AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯದ ಮಧ್ಯೆಯೂ ‘ಯಶೋದಾ’ ಚಿತ್ರದ ಪ್ರಮೋಷನ್​​ಗಾಗಿ ಮರಳಿದ ನಟಿ ಸಮಂತಾ

ನಟಿ ಸಮಂತಾ myositis​ ಎಂಬ ಅಪರೂಪದ ರೋಗದಿಂದ ಬಳಲುತ್ತಿದ್ದಾರೆ ಎಂದು ಕಳೆದ ವಾರ ಬಹಿರಂಗಪಡಿಸಿದ್ದರು. ಇದೀಗ ನಟಿ ಕೆಲಸಕ್ಕೆ ಮರಳಿದ್ದಾರೆ. ಜೊತೆಗೆ ಅವರ ಮುಂದಿನ ಸಿನಿಮಾ ‘ಯಶೋದಾ’ ಪ್ರಚಾರಕ್ಕಾಗಿ ಸಜ್ಜಾಗಿರುವ ಪೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

ಅನಾರೋಗ್ಯದ ಮಧ್ಯೆಯೂ ‘ಯಶೋದಾ’ ಚಿತ್ರದ ಪ್ರಮೋಷನ್​​ಗಾಗಿ ಮರಳಿದ ನಟಿ ಸಮಂತಾ
ಸಮಂತಾImage Credit source: google
TV9 Web
| Edited By: |

Updated on: Nov 07, 2022 | 6:39 PM

Share

ಸಮಂತಾ ಬಹುಬೇಡಿಕೆಯ ನಟಿಯಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಕಳೆದ ವಾರ ತಮಗೆ ಇರುವ myositis​ ಎಂಬ ಹೆಸರಿನ ಅಪರೂಪದ ಕಾಯಿಲೆ ಇರುವ ಬಗ್ಗೆ ಮತ್ತು ಅದಕ್ಕೆ ತಾವು ಚಿಕಿತ್ಸೆ ಪಡೆಯುತ್ತಿದ್ದ ಬಗ್ಗೆ ಘೋಷಣೆ ಮಾಡಿದ್ದರು. ಈಗ ಅವರು ಅನಾರೋಗ್ಯದ ಮಧ್ಯೆಯೂ ಪ್ರಚಾರ ಆರಂಭಿಸಿದ್ದಾರೆ.

‘ನಾನು ಮಾನಸಿಕವಾಗಿ, ದೈಹಿಕವಾಗಿ ಸದೃಡವಾಗಿದ್ದೇನೆ. ಕೊನೆ ಕ್ಷಣದವರೆಗೂ ಹೋರಾಡುತ್ತೇನೆ ಮತ್ತು ಯಶೋದಾ ಚಿತ್ರದ ಟ್ರೇಲರ್​ ರಿಲೀಸ್​ ಆಗಿದ್ದು ನಿಮ್ಮ ಪ್ರತಿಕ್ರಿಯೆ ನೋಡಿ ಸಂತೋಷವಾಯಿತು. ನಿಮ್ಮ ಈ ಪ್ರೀತಿ ನನಗೆ ಸವಾಲುಗಳನ್ನು ಎದುರಿಸಲು ಶಕ್ತಿ ನೀಡಿದೆ. ಮತ್ತು ಈ ಕಾಯಿಲೆ ಗುಣವಾದ ಬಳಿಕ ಈ ವಿಷಯವನ್ನು ಹಂಚಿಕೊಳ್ಳಬೇಕು ಎಂದುಕೊಂಡಿದ್ದೆ. ಆದರೆ ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತಿದೆ’ ಎಂದು ಸಮಂತಾ ಬರೆದುಕೊಂಡಿದ್ದರು.

ಸಮಂತಾ ಈಗ ಕೆಲಸಕ್ಕೆ ಮರಳಿದ್ದಾರೆ. ಈ ಸುದ್ದಿಯು ಅವರ ಅಭಿಮಾನಿಗಳ ಮುಖದಲ್ಲಿ ಸಂತೋಷ ಮೂಡಿಸಿದೆ. ಸೋಮವಾರ (ನವೆಂಬರ್ 7) ಮಧ್ಯಾಹ್ನ ಸಮಂತಾ ಅವರು ಯಶೋದಾ ಚಿತ್ರದ ಪ್ರಮೋಷನ್​ಗಾಗಿ ಸಜ್ಜಾಗಿರುವ ಪೋಟೋದೊಂದಿಗೆ ‘ಯಶೋದಾ ಪ್ರಚಾರಕ್ಕಾಗಿ ನವೆಂಬರ್ 11ರಂದು ಭೇಟಿಯಾಗೋಣ’ ಎಂದು ಬರೆದುಕೊಂಡಿದ್ದಾರೆ.

ಸಮಂತಾ ಅವರು ಕೊನೆಯದಾಗಿ ವಿಜಯ್ ಸೇತುಪತಿ ಮತ್ತು ನಯನತಾರಾ ಜೊತೆಯಲ್ಲಿ ‘ಕಾದು ವಾಕುಲ ರೆಂಡು ಕಾದಲ್’​ ಚಿತ್ರದಲ್ಲಿ ನಟಿಸಿದ್ದರು. ‘ಅರೇಂಜ್​ಮೆಂಟ್ಸ್​ ಆಫ್ ಲವ್’ ಹೆಸರಿನ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಸಿನಿಮಾದಲ್ಲಿ ಪತ್ತೇದಾರಿ ಸಂಸ್ಥೆಯನ್ನು ನಡೆಸುವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮತ್ತಷ್ಟು ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ