AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ಚಿತಾಗಾರದ ಸಿಬ್ಬಂದಿಗೆ ಆಸರೆಯಾದ ರಾಗಿಣಿ ದ್ವಿವೇದಿ; ನಟಿ ಕೆಲಸಕ್ಕೆ ಮೆಚ್ಚುಗೆ

ಕೊರೊನಾ ವೈರಸ್​ ಎರಡನೇ ಅಲೆ ದೊಡ್ಡ ಮಟ್ಟದಲ್ಲಿ ಹಬ್ಬಿದೆ. ಇದರಿಂದ ಸಾವಿನ ಸಂಖ್ಯೆ ಕೂಡ ಹೆಚ್ಚಿದೆ. ಹೀಗಾಗಿ, ಚಿತಾಗಾರದಲ್ಲಿ ಕೆಲಸ ಮಾಡುವವರು ದಿನವಿಡೀ ಶ್ರಮಿಸುತ್ತಿದ್ದಾರೆ. ಇದು ರಾಗಿಣಿ ಗಮನಕ್ಕೆ ಬಂದಿದೆ.

Ragini Dwivedi: ಚಿತಾಗಾರದ ಸಿಬ್ಬಂದಿಗೆ ಆಸರೆಯಾದ ರಾಗಿಣಿ ದ್ವಿವೇದಿ; ನಟಿ ಕೆಲಸಕ್ಕೆ ಮೆಚ್ಚುಗೆ
ಚಿತಾಗಾರದಲ್ಲಿ ಸಹಾಯ ಮಾಡುತ್ತಿರುವ ರಾಗಿಣಿ
ರಾಜೇಶ್ ದುಗ್ಗುಮನೆ
|

Updated on:May 07, 2021 | 3:31 PM

Share

ಕೊರೊನಾ ವೈರಸ್​ ಮೊದಲನೇ ಅಲೆ ಕಾಣಿಸಿಕೊಂಡಾಗ ನಟಿ ರಾಗಿಣಿ ದ್ವಿವೇದಿ ಬಡವರಿಗೆ ಊಟ ಹಂಚುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದರು. ಈಗ ಕೊರೊನಾ ಎರಡನೇ ಅಲೆ ಕಾಣಿಸಿಕೊಂಡಿದೆ. ಈಗಲೂ ಅವರು ಸುಮ್ಮನೆ ಕೂತಿಲ್ಲ. ಮನೆಯಿಂದ ಹೊರಬಂದು ಎಲ್ಲರಿಗೂ ಸಹಾಯ ಮಾಡುತ್ತಿದ್ದಾರೆ.

ರಾಗಿಣಿ ಟ್ರಸ್ಟ್​ಗೆ ಆರ್​.ಡಿ. ವೆಲ್​ಫೇರ್​ ಎನ್ನುವ ಹೆಸರಿತ್ತು. ಇದನ್ನು ಅವರು ಜೆನ್​​ಟೆಕ್ಸ್ಟ್​ ಎಂದು ಮರು ನಾಮಕರಣ ಮಾಡಿದ್ದಾರೆ. ಈ ಟ್ರಸ್ಟ್​ ಅಡಿಯಲ್ಲಿ ರಾಗಿಣಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈಗ ರಾಗಿಣಿ ಚಿತಾಗಾರವೊಂದಕ್ಕೆ ತೆರಳಿ ಅಲ್ಲಿಯ ಸಿಬ್ಬಂದಿಗೆ ಊಟ ಹಂಚುವ ಕೆಲಸ ಮಾಡಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ದೊಡ್ಡ ಮಟ್ಟದಲ್ಲಿ ಹಬ್ಬಿದೆ. ಇದರಿಂದ ಸಾವಿನ ಸಂಖ್ಯೆ ಕೂಡ ಹೆಚ್ಚಿದೆ. ಹೀಗಾಗಿ, ಚಿತಾಗಾರದಲ್ಲಿ ಕೆಲಸ ಮಾಡುವವರು ದಿನವಿಡೀ ಶ್ರಮಿಸುತ್ತಿದ್ದಾರೆ. ಇದು ರಾಗಿಣಿ ಗಮನಕ್ಕೆ ಬಂದಿದೆ. ಇಂದು ಅವರು ಬೆಂಗಳೂರಿನ ಚಿತಾಗಾರವೊಂದಕ್ಕೆ ತೆರಳಿ ಊಟ ಹಂಚುವ ಕೆಲಸ ಮಾಡಿದ್ದಾರೆ. ಅಲ್ಲದೆ, ರೇಷನ್​ ಕೂಡ ನೀಡಿದ್ದಾರೆ.

ಅಲ್ಲಿಗೆ ಭೇಟಿ ನೀಡಿ ಊಟ ಹಂಚಿರುವ ಬಗ್ಗೆ ರಾಗಿಣಿ ಸಂತಸ ವ್ಯಕ್ತಪಡಿಸಿದ್ದಾರೆ. ಚಿತಾಗಾರದಲ್ಲಿ ಕೆಲಸ ಮಾಡುವ ಅನೇಕರಿಗೆ ಹೊರ ಜಗತ್ತಿನ ಪರಿಚಯವೇ ಇಲ್ಲ. ಅವರಿಗೆ ಊಟ ನೀಡಿದಾಗ ಸಂತೋಷವಾಗುತ್ತದೆ ಎಂದು ರಾಗಿಣಿ ಹೇಳಿದ್ದಾರೆ. ಇತ್ತೀಚೆಗೆ ರಾಗಿಣಿ ಬೆಂಗಳೂರು ನಗರದಲ್ಲಿರುವ ಪೊಲೀಸರಿಗೆ ಊಟ ಹಂಚಿದ್ದರು.

ರಾಗಿಣಿ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿಯೂ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಗಿಣಿ ಕೆಲಸವನ್ನು ನೋಡಿ ಅನೇಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲೂ ರಾಗಿಣಿ ತಮ್ಮ ಕಾರ್ಯವನ್ನು ಮುಂದುವರಿಸುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಯುಗಾದಿ ಹಬ್ಬದಲ್ಲೂ ರಾಗಿಣಿ, ಸಂಜನಾಗೆ ತಪ್ಪಲಿಲ್ಲ ಕಣ್ಣೀರು! ಕಿರುತೆರೆಗೆ ಬಂದ ನಟಿಯರು

ತುಪ್ಪದ ಬೆಡಗಿಗೆ ಖುಲಾಯಿಸಿದ ಅದೃಷ್ಟ; ಖಡಕ್​ ತನಿಖಾಧಿಕಾರಿಯಾಗಿ ಬರಲು ಸಿದ್ಧರಾಗುತ್ತಿದ್ದಾರೆ ರಾಗಿಣಿ ದ್ವಿವೇದಿ

Published On - 7:07 pm, Wed, 5 May 21

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ