AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ

ಬೆಡ್​ ಮತ್ತು ವೆಂಟಿಲೇಟರ್​ ಬೇಕು ಎಂದು ಟ್ವೀಟ್​ ಮಾಡಿದ ಕೇವಲ ಮೂರು ಗಂಟೆಗಳ ಬಳಿಕ ಪಿಯಾ ಸಹೋದರ ಇಹಲೋಕ ತ್ಯಜಿಸಿದರು. ‘ನನ್ನ ಸಹೋದರ ಇನ್ನಿಲ್ಲ’ ಎಂದು ಟ್ವೀಟ್​ ಮಾಡುವ ಮೂಲಕ ಅವರು ಶೋಕ ತೋಡಿಕೊಂಡಿದ್ದಾರೆ.

ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ
ಪಿಯಾ ಬಾಜಪೇಯ್
ಮದನ್​ ಕುಮಾರ್​
| Edited By: |

Updated on:May 04, 2021 | 5:29 PM

Share

ಎಲ್ಲೆಲ್ಲೂ ಕೊರೊನಾ ವೈರಸ್​ ರಣಕೇಕೆ ಹಾಕುತ್ತಿದೆ. ಈ ಮಹಾಮಾರಿಯಿಂದಾಗಿ ದೇಶಾದ್ಯಂತ ಸ್ಮಶಾನದ ವಾತಾವರಣ ನಿರ್ಮಾಣ ಆಗುತ್ತಿದೆ. ಜನಸಾಮಾನ್ಯರು ಮಾತ್ರವಲ್ಲದೇ ಸ್ಟಾರ್​ ನಟ-ನಟಿಯರಿಗೂ ಕೊವಿಡ್​ ಕಾಟ ತಪ್ಪುತ್ತಿಲ್ಲ. ಎಷ್ಟೇ ಹಣ, ಪ್ರಭಾವ ಇದ್ದರೂ ತಮ್ಮವರನ್ನು ಉಳಿಸಿಕೊಳ್ಳಲಾಗದ ಸ್ಥಿತಿಯಲ್ಲಿ ಸೆಲೆಬ್ರಿಟಿಗಳು ಇದ್ದಾರೆ. ಹಿಂದಿ ಚಿತ್ರರಂಗದ ಖ್ಯಾತ ನಟಿ ಪಿಯಾ ಬಾಜಪೇಯ್​ ಅವರ ಸಹೋದರ ಕೂಡ ಈಗ ಕೊರೊನಾ ವೈರಸ್​ನಿಂದ ಮೃತಪಟ್ಟಿದ್ದಾರೆ. ಈ ವಿಷಯವನ್ನು ಸ್ವತಃ ಪಿಯಾ ಸೋಶಿಯಲ್​ ಮೀಡಿಯಾ ಮೂಲಕ ಖಚಿತ ಪಡಿಸಿದ್ದಾರೆ.

ಮಂಗಳವಾರ (ಮೇ 4) ಮುಂಜಾನೆ 6 ಗಂಟೆಗೆ ಪಿಯಾ ಟ್ವೀಟ್​ ಮಾಡಿದ್ದರು. ಸಹೋದರನಿಗೆ ಕೊರೊನಾ ಪಾಸಿಟಿವ್​ ಆಗಿದ್ದು, ಅವರ ಪರಿಸ್ಥಿತಿ ಚಿಂತಾಜನಕ ಆಗಿದೆ ಎಂದು ಬರೆದುಕೊಂಡಿದ್ದರು. ಅಲ್ಲದೆ, ‘ತುರ್ತಾಗಿ ನನಗೆ ಸಹಾಯ ಬೇಕಿದೆ. ನನ್ನ ಸಹೋದರ ಸಾಯುತ್ತಿದ್ದಾನೆ. ಉತ್ತರ ಪ್ರದೇಶದ ಫಾರುಕಾಬಾದ್​ನಲ್ಲಿ ಒಂದು ಬೆಡ್​ ಮತ್ತು ವೆಂಟಿಲೇಟರ್​ ಬೇಕಾಗಿದೆ. ನಾವು ತುಂಬ ಕಷ್ಟದಲ್ಲಿದ್ದೇವೆ. ಯಾರಾದರೂ ಸಹಾಯ ಮಾಡಿ ಪ್ಲೀಸ್..’ ಎಂದು ರಿಯಾ ಟ್ವಿಟರ್​ನಲ್ಲಿ ಅಂಗಲಾಚಿದ್ದರು.ಲ

ಈ ಟ್ವೀಟ್​ ಮಾಡಿದ ಕೇವಲ ಮೂರು ಗಂಟೆಗಳ ಬಳಿಕ, ಅಂದರೆ 9 ಗಂಟೆ ಸುಮಾರಿಗೆ ಪಿಯಾ ಸಹೋದರ ಇಹಲೋಕ ತ್ಯಜಿಸಿದರು. ‘ನನ್ನ ಸಹೋದರ ಇನ್ನಿಲ್ಲ’ ಎಂದು ಟ್ವೀಟ್​ ಮಾಡುವ ಮೂಲಕ ಅವರು ಶೋಕ ತೋಡಿಕೊಂಡಿದ್ದಾರೆ. ಸಹಾಯಕ್ಕಾಗಿ ಅವರು ಬಿಜೆಪಿ ಮುಖಂಡ ತಜಿಂದರ್​ ಪಾಲ್​ ಸಿಂಗ್​ ಅವರನ್ನು ಕೂಡ ಬೇಡಿಕೊಂಡಿದ್ದರು. ಆದರೆ ಯಾವುದೇ ಪ್ರಯೋಜನ ಆಗಿಲ್ಲ. ಸಹೋದರನನ್ನು ಕಳೆದುಕೊಂಡಿರುವ ಪಿಯಾಗೆ ಈಗ ನೆಟ್ಟಿಗರು ಸಂತಾಪ ಸೂಚಿಸುತ್ತಿದ್ದಾರೆ.

ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳು ಕೋವಿಡ್​ನಿಂದ ಮೃತರಾದರು. ಹಲವು ಸಿನಿಮಾ, ಟಿವಿ ಶೋ ಹಾಗೂ ವೆಬ್​ ಸೀರಿಸ್​​ಗಳಲ್ಲಿ ಅಭಿನಯಿಸಿದ್ದ ನಟ ಮೇಜರ್​ ಬಿಕ್ರಮ್‌ಜೀತ್ ಕನ್ವರ್‌ಪಾಲ್ ಇತ್ತೀಚೆಗೆ ಕೊವಿಡ್​ಗೆ ಬಲಿಯಾದರು. ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಿರ್ಮಾಪಕರಾದ ರಾಜಶೇಖರ್​, ಡಿ.ಎಸ್​. ಮಂಜುನಾಥ್​ ಮುಂತಾದವರು ಕೂಡ ಈ ಮಹಾಮಾರಿಗೆ ಬಲಿಯಾಗಿರುವುದು ನೋವಿನ ಸಂಗತಿ.

ಇದನ್ನೂ ಓದಿ:

ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊವಿಡ್​ 19 ಸೋಂಕಿನಿಂದ ಸಾವು

ತಲೆ ಬಾಗಿ ಕ್ಷಮೆ ಕೋರುವೆ; ರಾಮು ನಿಧನದ ಬಗ್ಗೆ ಮಾಲಾಶ್ರೀಗೆ ಜಗ್ಗೇಶ್​ ಹೀಗೆ ಹೇಳಿದ್ದೇಕೆ?

Published On - 3:33 pm, Tue, 4 May 21

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ