AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಅವರಿಗೆ ‘ಆರ್ಕೆಸ್ಟ್ರಾ ಮೈಸೂರು’ ಚಿತ್ರದ ಟ್ರೈಲರ್ ನೋಡಿ ಎಂದ ನಟಿ ರಮ್ಯಾ..!

Orchestra Mysuru Trailer: ಮೈಸೂರಿನ ಆರ್ಕೆಸ್ಟ್ರಾ ಸಂಸ್ಕೃತಿಯನ್ನು ಇಟ್ಟುಕೊಂಡು ಕಥೆ ಹೆಣೆದಿರುವ ಸುನೀಲ್ ಟ್ರೈಲರ್ ಮೂಲಕವೇ ಮೋಡಿ ಮಾಡುವ ಸೂಚನೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರಿಗೆ 'ಆರ್ಕೆಸ್ಟ್ರಾ ಮೈಸೂರು' ಚಿತ್ರದ ಟ್ರೈಲರ್ ನೋಡಿ ಎಂದ ನಟಿ ರಮ್ಯಾ..!
Ramya - P M Modi
TV9 Web
| Edited By: |

Updated on:Jun 21, 2022 | 10:07 PM

Share

ವಿಶ್ವ ಯೋಗ ದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೈಸೂರಿಗೆ ಭೇಟಿ ನೀಡಿದ್ದರು. ಇತ್ತ ನಾನಾ ಕಾರ್ಯಕ್ರಮಗಳಿಗಾಗಿ ಕರ್ನಾಟಕ ಪ್ರವಾಸದಲ್ಲಿರುವ ಮೋದಿ ಅವರಿಗೆ ‘ಆರ್ಕೆಸ್ಟ್ರಾ ಮೈಸೂರು’ ಚಿತ್ರದ ಟ್ರೈಲರ್ ನೋಡುವಂತೆ ನಟಿ ರಮ್ಯಾ ಮನವಿ ಮಾಡಿರುವುದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಪ್ರಧಾನಿ ಮೋದಿ ಅವರನ್ನು ಮೈಸೂರಿಗೆ ಟ್ವಿಟರ್​ ಮೂಲಕ ಸ್ವಾಗತಿಸಿದ ಕಾಂಗ್ರೆಸ್​ನ ಮಾಜಿ ಸಂಸದೆ ರಮ್ಯಾ, ಪ್ರಧಾನಿ ಅವರಿಗೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಆ ಸಲಹೆಗಳೆಂದರೆ…

ನಮ್ಮ ಮೈಸೂರಿಗೆ ಸುಸ್ವಾಗತ ಪ್ರಧಾನಿ ನರೇಂದ್ರ ಮೋದಿ ಅವರೆ…ಸಮಯಾವಕಾಶವಿದ್ದಲ್ಲಿ ಮೈಸೂರಿನಲ್ಲಿ ಮಾಡಬೇಕಾದ ಕೆಲಸಗಳ ಪಟ್ಟಿ..

1. ರಸ್ತೆಗಳನ್ನು ಉದ್ಘಾಟನೆ ಮಾಡಿ. ಖಂಡಿತವಾಗಿಯೂ ನಮಗೆ ಅದರ ಅವಶ್ಯಕತೆ ತುಂಬಾ ಇದೆ. ಇದಕ್ಕೆ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಗೆ ಧನ್ಯವಾದಗಳು.

ಇದನ್ನೂ ಓದಿ
Image
KGF: ಕಬಾಲಿ ನಿರ್ದೇಶಕನ ಮಾಸ್ಟರ್​ ಪ್ಲ್ಯಾನ್​: ಬರಲಿದೆ ಮತ್ತೊಂದು ಕೆಜಿಎಫ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!

2. ದಯವಿಟ್ಟು ನಮ್ಮ ಪ್ರಸಿದ್ಧ ಮೈಲಾರಿ ಬೆಣ್ಣೆ ದೋಸೆಯನ್ನು ಸವಿಯಿರಿ. ಇಂತಹ ಮೃದುವಾದ ದೋಸೆ ನೀವು ತಿಂದಿರುವುದಿಲ್ಲ.

3- ಹಾಗೆಯೇ ಮೈಸೂರಿನ ಆರ್ಕೆಸ್ಟ್ರಾ ಸಂಸ್ಕೃತಿಯ ಬಗ್ಗೆ ತಿಳಿಯಬೇಕಿದ್ದರೆ ‘ಆರ್ಕೆಸ್ಟ್ರಾ ಮೈಸೂರು’ ಟ್ರೈಲರ್ ಅನ್ನು ವೀಕ್ಷಿಸಿ ಎಂದು ರಮ್ಯಾ ಟ್ವೀಟ್ ಮಾಡಿದ್ದಾರೆ.

ಇದೀಗ ರಮ್ಯಾ ಅವರ ಈ ಮನವಿಯ ಟ್ವೀಟ್ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇತ್ತ ಇದೇ ಟ್ರೈಲರ್​ ಅನ್ನು ರಮ್ಯಾ ಯಾಕಾಗಿ ಪ್ರಧಾನಿ ಶಿಫಾರಸ್ಸು ಮಾಡಿದ್ದಾರೆ ಎಂದು ಇತರರು ಕೂಡ ಆರ್ಕೆಸ್ಟ್ರಾ ಮೈಸೂರು ಟ್ರೈಲರ್ ವೀಕ್ಷಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಟ್ರೈಲರ್ ನೋಡಿ ಹೊಸ ಚಿತ್ರತಂಡದ ಪ್ರಯತ್ನಕ್ಕೆ ಬಹುಪರಾಕ್ ಅನ್ನುತ್ತಿದ್ದಾರೆ.

ಆರ್ಕೆಸ್ಟ್ರಾ ಮೈಸೂರು ಚಿತ್ರವು ಸ್ಯಾಂಡಲ್​ವುಡ್​ನಲ್ಲಿ ಬರುತ್ತಿರುವ ಹೊಸ ಸಿನಿಮಾ. ಈ ಚಿತ್ರಕ್ಕೆ ಡಾಲಿ ಧನಂಜಯ್ ಬಂಡವಾಳ ಹೂಡಿದ್ದಾರೆ. ಇನ್ನು ಚಿತ್ರದಲ್ಲಿ ಪೂರ್ಣಚಂದ್ರ ಮೈಸೂರು, ದಿಲೀಪ್ ರಾಜ್ ಮುಂತಾದವರು ನಟಿಸಿದ್ದಾರೆ. ಇನ್ನು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿರುವುದು ನವ ನಿರ್ದೇಶಕ ಸುನೀಲ್.

ಮೈಸೂರಿನ ಆರ್ಕೆಸ್ಟ್ರಾ ಸಂಸ್ಕೃತಿಯನ್ನು ಇಟ್ಟುಕೊಂಡು ಕಥೆ ಹೆಣೆದಿರುವ ಸುನೀಲ್ ಟ್ರೈಲರ್ ಮೂಲಕವೇ ಮೋಡಿ ಮಾಡುವ ಸೂಚನೆ ನೀಡಿದ್ದಾರೆ. ಇತ್ತ ನಟಿ ರಮ್ಯಾ ಇದೇ ಚಿತ್ರದ ಟ್ರೈಲರ್​ ಅನ್ನು ಪ್ರಧಾನಿ ಮೋದಿಗೆ ಮೈಸೂರಿನ ಆರ್ಕೆಸ್ಟ್ರಾ ಕಲ್ಚರ್ ತಿಳಿಸಲು ಶಿಫಾರಸ್ಸು ಮಾಡುವ ಮೂಲಕ ಚಿತ್ರಕ್ಕೆ ಭರ್ಜರಿ ಪ್ರಚಾರ ಕೊಟ್ಟಿದ್ದಾರೆ. ಅಂದಹಾಗೆ ಈ ಚಿತ್ರದ ಟ್ರೈಲರ್​ ಅನ್ನು ನಟಿ ರಮ್ಯಾ ಅವರೇ ಸೋಷಿಯಲ್ ಮೀಡಿಯಾದಲ್ಲಿ ರಿಲೀಸ್ ಮಾಡಿದ್ದರು ಎಂಬುದು ವಿಶೇಷ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:06 pm, Tue, 21 June 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್