎಂದು ಬರೆದುಕೊಂಡಿದ್ದರು. ಅಲ್ಲದೆ, ‘ತುರ್ತಾಗಿ ನನಗೆ ಸಹಾಯ ಬೇಕಿದೆ. ನನ್ನ ಸಹೋದರ ಸಾಯುತ್ತಿದ್ದಾನೆ. ಉತ್ತರ ಪ್ರದೇಶದ ಫಾರುಕಾಬಾದ್​ನಲ್ಲಿ ಒಂದು ಬೆಡ್​ ಮತ್ತು ವೆಂಟಿಲೇಟರ್​ ಬೇಕಾಗಿದೆ. ನಾವು ತುಂಬ ಕಷ್ಟದಲ್ಲಿದ್ದೇವೆ. ಯಾರಾದರೂ ಸಹಾಯ ಮಾಡಿ ಪ್ಲೀಸ್..’ ಎಂದು ರಿಯಾ ಟ್ವಿಟರ್​ನಲ್ಲಿ ಅಂಗಲಾಚಿದ್ದರು.ಲ

ಈ ಟ್ವೀಟ್​ ಮಾಡಿದ ಕೇವಲ ಮೂರು ಗಂಟೆಗಳ ಬಳಿಕ, ಅಂದರೆ 9 ಗಂಟೆ ಸುಮಾರಿಗೆ ಪಿಯಾ ಸಹೋದರ ಇಹಲೋಕ ತ್ಯಜಿಸಿದರು. ‘ನನ್ನ ಸಹೋದರ ಇನ್ನಿಲ್ಲ’ ಎಂದು ಟ್ವೀಟ್​ ಮಾಡುವ ಮೂಲಕ ಅವರು ಶೋಕ ತೋಡಿಕೊಂಡಿದ್ದಾರೆ. ಸಹಾಯಕ್ಕಾಗಿ ಅವರು ಬಿಜೆಪಿ ಮುಖಂಡ ತಜಿಂದರ್​ ಪಾಲ್​ ಸಿಂಗ್​ ಅವರನ್ನು ಕೂಡ ಬೇಡಿಕೊಂಡಿದ್ದರು. ಆದರೆ ಯಾವುದೇ ಪ್ರಯೋಜನ ಆಗಿಲ್ಲ. ಸಹೋದರನನ್ನು ಕಳೆದುಕೊಂಡಿರುವ ಪಿಯಾಗೆ ಈಗ ನೆಟ್ಟಿಗರು ಸಂತಾಪ ಸೂಚಿಸುತ್ತಿದ್ದಾರೆ.

ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳು ಕೋವಿಡ್​ನಿಂದ ಮೃತರಾದರು. ಹಲವು ಸಿನಿಮಾ, ಟಿವಿ ಶೋ ಹಾಗೂ ವೆಬ್​ ಸೀರಿಸ್​​ಗಳಲ್ಲಿ ಅಭಿನಯಿಸಿದ್ದ ನಟ ಮೇಜರ್​ ಬಿಕ್ರಮ್‌ಜೀತ್ ಕನ್ವರ್‌ಪಾಲ್ ಇತ್ತೀಚೆಗೆ ಕೊವಿಡ್​ಗೆ ಬಲಿಯಾದರು. ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಿರ್ಮಾಪಕರಾದ ರಾಜಶೇಖರ್​, ಡಿ.ಎಸ್​. ಮಂಜುನಾಥ್​ ಮುಂತಾದವರು ಕೂಡ ಈ ಮಹಾಮಾರಿಗೆ ಬಲಿಯಾಗಿರುವುದು ನೋವಿನ ಸಂಗತಿ.

ಇದನ್ನೂ ಓದಿ:

ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊವಿಡ್​ 19 ಸೋಂಕಿನಿಂದ ಸಾವು

ತಲೆ ಬಾಗಿ ಕ್ಷಮೆ ಕೋರುವೆ; ರಾಮು ನಿಧನದ ಬಗ್ಗೆ ಮಾಲಾಶ್ರೀಗೆ ಜಗ್ಗೇಶ್​ ಹೀಗೆ ಹೇಳಿದ್ದೇಕೆ?

Published On - 3:33 pm, Tue, 4 May 21

ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ