AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಕಿಯಾಗಿ ನಟಿಸುವಾಗ ಅನುಭವಿಸಿದ ಕಷ್ಟಗಳ ನೆನಪಿಸಿಕೊಂಡ ಪ್ರೇಮಾ

Actress Prema: ಎವರ್‌ಗ್ರೀನ್ ನಟಿ ಪ್ರೇಮಾ ಅವರು ಇತ್ತೀಚೆಗೆ ತಮ್ಮ ಸುದೀರ್ಘ 23 ವರ್ಷಗಳ ಸಿನಿಮಾ ಬದುಕಿನ ಸಿಹಿ-ಕಹಿ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಯಾವುದೇ ಸಿನಿಮಾ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಕಾಲಿಟ್ಟ ಅವರು, ಸ್ಟಾರ್ ನಟಿಯಾಗಿ ಬೆಳೆದ ಹಾದಿ ಎಷ್ಟೊಂದು ಕಠಿಣವಾಗಿತ್ತು ಎಂಬುದನ್ನ ಮನಬಿಚ್ಚಿ ಮಾತನಾಡಿದ್ದಾರೆ. ಈ ವೇಳೆ ಸಿನಿಮಾ ಒಂದರಲ್ಲಿ ನಟಿಸುವಾಗ ಅನುಭವಿಸಿದ ನೋವು, ಅದರಂದ ಆದ ಹಾನಿಯ ಬಗ್ಗೆಯೂ ಮಾತನಾಡಿದ್ದಾರೆ ನಟಿ.

ನಾಯಕಿಯಾಗಿ ನಟಿಸುವಾಗ ಅನುಭವಿಸಿದ ಕಷ್ಟಗಳ ನೆನಪಿಸಿಕೊಂಡ ಪ್ರೇಮಾ
Prema
ಮಂಜುನಾಥ ಸಿ.
|

Updated on: Feb 27, 2026 | 2:46 PM

Share

ದಕ್ಷಿಣ ಭಾರತದ ಸ್ಟಾರ್ ನಟಿ ಎನಿಸಿಕೊಂಡಿದ್ದ ಪ್ರೇಮಾ (Prema), ನಟನೆಯಿಂದ ದೂರಾಗಿ ಬಳಿಕ 2017 ರಲ್ಲಿ ಮತ್ತೆ ಕಮ್ ಬ್ಯಾಕ್ ಸಹ ಮಾಡಿದರು. ಎವರ್‌ಗ್ರೀನ್ ನಟಿ ಪ್ರೇಮಾ ಅವರು ಇತ್ತೀಚೆಗೆ ತಮ್ಮ ಸುದೀರ್ಘ 23 ವರ್ಷಗಳ ಸಿನಿಮಾ ಬದುಕಿನ ಸಿಹಿ-ಕಹಿ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಯಾವುದೇ ಸಿನಿಮಾ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಕಾಲಿಟ್ಟ ಅವರು, ಸ್ಟಾರ್ ನಟಿಯಾಗಿ ಬೆಳೆದ ಹಾದಿ ಎಷ್ಟೊಂದು ಕಠಿಣವಾಗಿತ್ತು ಎಂಬುದನ್ನ ಮನಬಿಚ್ಚಿ ಮಾತನಾಡಿದ್ದಾರೆ. ಈ ವೇಳೆ ಸಿನಿಮಾ ಒಂದರಲ್ಲಿ ನಟಿಸುವಾಗ ಅನುಭವಿಸಿದ ನೋವು, ಅದರಂದ ಆದ ಹಾನಿಯ ಬಗ್ಗೆಯೂ ಮಾತನಾಡಿದ್ದಾರೆ ನಟಿ.

ಪ್ರೇಮಾ ಅವರಿಗೆ ಮೊದಲಿನಿಂದಲೂ ಗಗನಸಖಿ ಆಗಬೇಕೆಂಬ ಹಂಬಲ ಇತ್ತಂತೆ. ಆದರೆ ತಾಯಿಯ ಪ್ರೋತ್ಸಾಹದಿಂದಾಗಿ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಉಪೇಂದ್ರ ನಿರ್ದೇಶನದ ‘ಓಂ’ ಸಿನಿಮಾ ಅವರ ವೃತ್ತಿಜೀವನಕ್ಕೆ ದೊಡ್ಡ ತಿರುವು ನೀಡಿತು. ಪ್ರೇಮ ನಟಿಸಿದ ಎರಡನೇ ಸಿನಿಮಾ ಅದು. ಆ ಚಿತ್ರದ ರಿಯಲಿಸ್ಟಿಕ್ ನಟನೆಗಾಗಿ ಅವರು ಗಾಜಿನ ಚೂರುಗಳು ಮತ್ತು ಬೆಂಕಿಯ ನಡುವೆ ಕೆಲಸ ಮಾಡಬೇಕಾಗಿದ್ದ ಕಠಿಣ ಸಂದರ್ಭಗಳನ್ನು ಅವರು ನೆನಪಿಸಿಕೊಂಡಿದ್ದಾರೆ.

ತೆಲುಗಿನಲ್ಲಿ ‘ಧರ್ಮಚಕ್ರಂ’ ಮತ್ತು ‘ದೇವಿ’ಯಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಪ್ರೇಮಾ ಅವರಿಗೆ ಆರಂಭದಲ್ಲಿ ಭಾಷೆಯ ಸಮಸ್ಯೆ ಎದುರಾಗಿತ್ತಂತೆ. ಖ್ಯಾತ ನಿರ್ದೇಶಕ ಕೋಡಿ ರಾಮಕೃಷ್ಣ ಅವರು ತಮಗೆ ತೆಲುಗು ಕಲಿಸಿಕೊಟ್ಟರು ಎಂದು ಪ್ರೇಮ ನೆನಪು ಮಾಡಿಕೊಂಡಿದ್ದಾರೆ. ಆಗ ಇಂದಿನಂತೆ ಕ್ಯಾರವಾನ್ ಸೌಲಭ್ಯಗಳಿರಲಿಲ್ಲ, ಸೆಟ್‌ನಲ್ಲಿ ಎಲ್ಲರೂ ಒಂದೇ ಕೋಣೆಯಲ್ಲಿ ಕುಳಿತು ಕೆಲಸ ಮಾಡಬೇಕಿತ್ತು ಎಂದು ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ:‘ಕವಳ’ ಸಿನಿಮಾ ಮುಹೂರ್ತ ಶುಭ ಹಾರೈಸಿದ ನಟ ರವಿಚಂದ್ರನ್

ಮಹಿಳಾ ಪ್ರಧಾನ ಚಿತ್ರಗಳಲ್ಲಿ ಮೈಲಿಗಲ್ಲು ಸೃಷ್ಟಿಸಿದ ‘ದೇವಿ’ ಚಿತ್ರದ ಪಾತ್ರಕ್ಕಾಗಿ ಅವರು ವಿಶೇಷ ಲೆನ್ಸ್‌ಗಳನ್ನು ಧರಿಸಬೇಕಾಗಿತ್ತು. ಇದರ ಪರಿಣಾಮವಾಗಿ ‘ದೇವಿ’ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಅವರಿಗೆ ತೀವ್ರವಾದ ಕಣ್ಣಿನ ಸೋಂಕು ಕಾಣಿಸಿಕೊಂಡಿತ್ತು. ನಟನೆಯ ಮೇಲಿನ ಅತಿಯಾದ ಪ್ರೀತಿಯಿಂದ ಆ ಕಷ್ಟವನ್ನೂ ಅವರು ಮೆಟ್ಟಿ ನಿಂತಿದ್ದಾಗಿ ಪ್ರೇಮ ಹೇಳಿಕೊಂಡಿದ್ದಾರೆ. ತೆಲುಗಿನ ವೆಂಕಟೇಶ್, ಮೋಹನ್ ಬಾಬು ಮತ್ತು ಜಗಪತಿ ಬಾಬು ಅವರಂತಹ ದಿಗ್ಗಜ ನಟರ ಜೊತೆ ಕೆಲಸ ಮಾಡಿದ ಅನುಭವ ಹಂಚಿಕೊಂಡ ಪ್ರೇಮಾ, ಮೋಹನ್ ಬಾಬು ಮತ್ತು ವಿಷ್ಣುವರ್ಧನ್ ಅವರ ಶಿಸ್ತು ಮತ್ತು ಸಮಯಪಾಲನೆ ತಮ್ಮ ಮೇಲೆ ದೊಡ್ಡ ಪ್ರಭಾವ ಬೀರಿದೆ ಎಂದು ತಿಳಿಸಿದ್ದಾರೆ.

1995 ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಪ್ರೇಮ, 2009ರ ವರೆಗೆ ಕನ್ನಡ, ತೆಲುಗು ಸಿನಿಮಾಗಳಲ್ಲಿ ಸಕ್ರಿಯರಾಗಿದ್ದರು. ಅದಾದ ಬಳಿಕ ಚಿತ್ರರಂಗದಿಂದ ದೂರಾದ ಪ್ರೇಮ, ವೈಯಕ್ತಿಕ ಜೀವನದಲ್ಲಿ ಬ್ಯುಸಿ ಆದರು. ಆದರೆ ವೈಯಕ್ತಿಕ ಜೀವನದಲ್ಲಿ ಅನುಭವಿಸಿದ ಕೆಲವು ಏರು-ಪೇರುಗಳ ಬಳಿಕ 2017 ರಲ್ಲಿ ಮತ್ತೆ ಚಿತ್ರರಗಕ್ಕೆ ರೀ ಎಂಟ್ರಿ ಕೊಟ್ಟರು. ಈಗ ಅಲ್ಲೊಂದು-ಇಲ್ಲೊಂದು ಕನ್ನಡ ಮತ್ತು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ
ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು
ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು
ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ!
ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ!
ರಸ್ತೆ ದಾಟುತ್ತಿದ್ದ ಹಸುವಿಗೆ ಗುದ್ದಿದ ಬೈಕ್
ರಸ್ತೆ ದಾಟುತ್ತಿದ್ದ ಹಸುವಿಗೆ ಗುದ್ದಿದ ಬೈಕ್