AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪದ ಕಾಯಿಲೆಗೆ ತುತ್ತಾದ ನಟಿ ಸಮಂತಾ; ಇದರಿಂದ ಆಗುವ ತೊಂದರೆಗಳೇನು?

ಸಮಂತಾ ಅವರಿಗೆ Myositis ಹೆಸರಿನ ಅಪರೂಪದ ಕಾಯಿಲೆ ಇದೆ. ಈ ಕಾಯಿಲೆ ಬಂದರೆ ವ್ಯಕ್ತಿ ಕುಗ್ಗುತ್ತಾನೆ. ದೇಹದಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

ಅಪರೂಪದ ಕಾಯಿಲೆಗೆ ತುತ್ತಾದ ನಟಿ ಸಮಂತಾ; ಇದರಿಂದ ಆಗುವ ತೊಂದರೆಗಳೇನು?
ಸಮಂತಾ
TV9 Web
| Edited By: |

Updated on:Oct 29, 2022 | 6:19 PM

Share

ನಟಿ ಸಮಂತಾ (Samantha) ಅವರು ವಿಚ್ಛೇದನ ಪಡೆದು ಒಂದು ವರ್ಷದ ಮೇಲಾಗಿದೆ. ಡಿವೋರ್ಸ್​​ ನಂತರದಲ್ಲಿ ಅವರ ಸಿನಿಮಾ ಆಯ್ಕೆಗಳು ಬದಲಾದವು. ಸಾಕಷ್ಟು ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸಿದರು. ಕೆಲ ತಿಂಗಳಿಂದ ಸಮಂತಾಗೆ ಅನಾರೋಗ್ಯ ಕಾಡಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಇದಕ್ಕೆ ಸ್ಪಷ್ಟನೆ ಸಿಕ್ಕಿರಲಿಲ್ಲ. ಈಗ ಸಮಂತಾ ಈ ವಿಚಾರದ ಬಗ್ಗೆ ಮೌನ ಮುರಿದಿದ್ದಾರೆ. ತಮಗೆ ಅನಾರೋಗ್ಯ ಉಂಟಾಗಿದೆ ಎಂಬ ವಿಚಾರವನ್ನು ಒಪ್ಪಿಕೊಂಡಿದ್ದಾರೆ. ಈ ಕಾಯಿಲೆ ಹೆಸರನ್ನು ಕೂಡ ಹೇಳಿಕೊಂಡಿದ್ದಾರೆ.

ಸಮಂತಾ ಅವರಿಗೆ Myositis ಹೆಸರಿನ ಅಪರೂಪದ ಕಾಯಿಲೆ ಇದೆ. ಈ ಕಾಯಿಲೆ ಬಂದರೆ ವ್ಯಕ್ತಿ ಕುಗ್ಗುತ್ತಾನೆ. ದೇಹದಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಸ್ನಾಯು ಸೆಳೆತ ಶುರುವಾಗುತ್ತದೆ. ಸ್ವಲ್ಪ ದೂರ ನಡೆದರೂ ಸುಸ್ತು ಎನಿಸುತ್ತದೆ. 30-60ರ ವಯಸ್ಸಿನವರಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಸರಿಯಾದ ಚಿಕಿತ್ಸೆ ಕೊಡದೆ ಇದ್ದರೆ ದಿನ ಕಳೆದಂತೆ ಪರಿಸ್ಥಿತಿ ಬಿಗಡಾಯಿಸುತ್ತದೆ. ಈಗ ಸಮಂತಾ ಕೂಡ ಇದೇ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.

‘ಯಶೋದಾ ಚಿತ್ರದ ಟ್ರೇಲರ್​ಗೆ ನಿಮ್ಮ ಪ್ರತಿಕ್ರಿಯೆ ನೋಡಿ ಖುಷಿ ಆಯಿತು. ನಿಮ್ಮ ಪ್ರೀತಿ ನನಗೆ ಸವಾಲುಗಳನ್ನು ಎದುರಿಸಲು ಶಕ್ತಿ ನೀಡಿದೆ. ಕೆಲ ತಿಂಗಳ ಹಿಂದೆ ನನ್ನಲ್ಲಿ Myositis ಹೆಸರಿನ ಸಮಸ್ಯೆ ಇರುವುದು ಪತ್ತೆ ಆಯಿತು. ಇದು ಕಡಿಮೆ ಆದ ನಂತರದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಬೇಕು ಎಂದುಕೊಂಡಿದ್ದೆ. ಆದರೆ, ನಾವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಸಮಯವನ್ನು ಇದು ತೆಗೆದುಕೊಳ್ಳುತ್ತಿದೆ’ ಎಂದು ಸಮಂತಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

ಇದನ್ನೂ ಓದಿ: Yashoda Trailer: ‘ಯಶೋದಾ’ ಟ್ರೇಲರ್​​ ಬಿಡುಗಡೆ; ಸಮಂತಾಗೆ ಸಾಥ್​ ನೀಡಿದ ‘ಸಿಂಪಲ್​ ಸ್ಟಾರ್​’ ರಕ್ಷಿತ್​ ಶೆಟ್ಟಿ

‘ಶೀಘ್ರದಲ್ಲೇ ನಾನು ಸಂಪೂರ್ಣ ಗುಣಮುಖ ಆಗುತ್ತೇನೆ ಎಂಬ ಭರವಸೆಯನ್ನು ವೈದ್ಯರು ನೀಡಿದ್ದಾರೆ. ನನ್ನ ಜೀವನದಲ್ಲಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಒಳ್ಳೆಯ ಹಾಗೂ ಕೆಟ್ಟ ದಿನ ಎರಡೂ ಇದ್ದವು. ಇದನ್ನು ನಿರ್ವಹಿಸಲು ಸಾಧ್ಯವೇ ಇಲ್ಲ ಎಂದುಕೊಂಡ ಪರಿಸ್ಥಿತಿಗಳೂ ಕಳೆದು ಹೋಗಿವೆ. ಚೇತರಿಕೆ ಕಾಣಲು ಇನ್ನೂ ಹತ್ತಿರವಾಗುತ್ತಿದ್ದೇನೆ ಅನಿಸುತ್ತದೆ. ಐ ಲವ್​ ಯೂ. ಈ ಸಮಯ ಕಳೆಯುತ್ತದೆ’ ಎನ್ನುವ ಮೂಲಕ ಬೇಗ ಚೇತರಿಕೆ ಕಾಣುತ್ತೇನೆ ಎಂಬ ಆತ್ಮವಿಶ್ವಾಸವನ್ನು ಸಮಂತಾ ತೋರಿದ್ದಾರೆ.

Published On - 5:03 pm, Sat, 29 October 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ