Shilpa Shetty: ಶಿಲ್ಪಾ ಶೆಟ್ಟಿ ಮನೆಗೆ ಹೊಸ ಸದಸ್ಯನ ಆಗಮನ; ಕುಟುಂಬದವರು ಫುಲ್ ಖುಷ್

ಶಿಲ್ಪಾ ಶೆಟ್ಟಿ ಮಗ ವಿಯಾನ್​ಗೆ ಜನ್ಮದಿನದ ಸಂಭ್ರಮ. ಆತ 9ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಈ ಸಂಭ್ರಮದಂದು ಆತನಿಗೆ ಏನಾದರೂ ವಿಶೇಷ ಗಿಫ್ಟ್​ ನೀಡುವ ಆಲೋಚನೆ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್​ ಕುಂದ್ರಾ ಅವರದ್ದಾಗಿತ್ತು.

Shilpa Shetty: ಶಿಲ್ಪಾ ಶೆಟ್ಟಿ ಮನೆಗೆ ಹೊಸ ಸದಸ್ಯನ ಆಗಮನ; ಕುಟುಂಬದವರು ಫುಲ್ ಖುಷ್
ವಿಯಾನ್​ ಜತೆ ಶಿಲ್ಪಾ ಶೆಟ್ಟಿ
Follow us
| Updated By: ಮದನ್​ ಕುಮಾರ್​

Updated on: May 23, 2021 | 7:30 AM

ನಟಿ ಶಿಲ್ಪಾ ಶೆಟ್ಟಿ ಮದುವೆ ಆದ ನಂತರದಲ್ಲಿ ಚಿತ್ರರಂಗದಿಂದ ದೂರವೇ ಉಳಿದಿದ್ದಾರೆ. ಕುಟುಂಬ-ಮಕ್ಕಳು ಎಂದು ಅವರು ಸಂಪೂರ್ಣ ಬ್ಯುಸಿಯಾಗಿದ್ದಾರೆ. ಹೀಗಿರುವಾಗಲೇ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಸದ್ಯ, ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಸಖತ್ ವೈರಲ್​ ಆಗುತ್ತಿದೆ.

ಶಿಲ್ಪಾ ಶೆಟ್ಟಿ ಮಗ ವಿಯಾನ್​ಗೆ ಜನ್ಮದಿನದ (ಮೇ 21) ಸಂಭ್ರಮ. ಆತ 9ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಈ ಸಂಭ್ರಮದಂದು ಆತನಿಗೆ ಏನಾದರೂ ವಿಶೇಷ ಗಿಫ್ಟ್​ ನೀಡುವ ಆಲೋಚನೆ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್​ ಕುಂದ್ರಾ ಅವರದ್ದಾಗಿತ್ತು. ಈ ಕಾರಣಕ್ಕೆ ಪುಟಾಣಿ ನಾಯಿ ಮರಿಯನ್ನು ಉಡುಗರೆಯಾಗಿ ನೀಡಿದ್ದಾರೆ. ಈ ವಿಶೇಷ ಗಿಫ್ಟ್​ ನೋಡಿ ವಿಯಾನ್​ ಸಖತ್​ ಖುಷಿಯಾಗಿದ್ದಾನೆ.

ಶಿಲ್ಪಾ ಶೆಟ್ಟಿ ಕಪ್ಪು ಬಣ್ಣದ ನಾಯಿ ಮರಿಯನ್ನು ತಂದಿದ್ದಾರೆ. ಈ ವೇಳೆ ವಿಯಾನ್​ ಕಣ್ಣನ್ನು ಮುಚ್ಚಲಾಗಿತ್ತು. ವಿಯಾನ್​ ಕಣ್ಣುಬಿಟ್ಟು ನೋಡಿದಾಗ ಎದುರಿಗೆ ನಾಯಿಮರಿ ಇತ್ತು. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಈ ಬಗ್ಗೆ ಬರೆದುಕೊಂಡಿರುವ ಶಿಲ್ಪಾ ಶೆಟ್ಟಿ, ಮನೆಗೆ ಹೊಸ ಸದಸ್ಯನ ಆಗಮನವಾಗಿದೆ. ಮತ್ತೊಂದು ಶ್ವಾನ ಬೇಕು ಎಂದು ವಿಯಾನ್​ ಕೇಳುತ್ತಿದ್ದ. 10 ವರ್ಷ ಆದಮೇಲೆ ತಂದುಕೊಡುತ್ತೇನೆ ಎಂದು ಭಾಷೆ ನೀಡಿದೆ. ಈಗ ಒಂದು ವರ್ಷ ಮೊದಲೇ ಆತನಿಗೆ ಉಡುಗರೆ ಸಿಕ್ಕಿದೆ. ಹ್ಯಾಪ್ಪಿ ಬರ್ತ್​ಡೇ ಡಾರ್ಲಿಂಗ್​ ಎಂದು ಶಿಲ್ಪಾ ಬರೆದುಕೊಂಡಿದ್ದಾರೆ.

ನಟಿ ಶಿಲ್ಪಾ ಶೆಟ್ಟಿ ಸಿನಿಮಾ ರಂಗದಿಂದ ದೂರ ಉಳಿದರೂ ಸೋಶಿಯಲ್​ ಮೀಡಿಯಾದಲ್ಲಿ ತುಂಬಾನೇ ಆ್ಯಕ್ಟಿವ್​ ಆಗಿದ್ದಾರೆ. ಭಿನ್ನ ರೀತಿಯ ಫೋಟೋ ಹಾಗೂ ವಿಡಿಯೋಗಳನ್ನು ಪೋಸ್ಟ್​ ಮಾಡುವ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಿರುತ್ತಾರೆ.  2007ರಲ್ಲಿ ತೆರೆಗೆ ಬಂದ ಅಪ್ನೆ ಸಿನಿಮಾ ಕೊನೆ. ನಂತರ ಮೂರು ಚಿತ್ರಗಳಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕಿದ್ದು ಬಿಟ್ಟರೆ ಮತ್ತಾವುದೇ ಚಿತ್ರಗಳಲ್ಲಿ ಶಿಲ್ಪಾ ನಟಿಸಿಲ್ಲ. 2009ರಲ್ಲಿ ಶಿಲ್ಪಾ ವಿವಾಹವಾದರು. ನಂತರ ಅವರು ಚಿತ್ರರಂಗದಿಂದ ಸ್ವಲ್ಪ ದೂರ ಉಳಿದರು. ಸದ್ಯ ಅವರ ಕೈನಲ್ಲಿ ಎರಡು ಚಿತ್ರಗಳಿವೆ. ಈ ಸಿನಿಮಾಗಳು ಶೀಘ್ರವೇ ತೆರೆಗೆ ಬರಲಿವೆಯಂತೆ.

ಇದನ್ನೂ ಓದಿ: Mahesh Babu: ಮಹೇಶ್​ ಬಾಬುಗೆ ಶಿಲ್ಪಾ ಶೆಟ್ಟಿ ಆಂಟಿ? ಇದು ಹೇಗೆ ಸಾಧ್ಯ ಎಂದು ತಲೆ ಕೆರೆದುಕೊಂಡ ಫ್ಯಾನ್ಸ್​

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ