AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyamani: ‘ಪ್ರಿಯಾಮಣಿ ಮತ್ತು ಮುಸ್ತಫಾ ರಾಜ್ ಮದುವೆ ಅಸಿಂಧು’; ಮುಸ್ತಫಾ ರಾಜ್ ಮೊದಲ ಪತ್ನಿ ಆರೋಪ

ಪ್ರಿಯಾಮಣಿ ಮತ್ತು ಅವರ ಪತಿ ಮುಸ್ತಾಫಾ ರಾಜ್ ಅವರ ಮದುವೆ ಕಾನೂನಿನ ಪ್ರಕಾರ ಅಸಿಂಧು ಎಂದು ಮುಸ್ತಫಾರ ಮೊದಲ ಪತ್ನಿ ಆಯೆಷಾ ಆರೋಪಿಸಿದ್ದಾರೆ. ಮುಸ್ತಾಫಾ ಮತ್ತು ತಾನು ಅಧಿಕೃತವಾಗಿ ವಿಚ್ಛೇದನವನ್ನು ಪಡೆದಿಲ್ಲ ಎಂದು ಈ ವೇಳೆ ಅವರು ಹೇಳಿಕೆ ನೀಡಿದ್ದಾರೆ.

Priyamani: ‘ಪ್ರಿಯಾಮಣಿ ಮತ್ತು ಮುಸ್ತಫಾ ರಾಜ್ ಮದುವೆ ಅಸಿಂಧು’; ಮುಸ್ತಫಾ ರಾಜ್ ಮೊದಲ ಪತ್ನಿ ಆರೋಪ
ಪ್ರಿಯಾಮಣಿ ಮತ್ತು ಮುಸ್ತಫಾ ರಾಜ್ (ಫೈಲ್ ಚಿತ್ರ)
Follow us
TV9 Web
| Updated By: Digi Tech Desk

Updated on:Jul 22, 2021 | 12:03 PM

ಫ್ಯಾಮಿಲಿ ಮ್ಯಾನ್ ವೆಬ್  ಸರಣಿಯಿಂದ ದೇಶಕ್ಕೇ ಪರಿಚಿತರಾಗಿರುವ, ಕನ್ನಡದ ಖ್ಯಾತ ನಟಿ ಪ್ರಿಯಾಮಣಿ ಅವರ ದಾಂಪತ್ಯದ ಕುರಿತು ಅವರ ಪತಿಯ ಮೊದಲ ಪತ್ನಿ ತಗಾದೆ ತೆಗೆದಿದ್ದಾರೆ. ನಟಿ ಪ್ರಿಯಾಮಣಿ ಅವರ ಪತಿ ಮುಸ್ತಫಾ ರಾಜ್ ಅವರು ತಮ್ಮ ಮೊದಲ ಪತ್ನಿ ಆಯೆಷಾ ಅವರಿಂದ 2013ರಲ್ಲಿ ದೂರವಾಗಿದ್ದರು. ನಂತರ 2017ರಲ್ಲಿ ಪ್ರಿಯಾಮಣಿ ಅವರನ್ನು ವಿವಾಹವಾದರು. ಮುಸ್ತಫಾ ಮತ್ತು ಆಯೆಷಾ ಅವರಿಗೆ ಇಬ್ಬರು ಮಕ್ಕಳಿದ್ಧಾರೆ. ಈಗ ಮುಸ್ತಫಾ ವಿರುದ್ಧ ಆಯೆಷಾ ಆರೋಪ ಮಾಡಿದ್ದು, ಕಾನೂನಿನ ಪ್ರಕಾರ ನಾವಿನ್ನೂ ಬೇರ್ಪಟ್ಟಿಲ್ಲ. ನಾನೀಗಲೂ ಅವರ ಪತ್ನಿ. ಆದ್ದರಿಂದ ಪ್ರಿಯಾಮಣಿ ಮತ್ತು ಮುಸ್ತಫಾ ಅವರ ಮದುವೆ ಅಸಿಂಧು ಎಂದಿದ್ದಾರೆ. ಆದರೆ, ಮುಸ್ತಫಾ ರಾಜ್ ಈ ಆರೋಪವನ್ನು ನಿರಾಕರಿಸಿದ್ದಾರೆ.

ಲೀಡಿಂಗ್ ಡೈಲಿಗೆ ಮುಸ್ತಫಾ ರಾಜ್ ನೀಡಿರುವ ಪ್ರತಿಕ್ರಿಯೆಯಲ್ಲಿ ಆಯೆಷಾ ಅವರ ಆರೋಪವನ್ನು ಸಾರಾಸಗಟಾಗಿ ತಳ್ಳಿ ಹಾಕಿದ್ದಾರೆ. ನನ್ನ ವಿರುದ್ಧ ಸುಖಾಸುಮ್ಮನೆ ಆರೋಪಿಸಲಾಗುತ್ತಿದೆ. ನಾನು ಆಯೆಷಾ ಅವರಿಗೆ ಮಕ್ಕಳನ್ನು ಬೆಳೆಸುವುದಕ್ಕಾಗಿ ಹಣವನ್ನು ನೀಡುತ್ತಿದ್ದೇನೆ. ಅದಕ್ಕಿಂತಲೂ ಹೆಚ್ಚು ಹಣವನ್ನು ಪಡೆಯುವುದಕ್ಕಾಗಿ ಇಂತಹ ಆರೋಪಗಳನ್ನು ಮಾಡಲಾಗುತ್ತಿದೆ ಎಂದಿದ್ದಾರೆ. ಆಯೆಷಾ ಅವರು ಆರೋಪಿಸಿರುವಂತೆ ಕೌಟುಂಬಿಕ ದೌರ್ಜನ್ಯ ನಡೆದಿರುವುದೇ ಹೌದಾದರೆ ಇಷ್ಟು ಸಮಯ ಅವರು ಏಕೆ ಸುಮ್ಮನಿದ್ದರು ಎಂದು ಮುಸ್ತಫಾ ಮರು ಪ್ರಶ್ನಿಸಿದ್ದಾರೆ.

ಆಯೆಷಾ  ಅವರ ಪ್ರಕಾರ, ಮುಸ್ತಫಾ ಅವರು ಈಗಲೂ ಅವರ ಪತಿ. ಆದ್ದರಿಂದಲೇ ಕಾನೂನಿನ ಪ್ರಕಾರ ಮುಸ್ತಫಾ- ಪ್ರಿಯಾಮಣಿ ಮದುವೆ ಅಸಿಂಧುವಾಗಿದೆ. ಪ್ರಿಯಾಮಣಿ ಅವರನ್ನು ಮದುವೆಯಾಗುವುದಕ್ಕೂ ಮೊದಲು ಅವರು ವಿಚ್ಛೇದನಕ್ಕೂ ಅರ್ಜಿ ಸಲ್ಲಿಸಿರಲಿಲ್ಲವಂತೆ. ನ್ಯಾಯಾಲಯಕ್ಕೆ ತಾನು ಅವಿವಾಹಿತ ಎಂದು ತಿಳಿಸಿ ಪ್ರಿಯಾಮಣಿ ಅವರನ್ನು ಮುಸ್ತಫಾ ಮದುವೆಯಾಗಿದ್ದಾರೆ ಎಂದು ಆಯೆಷಾ ಅವರು ಆರೋಪಿಸಿದ್ದಾರೆ.

ಇದುವರೆಗೆ ಈ ವಿಷಯವನ್ನು ಏಕೆ ಪ್ರಸ್ತಾಪಿಸಿರಲಿಲ್ಲ ಎಂಬ ಮುಸ್ತಫಾ ಅವರ ಪ್ರಶ್ನೆಗೆ ಉತ್ತರಿಸಿರುವ ಆಯೆಷಾ, “ಎರಡು ಮಕ್ಕಳ ತಾಯಿಯಾಗಿ ನಾನೇನು ಮಾಡಲಿ ಹೇಳಿ? ಸಾತ್ವಿಕವಾದ ದಾರಿಯಿಂದ ನಾನು ಇದನ್ನು ಸರಿದೂಗಿಸಲು ಪ್ರಯತ್ನಪಟ್ಟೆ. ಆದರೆ ಅವರು(ಮುಸ್ತಫಾ) ನನ್ನ ವಿರುದ್ಧ ತಿರುಗಿಬಿದ್ದಾಗ  ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವುದು ನನಗೀಗ ಅನಿವಾರ್ಯವಾಗಿದೆ” ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಪ್ರಿಯಾಮಣಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪತಿ ಮುಸ್ತಫಾ ರಾಜ್ ಅವರ ಬದುಕಿನಲ್ಲಿ ಪ್ರವೇಶವಾದ ನಂತರ ಬದುಕು ಹೇಗೆ ಬದಲಾಯಿತು ಎಂದು ಹೇಳಿಕೊಂಡಿದ್ದರು. “ಅವರು(ಮುಸ್ತಫಾ) ನನಗೆ ಅದೃಷ್ಟದ ರೇಖೆ ಇದ್ದಂತೆ. ಅವರು ನನ್ನ ಬದುಕಿಗೆ ಬಂದ ನಂತರ ನಾನು ಮತ್ತಷ್ಟು ಬ್ಯುಸಿಯಾದೆ. ನನ್ನೆಲ್ಲಾ ಕೆಲಸಗಳಿಗೆ ಸದಾ ಬೆಂಬಲ ನೀಡುವ ಮುಸ್ತಫಾ ಅವರನ್ನು ನನಗೆ ನೀಡಿದ್ದಕ್ಕಾಗಿ ನಾನು ದೇವರಿಗೆ ಧನ್ಯವಾದ ತಿಳಿಸುತ್ತೇನೆ” ಎಂದು ಪ್ರಿಯಾಮಣಿ ಹೇಳಿದ್ದರು.

ಇದನ್ನೂ ಓದಿ: ‘ಕರಿಯ 2’ ನಿರ್ದೇಶಕರ ಜೊತೆ ‘ಬಾಡಿ ಗಾಡ್’ ಕಥೆ ಹೇಳಲು ಬಂದ ‘ಮಠ’ ಗುರುಪ್ರಸಾದ್​​

ಇದನ್ನೂ ಓದಿ: Rishab Shetty: ತೆಲುಗಿನಲ್ಲೂ ಮಿಂಚಲು ತಯಾರಾಗಿದ್ದಾನೆ ಕನ್ನಡದ ‘ಹೀರೋ’!

(Actress Priyamani and Mustafa Raj marriage is Invalid says Mustafa s first wife Ayesha)

Published On - 11:40 am, Thu, 22 July 21

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ