AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shilpa Shetty: ಶಿಲ್ಪಾ ಶೆಟ್ಟಿ ಮನೆಗೆ ಹೊಸ ಸದಸ್ಯನ ಆಗಮನ; ಕುಟುಂಬದವರು ಫುಲ್ ಖುಷ್

ಶಿಲ್ಪಾ ಶೆಟ್ಟಿ ಮಗ ವಿಯಾನ್​ಗೆ ಜನ್ಮದಿನದ ಸಂಭ್ರಮ. ಆತ 9ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಈ ಸಂಭ್ರಮದಂದು ಆತನಿಗೆ ಏನಾದರೂ ವಿಶೇಷ ಗಿಫ್ಟ್​ ನೀಡುವ ಆಲೋಚನೆ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್​ ಕುಂದ್ರಾ ಅವರದ್ದಾಗಿತ್ತು.

Shilpa Shetty: ಶಿಲ್ಪಾ ಶೆಟ್ಟಿ ಮನೆಗೆ ಹೊಸ ಸದಸ್ಯನ ಆಗಮನ; ಕುಟುಂಬದವರು ಫುಲ್ ಖುಷ್
ವಿಯಾನ್​ ಜತೆ ಶಿಲ್ಪಾ ಶೆಟ್ಟಿ
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: May 23, 2021 | 7:30 AM

ನಟಿ ಶಿಲ್ಪಾ ಶೆಟ್ಟಿ ಮದುವೆ ಆದ ನಂತರದಲ್ಲಿ ಚಿತ್ರರಂಗದಿಂದ ದೂರವೇ ಉಳಿದಿದ್ದಾರೆ. ಕುಟುಂಬ-ಮಕ್ಕಳು ಎಂದು ಅವರು ಸಂಪೂರ್ಣ ಬ್ಯುಸಿಯಾಗಿದ್ದಾರೆ. ಹೀಗಿರುವಾಗಲೇ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಸದ್ಯ, ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಸಖತ್ ವೈರಲ್​ ಆಗುತ್ತಿದೆ.

ಶಿಲ್ಪಾ ಶೆಟ್ಟಿ ಮಗ ವಿಯಾನ್​ಗೆ ಜನ್ಮದಿನದ (ಮೇ 21) ಸಂಭ್ರಮ. ಆತ 9ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಈ ಸಂಭ್ರಮದಂದು ಆತನಿಗೆ ಏನಾದರೂ ವಿಶೇಷ ಗಿಫ್ಟ್​ ನೀಡುವ ಆಲೋಚನೆ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್​ ಕುಂದ್ರಾ ಅವರದ್ದಾಗಿತ್ತು. ಈ ಕಾರಣಕ್ಕೆ ಪುಟಾಣಿ ನಾಯಿ ಮರಿಯನ್ನು ಉಡುಗರೆಯಾಗಿ ನೀಡಿದ್ದಾರೆ. ಈ ವಿಶೇಷ ಗಿಫ್ಟ್​ ನೋಡಿ ವಿಯಾನ್​ ಸಖತ್​ ಖುಷಿಯಾಗಿದ್ದಾನೆ.

ಶಿಲ್ಪಾ ಶೆಟ್ಟಿ ಕಪ್ಪು ಬಣ್ಣದ ನಾಯಿ ಮರಿಯನ್ನು ತಂದಿದ್ದಾರೆ. ಈ ವೇಳೆ ವಿಯಾನ್​ ಕಣ್ಣನ್ನು ಮುಚ್ಚಲಾಗಿತ್ತು. ವಿಯಾನ್​ ಕಣ್ಣುಬಿಟ್ಟು ನೋಡಿದಾಗ ಎದುರಿಗೆ ನಾಯಿಮರಿ ಇತ್ತು. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಈ ಬಗ್ಗೆ ಬರೆದುಕೊಂಡಿರುವ ಶಿಲ್ಪಾ ಶೆಟ್ಟಿ, ಮನೆಗೆ ಹೊಸ ಸದಸ್ಯನ ಆಗಮನವಾಗಿದೆ. ಮತ್ತೊಂದು ಶ್ವಾನ ಬೇಕು ಎಂದು ವಿಯಾನ್​ ಕೇಳುತ್ತಿದ್ದ. 10 ವರ್ಷ ಆದಮೇಲೆ ತಂದುಕೊಡುತ್ತೇನೆ ಎಂದು ಭಾಷೆ ನೀಡಿದೆ. ಈಗ ಒಂದು ವರ್ಷ ಮೊದಲೇ ಆತನಿಗೆ ಉಡುಗರೆ ಸಿಕ್ಕಿದೆ. ಹ್ಯಾಪ್ಪಿ ಬರ್ತ್​ಡೇ ಡಾರ್ಲಿಂಗ್​ ಎಂದು ಶಿಲ್ಪಾ ಬರೆದುಕೊಂಡಿದ್ದಾರೆ.

ನಟಿ ಶಿಲ್ಪಾ ಶೆಟ್ಟಿ ಸಿನಿಮಾ ರಂಗದಿಂದ ದೂರ ಉಳಿದರೂ ಸೋಶಿಯಲ್​ ಮೀಡಿಯಾದಲ್ಲಿ ತುಂಬಾನೇ ಆ್ಯಕ್ಟಿವ್​ ಆಗಿದ್ದಾರೆ. ಭಿನ್ನ ರೀತಿಯ ಫೋಟೋ ಹಾಗೂ ವಿಡಿಯೋಗಳನ್ನು ಪೋಸ್ಟ್​ ಮಾಡುವ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಿರುತ್ತಾರೆ.  2007ರಲ್ಲಿ ತೆರೆಗೆ ಬಂದ ಅಪ್ನೆ ಸಿನಿಮಾ ಕೊನೆ. ನಂತರ ಮೂರು ಚಿತ್ರಗಳಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕಿದ್ದು ಬಿಟ್ಟರೆ ಮತ್ತಾವುದೇ ಚಿತ್ರಗಳಲ್ಲಿ ಶಿಲ್ಪಾ ನಟಿಸಿಲ್ಲ. 2009ರಲ್ಲಿ ಶಿಲ್ಪಾ ವಿವಾಹವಾದರು. ನಂತರ ಅವರು ಚಿತ್ರರಂಗದಿಂದ ಸ್ವಲ್ಪ ದೂರ ಉಳಿದರು. ಸದ್ಯ ಅವರ ಕೈನಲ್ಲಿ ಎರಡು ಚಿತ್ರಗಳಿವೆ. ಈ ಸಿನಿಮಾಗಳು ಶೀಘ್ರವೇ ತೆರೆಗೆ ಬರಲಿವೆಯಂತೆ.

ಇದನ್ನೂ ಓದಿ: Mahesh Babu: ಮಹೇಶ್​ ಬಾಬುಗೆ ಶಿಲ್ಪಾ ಶೆಟ್ಟಿ ಆಂಟಿ? ಇದು ಹೇಗೆ ಸಾಧ್ಯ ಎಂದು ತಲೆ ಕೆರೆದುಕೊಂಡ ಫ್ಯಾನ್ಸ್​

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್