AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಚುನಾವಣಾ ಫಲಿತಾಂಶದ ಬಗ್ಗೆ ನಟಿ ಪೂನಂ ಅಸಮಾಧಾನ

ಆಂಧ್ರದಲ್ಲಿ ಟಿಡಿಪಿಯ ವಿಜಯ ತೆಲುಗು ಚಿತ್ರರಂಗಕ್ಕೆ ಖುಷಿ ತಂದಿದೆ. ಆದರೆ ನಟಿ ಪೂನಂ ಕೌರ್ ಮಾತ್ರ ಟಿಡಿಪಿ ವಿಜಯದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಆಂಧ್ರ ಮತದಾರರನ್ನು ಪ್ರಶ್ನೆ ಮಾಡಿದ್ದಾರೆ.

ಆಂಧ್ರ ಚುನಾವಣಾ ಫಲಿತಾಂಶದ ಬಗ್ಗೆ ನಟಿ ಪೂನಂ ಅಸಮಾಧಾನ
ಮಂಜುನಾಥ ಸಿ.
|

Updated on: Jun 06, 2024 | 11:26 AM

Share

ಆಂಧ್ರ ಪ್ರದೇಶ (Andhra Pradesh) ವಿಧಾನಸಭಾ ಫಲಿತಾಂಶ ಜೂನ್ 4 ರಂದು ಹೊರಬಿದ್ದಿದೆ. 175 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತ ಪಕ್ಷ ವೈಸಿಪಿ ಗೆದ್ದಿದ್ದು ಕೇವಲ 14 ಕ್ಷೇತ್ರಗಳಲ್ಲಿ. ಟಿಡಿಪಿ, ಜನಸೇನಾ ಹಾಗೂ ಬಿಜೆಪಿ ಮೈತ್ರಿಗೆ 161 ಕ್ಷೇತ್ರಗಳು ಧಕ್ಕಿವೆ. ಆಂಧ್ರದಲ್ಲಿ ವಿಪಕ್ಷವೇ ಇಲ್ಲದಾಗಿದೆ. ಆಂಧ್ರದಲ್ಲಿ ಟಿಡಿಪಿಯ ಜಯ ತೆಲುಗು ಚಿತ್ರರಂಗಕ್ಕೆ ಅಪರಿಮಿತ ಖುಷಿ ತಂದಿದೆ. ಜಗನ್, ಚಿತ್ರರಂಗವನ್ನು ನಿಯಂತ್ರಿಸಲು ಮಾಡಿದ್ದ ಪ್ರಯತ್ನಗಳನ್ನು ಚಿತ್ರರಂಗದ ಪ್ರಮುಖರು ತೀವ್ರವಾಗಿ ವಿರೋಧಿಸಿದ್ದರು. ಹಾಗಾಗಿ ಟಾಲಿವುಡ್​ಗೆ ಟಿಡಿಪಿ ಜಯ ಖುಷಿಯನ್ನೇ ತಂದಿದೆ. ಆದರೆ ನಟಿ ಪೂನಂ ಕೌರ್ ಮಾತ್ರ ಆಂಧ್ರ ಫಲಿತಾಂಶದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಕನ್ನಡದ ‘ಬಂಧು ಬಳಗ’ ಸೇರಿದಂತೆ ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿಯೂ ನಟಿಸಿರುವ ಹೈದರಾಬಾದ್​ನ ಚೆಲುವೆ ಪೂನಂ ಕೌರ್ ಆಂಧ್ರ ಪ್ರದೇಶ ಚುನಾವಣಾ ಫಲಿತಾಂಶದ ಬಗ್ಗೆ ಟ್ವೀಟ್ ಮಾಡಿದ್ದು, ‘ಪೂರ್ತಿ 175 ನ್ನು ಕೊಟ್ಟುಬಿಡಬಹುದಿತ್ತಲ್ಲ. ಹೀಗೆ ಮಾಡಿದರಲ್ಲ ಆಂಧ್ರ ಪ್ರದೇಶದ ಜನರೆ’ ಎಂಬರ್ಥದ ಟ್ವೀಟ್ ಮಾಡಿದ್ದಾರೆ. ಅತಿಯಾದ ಮೆಜಾರಿಟಿಯನ್ನು ಒಂದೇ ಪಕ್ಷಕ್ಕೆ ನೀಡಿರುವ ಬಗ್ಗೆ ಪೂನಂ ಅಸಮಾಧಾನಗೊಂಡಿರುವುದು ಅವರ ಪೋಸ್ಟ್​ನಿಂದ ಅರ್ಥವಾಗುತ್ತಿದೆ.

ಇದನ್ನೂ ಓದಿ:‘ಎನ್​​ಡಿಎ ಬಿಟ್ಟು ಹೋಗುವ ಮಾತೇ ಇಲ್ಲ’; ವದಂತಿಗಳಿಗೆ ತೆರೆ ಎಳೆದ ಪವನ್ ಕಲ್ಯಾಣ್

ಈ ಹಿಂದೆಯೂ ಸಹ ಅವರು ಜಗನ್ ಸರ್ಕಾರದ ಪರವಾಗಿ ಟ್ವೀಟ್​ಗಳನ್ನು ಮಾಡಿದ್ದರು. ‘ಜಗನ್ ನೇಯ್ಗೆ ಕುಟುಂಬಗಳಿಗೆ ನಿಜಕ್ಕೂ ಒಳ್ಳೆಯ ಕೆಲಸವನ್ನು ಕೋವಿಡ್ ಸಮಯದಲ್ಲಿ ಮಾಡಿದ್ದಾರೆ ನಾನೊಬ್ಬ ಹೋರಾಟಗಾರ್ತಿಯಾಗಿ ಇದನ್ನು ಮೆಚ್ಚಿಕೊಳ್ಳುತ್ತೇನೆ’ ಎಂದು ಟ್ವೀಟ್ ಮಾಡಿದ್ದರು. ಅದಾದ ಬಳಿಕ ಟಿಡಿಪಿ ಅವರ ಮಾಡಿದ ಟ್ರೋಲ್​ನಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಗೀತಾಂಜಲಿ ಪರವಾಗಿ ಸರಣಿ ಟ್ವೀಟ್​ಗಳನ್ನು ಮಾಡಿದ್ದರು, ಟಿಡಿಪಿಯ ಕಾರ್ಯಕರ್ತರನ್ನು ಗೂಂಡಾಗಳೆಂದು ಸಹ ಕರೆದಿದ್ದರು.

ಪೂನಂ ಕೌರ್, ನಟಿ ಆಗಿರುವ ಜೊತೆಗೆ ತೆಲಂಗಾಣ ಕಾಂಗ್ರೆಸ್ ಸದಸ್ಯೆ ಸಹ. 2006 ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಪೂನಂ ಕೌರ್, 2022 ರವರೆಗೆ ಸಿನಿಮಾಗಳಲ್ಲಿ ನಟಿಸಿದ್ದಾರೆ. 2022 ರಲ್ಲಿ ‘ನಾತಿಚರಾಮಿ’ ಹೆಸರಿನ ಸಿನಿಮಾದಲ್ಲಿ ಪೂನಂ ನಟಿಸಿದ್ದರು. ಕನ್ನಡದ ‘ಬಂಧು-ಬಳಗ’ ಸಿನಿಮಾನಲ್ಲಿಯೂ ಪೂನಂ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ