AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಯಾ ಶರಣ್​ ಮಗಳಿಗೆ ರಾಧಾ ಎಂದು ಹೆಸರು ಇಟ್ಟಿದ್ದೇಕೆ? ಇದಕ್ಕಿದೆ ರಷ್ಯಾದ ಕನೆಕ್ಷನ್​

ಶ್ರೀಯಾ ಶರಣ್​ ಅವರು ತಮಗೆ ಹೆಣ್ಣು ಮಗು ಜನಿಸಿದ ವಿಚಾರವನ್ನು ಒಂದೂವರೆ ವರ್ಷಗಳ ಕಾಲ ಮುಚ್ಚಿಟ್ಟಿದ್ದರೂ ಕೂಡ ಈಗ ಆ ಕುರಿತು​ ಮನಬಿಚ್ಚಿ ಮಾತನಾಡುತ್ತಿದ್ದಾರೆ. ಅನೇಕ ಕಡೆಗಳಲ್ಲಿ ಸಂದರ್ಶನ ನೀಡುತ್ತ, ಮಗಳ ಬಗ್ಗೆ ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಶ್ರೀಯಾ ಶರಣ್​ ಮಗಳಿಗೆ ರಾಧಾ ಎಂದು ಹೆಸರು ಇಟ್ಟಿದ್ದೇಕೆ? ಇದಕ್ಕಿದೆ ರಷ್ಯಾದ ಕನೆಕ್ಷನ್​
ಶ್ರೀಯಾ ಶರಣ್
TV9 Web
| Edited By: |

Updated on:Oct 19, 2021 | 9:58 AM

Share

ಖ್ಯಾತ ನಟಿ ಶ್ರೀಯಾ ಶರಣ್​ ಅವರು ಗುಟ್ಟಾಗಿ ಮುಗು ಮಾಡಿಕೊಂಡರು. ತಾವು ಪ್ರೆಗ್ನೆಂಟ್​ ಆಗಿರುವ ವಿಚಾರವನ್ನು ಅವರು ಮುಚ್ಚಿಟ್ಟಿದ್ದರು. ಹೆಣ್ಣು ಮಗು ಜನಿಸಿ ಒಂದೂವರೆ ವರ್ಷ ಆಗುವವರೆಗೂ ಅವರು ಈ ರಹಸ್ಯವನ್ನು ಕಾಯ್ದುಕೊಂಡಿದ್ದರು. ಇತ್ತೀಚೆಗಷ್ಟೇ ವಿಷಯ ಬಹಿರಂಗ ಆಯಿತು. ವಿಶೇಷ ಏನೆಂದರೆ ತಮ್ಮ ಮಗುವಿಗೆ ರಾಧಾ ಶರಣ್​ ಕೊಸ್ವೀವ್​ ಎಂದು ನಾಮಕರಣ ಮಾಡಿದ್ದಾರೆ. ಹೀಗೆ ಹೆಸರು ಇಡಲು ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ರಾಧಾ ಎಂಬ ಹೆಸರಿಗೆ ರಷ್ಯಾದ ಕನೆಕ್ಷನ್​ ಸಹ ಇದೆ.

ಶ್ರೀಯಾ ಶರಣ್​ ಮದುವೆ ಆಗಿರುವುದು ರಷ್ಯಾದ ಟೆನಿಸ್​ ಆಟಗಾರ ಆಂಡ್ರೀ ಕೊಸ್ಚೀವ್​ ಅವರನ್ನು. ‘ನಮಗೆ ಹೆಣ್ಣು ಮಗು ಜನಿಸಿದೆ ಎಂಬ ವಿಷಯ ನಮ್ಮ ತಾಯಿಗೆ ಗೊತ್ತಾದ ತಕ್ಷಣ ರಾಧಾ ರಾಣಿ ಬರುತ್ತಿದ್ದಾಳೆ ಎಂದು ಅವರು ಹೇಳಿದರು. ಆಗ ನನ್ನ ಪತಿ ಆಂಡ್ರೀಗೆ ಅಚ್ಚರಿ ಆಯಿತು. ನಿಮ್ಮ ತಾಯಿ ಯಾಕೆ ರಷ್ಯಾದ ಹೆಸರನ್ನು ಹೇಳುತ್ತಿದ್ದಾರೆ ಅಂತ ಅವರು ನನ್ನನ್ನು ಕೇಳಿದರು. ರಾಧಾ ಎಂದರೆ ರಷ್ಯಾದ ಹೆಸರಲ್ಲ ಅಂತ ನಾನು ಹೇಳಿದೆ. ರಾಧಾ ಎಂದರೆ ರಷ್ಯನ್​ ಭಾಷೆಯಲ್ಲಿ ಖುಷಿ ಎಂದರ್ಥ ಎಂದು ಅವರು ಹೇಳಿದರು. ಹಾಗಾಗಿ ನಾವು ಅದೇ ಹೆಸರನ್ನು ಮಗಳಿಗೆ ಇಡಲು ನಿರ್ಧರಿಸಿದೆವು. ರಾಧಾ ಶರಣ್​​ ಕೊಸ್ಚೀವ್​ ಎಂಬುದು ನಮ್ಮ ಮಗಳ ಪೂರ್ಣ ಹೆಸರು’ ಎಂದು ಶ್ರೀಯಾ ಶರಣ್​ ಹೇಳಿದ್ದಾರೆ.

ಶ್ರೀಯಾ ಶರಣ್​ ಅವರು ತಮಗೆ ಹೆಣ್ಣು ಮಗು ಜನಿಸಿದ ವಿಚಾರವನ್ನು ಒಂದೂವರೆ ವರ್ಷಗಳ ಕಾಲ ಮುಚ್ಚಿಟ್ಟಿದ್ದರೂ ಕೂಡ ಈಗ ಆ ಕುರಿತು​ ಮನಬಿಚ್ಚಿ ಮಾತನಾಡುತ್ತಿದ್ದಾರೆ. ಅನೇಕ ಕಡೆಗಳಲ್ಲಿ ಸಂದರ್ಶನ ನೀಡುತ್ತ, ಮಗಳ ಬಗ್ಗೆ ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ. ‘2020ರ ಕ್ವಾರಂಟೈನ್​ ತುಂಬಾನೇ ಅದ್ಭುತವಾಗಿತ್ತು. ಇಡೀ ಪ್ರಪಂಚವು ಕಷ್ಟದಲ್ಲಿ ಸಾಗುತ್ತಿರುವಾಗ, ನಮ್ಮ ಪ್ರಪಂಚವು ಬದಲಾಯಿತು. ನಮಗೆ ಆ ಸಂದರ್ಭದಲ್ಲಿ ಹೆಣ್ಣುಮಗುವಾಗಿದೆ’ ಎನ್ನುವ ಮೂಲಕ ತಾವು ತಾಯಿಯಾದ ವಿಚಾರವನ್ನು ಶ್ರೀಯಾ ಬಹಿರಂಗಪಡಿಸಿದರು.

ಶ್ರಿಯಾ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಇದಲ್ಲದೆ, ಶ್ರಿಯಾ ತೆಲುಗು, ಹಿಂದಿ, ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಶ್ರಿಯಾ ‘ಅರಸು’ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನಂತರ ರೂಪಾ ಅಯ್ಯರ್​ ನಿರ್ದೇಶನದ ‘ಚಂದ್ರ’ ಸಿನಿಮಾದಲ್ಲಿ ನಟಿಸಿದ್ದರು.

ಇದನ್ನೂ ಓದಿ:

Sri Reddy: ‘ಆತ ಸಲಿಂಗಕಾಮಿ, ಅಂಥ ವ್ಯಕ್ತಿ ಜತೆ ಸಮಂತಾ ಸಂಬಂಧ ಬೆಳೆಸಲ್ಲ’; ನಟಿ ಶ್ರೀರೆಡ್ಡಿ ಶಾಕಿಂಗ್​ ಹೇಳಿಕೆ

Anchor Anasuya: ನಿರೂಪಕಿ ಅನುಸೂಯ ಬಟ್ಟೆ ಬಗ್ಗೆ ಮಾತನಾಡಿ ಪೇಚಿಗೆ ಸಿಲುಕಿದ ನಟ ಕೋಟ ಶ್ರೀನಿವಾಸ ರಾವ್​

Published On - 9:55 am, Tue, 19 October 21

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!