ಪತಿಗೆ ವಿಚ್ಛೇದನ ನೀಡಿ, 14 ವರ್ಷದ ಬಳಿಕ ಚಿತ್ರರಂಗಕ್ಕೆ ಮರಳಲಿರುವ ರಂಭಾ

ನಟಿ ರಂಭಾ ಒಂದು ಕಾಲದ ಸ್ಟಾರ್ ನಾಯಕಿ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ಭೋಜ್​ಪುರಿ, ಬೆಂಗಾಲಿ, ಇಂಗ್ಲೀಷ್ ಸಿನಿಮಾಗಳಲ್ಲಿ ನಟಿಸಿದ್ದರು. 2010 ರ ಬಳಿಕ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ. ಆದರೆ ಈಗ 14 ವರ್ಷದ ಬಳಿಕ ರಂಭಾ ಕಮ್​ಬ್ಯಾಕ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಪತಿಗೆ ವಿಚ್ಛೇದನ ನೀಡಿ, 14 ವರ್ಷದ ಬಳಿಕ ಚಿತ್ರರಂಗಕ್ಕೆ ಮರಳಲಿರುವ ರಂಭಾ
Follow us
|

Updated on: Oct 25, 2024 | 2:46 PM

ಭಾರತ ಚಿತ್ರರಂಗದ ಕೆಲವು ಐಕಾನಿಕ್ ನಟಿಯರಲ್ಲಿ ರಂಭಾ ಸಹ ಒಬ್ಬರು. 90-2000 ದಶಕದಲ್ಲಿ ಹಲವು ಭಾಷೆಗಳಲ್ಲಿ ನಟಿಸಿ ಮೋಡಿ ಮಾಡಿದ್ದರು ರಂಭಾ. ತಮ್ಮ ಅತ್ಯುತ್ತಮ ಸೌಂದರ್ಯ ಹಾಗೂ ನಟನಾ ಪ್ರತಿಭೆಯಿಂದ ಹಲವು ಚಿತ್ರರಂಗಗಳ ಬೇಡಿಕೆಯ ನಟಿಯಾಗಿದ್ದರು. ಅತ್ಯಂತ ಕಡಿಮೆ ವಯಸ್ಸಿಗೆ ನಟಿಯಾದ ರಂಭಾ ಸುಮಾರು ಮೂರು ದಶಕಗಳ ಕಾಲ ಚಿತ್ರರಂಗದಲ್ಲಿ ಸ್ಟಾರ್ ಆಗಿ ಮೆರೆದರು. ಆದರೆ ಮದುವೆಯಾದ ಬಳಿಕ ನಟನೆಗೆ ವಿದಾಯ ಹೇಳಿದರು. ಆದರೆ ಈಗ ಹೊರಬಿದ್ದಿರುವ ಸುದ್ದಿಯಂತೆ ರಂಭಾ, ಪತಿಗೆ ವಿಚ್ಛೇದನ ನೀಡಲು ಮುಂದಾಗಿದ್ದು ಚಿತ್ರರಂಗಕ್ಕೆ ಸಹ ಮರಳಲಿದ್ದಾರಂತೆ.

2010 ರಲ್ಲಿ ನಟಿ ರಂಭಾ, ಶ್ರೀಲಂಕಾ ಮೂಲದ ಕೆನಡಾದಲ್ಲಿ ನೆಲೆಸಿರುವ ಉದ್ಯಮಿಯನ್ನು ವಿವಾಹವಾದರು. ರಂಭಾಗೆ ಮೂರು ಮಂದಿ ಮಕ್ಕಳು ಸಹ ಇದ್ದಾರೆ. ರಂಭಾ, ಪತಿಯೊಂದಿಗೆ ಟೊರಂಟೊದಲ್ಲಿ ನೆಲೆಸಿದ್ದಾರೆ. ಆದರೆ ಇತ್ತೀಚೆಗೆ ರಂಭಾ ದಾಂಪತ್ಯದಲ್ಲಿ ವಿರಸ ಮೂಡಿದ್ದು ರಂಭಾ, ತಮ್ಮ ಪತಿಗೆ ವಿಚ್ಛೇದನ ನೀಡಿ ಭಾರತಕ್ಕೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಮಾತ್ರವಲ್ಲದೆ ರಂಭಾ ಮತ್ತೆ ಸಿನಿಮಾ ನಟನೆ ಆರಂಭಿಸಲಾಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಕೆನಡಾದಲ್ಲಿ ನಟಿ ರಂಭಾನ ಭೇಟಿ ಮಾಡಿದ ದಳಪತಿ ವಿಜಯ್

ಈ ಹಿಂದೆ ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾತನಾಡಿದ್ದ ರಂಭಾ, ‘ದಾಂಪತ್ಯದಲ್ಲಿ ವಿರಸ ಇತ್ತು, ಅದು ಸಣ್ಣ ಭಿನ್ನಾಭಿಪ್ರಾಯ ಮಾತ್ರ, ಅದು ಎಲ್ಲ ಕುಟುಂಬಗಳಲ್ಲಿಯೂ ಇರುವಂಥಹದ್ದೇ. ಕೆಲವರ ಬುದ್ಧಿವಾದದಿಂದಾಗಿ ಎಲ್ಲವೂ ಸರಿಯಾಗಿದೆ’ ಎಂದಿದ್ದರು. ಆದರೆ ಕೆಲವು ಮಾಧ್ಯಮಗಳ ವರದಿಯಂತೆ ರಂಭಾ ಪತಿಗೆ ವಿಚ್ಛೇದನ ನೀಡುತ್ತಿದ್ದು, ಮಕ್ಕಳೊಂದಿಗೆ ಭಾರತಕ್ಕೆ ಮರಳಲಿದ್ದಾರಂತೆ.

2010 ರಲ್ಲಿ ವಿವಾಹವಾದ ರಂಭಾ ಆ ನಂತರ ಸಿನಿಮಾಗಳಲ್ಲಿ ನಟಿಸಿಲ್ಲ. ಆದರೆ ಟಿವಿ ಶೋಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇದ್ದರು. ಕೆಲವು ತಮಿಳು ಹಾಗೂ ತೆಲುಗು ಚಾನೆಲ್​ಗಳ ರಿಯಾಲಿಟಿ ಶೋಗಳಿಗೆ ಜಡ್ಜ್ ಆಗಿ ರಂಭಾ ಕೆಲಸ ಮಾಡಿದ್ದಾರೆ. ಕೆಲವು ಶೋಗಳ ನಿರೂಪಣೆಯನ್ನೂ ಸಹ ರಂಭಾ ಮಾಡಿದ್ದರು. ಕೆಲವು ಸಿನಿಮಾ ಸಂಬಂಧಿ ಪಾರ್ಟಿಗಳು, ಕಾರ್ಯಕ್ರಮಗಳಲ್ಲಿಯೂ ಸಹ ರಂಭಾ ಕಾಣಿಸಿಕೊಂಡಿದ್ದರು. ಆದರೆ ಸಿನಿಮಾ ನಟನೆಯಿಂದ ಮಾತ್ರ ದೂರವೇ ಇದ್ದರು. ಆದರೆ ಈಗ ಮತ್ತೆ ಸಿನಿಮಾಗಳಲ್ಲಿ ನಟಿಸುವ ಮನಸ್ಸು ಮಾಡಿದ್ದಾರೆ ರಂಭಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾಸನಾಂಬೆಯ ದರ್ಶನಕ್ಕೆ ಬೆಳಗ್ಗೆ 4 ಗಂಟೆಯಿಂದ ಸರತಿ ಸಾಲಲ್ಲಿ ಭಕ್ತರ ದಂಡು
ಹಾಸನಾಂಬೆಯ ದರ್ಶನಕ್ಕೆ ಬೆಳಗ್ಗೆ 4 ಗಂಟೆಯಿಂದ ಸರತಿ ಸಾಲಲ್ಲಿ ಭಕ್ತರ ದಂಡು
ಗೋಕಾಕ್: ಭಾರಿ ಮಳೆಗೆ ತುಂಬಿ ಹರಿದ ಹಳ್ಳ ದಾಟಲು ಜೆಸಿಬಿ ಏರಿದ ಶಾಲೆ ಮಕ್ಕಳು
ಗೋಕಾಕ್: ಭಾರಿ ಮಳೆಗೆ ತುಂಬಿ ಹರಿದ ಹಳ್ಳ ದಾಟಲು ಜೆಸಿಬಿ ಏರಿದ ಶಾಲೆ ಮಕ್ಕಳು
KSRTC ಬಸ್​ನಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
KSRTC ಬಸ್​ನಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
ಕಿವೀಸ್ ಬ್ಯಾಟರ್ ಎದುರು ಹಿಂದಿಯಲ್ಲಿ ಮಾತನಾಡಿ ಪೇಚಿಗೆ ಸಿಲುಕಿದ ಪಂತ್
ಕಿವೀಸ್ ಬ್ಯಾಟರ್ ಎದುರು ಹಿಂದಿಯಲ್ಲಿ ಮಾತನಾಡಿ ಪೇಚಿಗೆ ಸಿಲುಕಿದ ಪಂತ್
ಮುಡಾ ಪ್ರಕರಣ; ಕೋರ್ಟ್ ಆದೇಶ ಮರುಪರಿಶೀಲನೆ ಕೋರುವ ಅವಕಾಶವಿದೆ: ಪರಮೇಶ್ವರ್
ಮುಡಾ ಪ್ರಕರಣ; ಕೋರ್ಟ್ ಆದೇಶ ಮರುಪರಿಶೀಲನೆ ಕೋರುವ ಅವಕಾಶವಿದೆ: ಪರಮೇಶ್ವರ್
1 ರನ್​ಗೆ ಸುಸ್ತಾದ ಕೊಹ್ಲಿ; ಹಳೆಯ ದೌರ್ಬಲ್ಯಕ್ಕೆ ಮತ್ತೊಮ್ಮೆ ಬಲಿ
1 ರನ್​ಗೆ ಸುಸ್ತಾದ ಕೊಹ್ಲಿ; ಹಳೆಯ ದೌರ್ಬಲ್ಯಕ್ಕೆ ಮತ್ತೊಮ್ಮೆ ಬಲಿ
ಫೂಜೆಯಲ್ಲಿ ನಿಖಿಲ್ ಪತ್ನಿ ರೇವತಿ ಮತ್ತು ಹೆಚ್ ಡಿ ಕುಮಾರಸ್ವಾಮಿ ಸಹ ಭಾಗಿ
ಫೂಜೆಯಲ್ಲಿ ನಿಖಿಲ್ ಪತ್ನಿ ರೇವತಿ ಮತ್ತು ಹೆಚ್ ಡಿ ಕುಮಾರಸ್ವಾಮಿ ಸಹ ಭಾಗಿ
ಹಾಸನಾಂಬೆ ದರ್ಶನಕ್ಕೆ ಹೇಗಿದೆ ವ್ಯವಸ್ಥೆ? ಭಕ್ತರು ಹೇಳೋದೇನು ನೋಡಿ
ಹಾಸನಾಂಬೆ ದರ್ಶನಕ್ಕೆ ಹೇಗಿದೆ ವ್ಯವಸ್ಥೆ? ಭಕ್ತರು ಹೇಳೋದೇನು ನೋಡಿ
ಬಿಜೆಪಿ ಪ್ರಬಲ ಪ್ರತಿಸ್ಪರ್ಧಿ ಎಂದಿದ್ದ ನನಗೆ ಟಿಕೆಟ್ ವಂಚಿಸಲಾಗಿದೆ: ಖಾದ್ರಿ
ಬಿಜೆಪಿ ಪ್ರಬಲ ಪ್ರತಿಸ್ಪರ್ಧಿ ಎಂದಿದ್ದ ನನಗೆ ಟಿಕೆಟ್ ವಂಚಿಸಲಾಗಿದೆ: ಖಾದ್ರಿ
ಮಂಗಳೂರಿನಲ್ಲಿ ನಡುರಾತ್ರಿ ರೌಡಿಶೀಟರ್​ಗಳ ತಲ್ವಾರ್ ವಾರ್
ಮಂಗಳೂರಿನಲ್ಲಿ ನಡುರಾತ್ರಿ ರೌಡಿಶೀಟರ್​ಗಳ ತಲ್ವಾರ್ ವಾರ್