AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shaakuntalam: ಅಭಿಮಾನಿಗಳಿಗೆ ಸಮಂತಾ ಸರ್​ಪ್ರೈಸ್​; ಹೊಸ ಪೋಸ್ಟರ್​ನಲ್ಲಿದೆ ಹಲವು ವಿಚಾರ

ನಟಿ ಸಮಂತಾ ಅವರು ‘ಶಾಕುಂತಲಂ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಕೆಲಸಗಳು ಪೂರ್ಣಗೊಂಡು ಬಹಳ ಸಮಯ ಕಳೆದಿದೆ. ಪೌರಾಣಿಕ ಕಥಾಹಂದರ ಇರುವ ಈ ಚಿತ್ರವನ್ನು ಸಮಂತಾ ಆಯ್ಕೆ ಮಾಡಿಕೊಂಡಾಗಲೇ ಅಭಿಮಾನಿಗಳ ವಲಯದಲ್ಲಿ ಹೈಪ್​ ಸೃಷ್ಟಿ ಆಗಿತ್ತು.

Shaakuntalam: ಅಭಿಮಾನಿಗಳಿಗೆ ಸಮಂತಾ ಸರ್​ಪ್ರೈಸ್​; ಹೊಸ ಪೋಸ್ಟರ್​ನಲ್ಲಿದೆ ಹಲವು ವಿಚಾರ
ಸಮಂತಾ
TV9 Web
| Edited By: |

Updated on: Jan 02, 2023 | 3:16 PM

Share

ನಟಿ ಸಮಂತಾ (Samantha) ಅವರು Myositis ಹೆಸರಿನ ಅಪರೂಪದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಜಗತ್ತಿನಲ್ಲಿ ಈ ಸಮಸ್ಯೆಗೆ ಒಳಗಾಗುವವರ ಸಂಖ್ಯೆ ತುಂಬಾನೇ ಕಡಿಮೆ. ಒಮ್ಮೆ ಈ ರೋಗ ಕಾಣಿಸಿಕೊಂಡರೆ ಅದರಿಂದ ಗುಣಮುಖರಾಗುವುದು ತುಂಬಾನೇ ಕಷ್ಟ. ಸ್ನಾಯುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುತ್ತದೆ. ಸಮಂತಾ ಸದ್ಯ ವಿಶ್ರಾಂತಿಯಲ್ಲಿದ್ದಾರೆ.ಈ ಮಧ್ಯೆ ಅವರು ಅಭಿಮಾನಿಗಳಿಗೆ ಸರ್​ಪ್ರೈಸ್ ನೀಡಿದ್ದಾರೆ. ಅವರು ಹಂಚಿಕೊಂಡಿರುವ ಹೊಸ ಪೋಸ್ಟರ್​​ನಲ್ಲಿ ಹಲವು ವಿಚಾರಗಳಿವೆ.

ನಟಿ ಸಮಂತಾ ಅವರು ‘ಶಾಕುಂತಲಂ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಕೆಲಸಗಳು ಪೂರ್ಣಗೊಂಡು ಬಹಳ ಸಮಯ ಕಳೆದಿದೆ. ಪೌರಾಣಿಕ ಕಥಾಹಂದರ ಇರುವ ಈ ಚಿತ್ರವನ್ನು ಸಮಂತಾ ಆಯ್ಕೆ ಮಾಡಿಕೊಂಡಾಗಲೇ ಅಭಿಮಾನಿಗಳ ವಲಯದಲ್ಲಿ ಹೈಪ್​ ಸೃಷ್ಟಿ ಆಗಿತ್ತು. ಆದರೆ, ಚಿತ್ರತಂಡದಿಂದ ರಿಲೀಸ್ ದಿನಾಂಕ ಹೊರ ಬಿದ್ದಿರಲಿಲ್ಲ. ಇದು ಅವರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿತ್ತು. ಈಗ ಚಿತ್ರದ ರಿಲೀಸ್ ದಿನಾಂಕ ರಿವೀಲ್ ಆಗಿದೆ. ಹೊಸ ಪೋಸ್ಟರ್ ರಿಲೀಸ್ ಮಾಡಿ ಈ ವಿಚಾರ ಬಹಿರಂಗ ಮಾಡಲಾಗಿದೆ.

ಹೊಸ ಪೋಸ್ಟರ್​ನಲ್ಲಿ ಸಮಂತಾ ಲುಕ್ ಗಮನ ಸೆಳೆದಿದೆ. ಈ ಚಿತ್ರ ಫೆಬ್ರವರಿ 17ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಈ ಚಿತ್ರ 3ಡಿಯಲ್ಲೂ ಮೂಡಿ ಬರುತ್ತಿದೆ ಅನ್ನೋದು ವಿಶೇಷ. ಪೌರಾಣಿಕ ಹಿನ್ನೆಲೆ ಜತೆಗೆ 3ಡಿ ವರ್ಷನ್​​ ಕೂಡ ಇರುವುದರಿಂದ ಚಿತ್ರದ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

ಖ್ಯಾತ ನಿರ್ದೇಶಕ ಗುಣಶೇಖರ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ನೀಲಿಮಾ ಗುಣ ಅವರ ನಿರ್ಮಾಣದಲ್ಲಿ ‘ಶಾಕುಂತಲಂ’ ಮೂಡಿಬರುತ್ತಿದೆ. ಕನ್ನಡ, ಹಿಂದಿ, ಮಲಯಾಳಂ ಮತ್ತು ತಮಿಳಿನಲ್ಲೂ ಈ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಪುತ್ರಿ ಅಲ್ಲು ಅರ್ಹಾ ಕೂಡ ಬಣ್ಣ ಹಚ್ಚಿದ್ದಾಳೆ ಎಂಬುದು ವಿಶೇಷ.

ಇದನ್ನೂ ಓದಿ: ಸಮಂತಾ ಬಗ್ಗೆ ಹುಟ್ಟಿಕೊಂಡಿತು ಮತ್ತಷ್ಟು ವದಂತಿ; ಬೇಸರದಲ್ಲೇ ಸ್ಪಷ್ಟನೆ ನೀಡಿದ ತಂಡ

ಸಮಂತಾ ನಟನೆಯ ‘ಯಶೋದಾ’ ಸಿನಿಮಾ ಕಳೆದ ವರ್ಷ ತೆರೆಗೆ ಬಂತು. ಸಸ್ಪೆನ್ಸ್​ ಶೈಲಿಯಲ್ಲಿ ಮೂಡಿಬಂದ ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ಪ್ರೇಕ್ಷಕರು ಇಷ್ಟಪಟ್ಟರು. ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ