AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela: ಶ್ರೀಲೀಲಾ ಸಿನಿಮಾ ಲೈನಪ್​ ನೋಡಿ ಇತರ ನಟಿಯರಿಗೆ ಶಾಕ್​; ರಶ್ಮಿಕಾ ಬೇಡಿಕೆ ಕುಗ್ಗಿಸಲಿದ್ದಾರೆ ಕನ್ನಡತಿ?

2019ರಲ್ಲಿ ತೆರೆಗೆ ಬಂದ ‘ಕಿಸ್’ ಚಿತ್ರದ ಮೂಲಕ ಶ್ರೀಲೀಲಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರು ಮೊದಲ ಚಿತ್ರದಲ್ಲೇ ಗಮನ ಸೆಳೆದರು. ನಂತರ ‘ಭರಾಟೆ’ ಚಿತ್ರದಲ್ಲಿ ನಟಿಸಿದರು.

Sreeleela: ಶ್ರೀಲೀಲಾ ಸಿನಿಮಾ ಲೈನಪ್​ ನೋಡಿ ಇತರ ನಟಿಯರಿಗೆ ಶಾಕ್​; ರಶ್ಮಿಕಾ ಬೇಡಿಕೆ ಕುಗ್ಗಿಸಲಿದ್ದಾರೆ ಕನ್ನಡತಿ?
ರಶ್ಮಿಕಾ-ಶ್ರೀಲೀಲಾ-ಪೂಜಾ ಹೆಗ್ಡೆ
ರಾಜೇಶ್ ದುಗ್ಗುಮನೆ
|

Updated on:Feb 28, 2023 | 9:40 AM

Share

ನಟಿ ಶ್ರೀಲೀಲಾ (Sreeleela) ಅವರು ಕನ್ನಡದ ನಟಿ. ಅವರಿಗೆ ಕನ್ನಡದ ಮೇಲೆ ಅಪಾರ ಪ್ರೀತಿ ಇದೆ. ತೆಲುಗು ನಾಡಿಗೆ ತೆರಳಿದರೂ ಅವರು ಕನ್ನಡವನ್ನು ಪ್ರಚಾರ ಮಾಡುವ ಕೆಲಸ ಮಾಡಿದ್ದಾರೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟವಾಗುತ್ತಾರೆ. ಅಷ್ಟೇ ಅಲ್ಲ, ಅವರು ಟಾಲಿವುಡ್​ನಲ್ಲಿ ಹಲವು ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದರೂ ಕನ್ನಡದ ಮಂದಿ ಬೆಂಬಲವಾಗಿ ನಿಂತಿದ್ದಾರೆ. ಈಗ ಅವರ ಏಳ್ಗೆ ಕಂಡು ಇತರೆ ಹೀರೋಯಿನ್​ಗಳು ಹೊಟ್ಟೆಕಿಚ್ಚು ಪಟ್ಟುಕೊಳ್ಳುತ್ತಿದ್ದಾರೆ ಎಂದು ವರದಿ ಆಗಿದೆ. ತೆಲುಗು ಚಿತ್ರರಂಗದಲ್ಲಿ ಅಷ್ಟರಮಟ್ಟಿಗೆ ಶ್ರೀಲೀಲಾಗೆ ಬೇಡಿಕೆ ಸೃಷ್ಟಿ ಆಗಿದೆ.

2019ರಲ್ಲಿ ತೆರೆಗೆ ಬಂದ ‘ಕಿಸ್’ ಚಿತ್ರದ ಮೂಲಕ ಶ್ರೀಲೀಲಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರು ಮೊದಲ ಚಿತ್ರದಲ್ಲೇ ಗಮನ ಸೆಳೆದರು. ನಂತರ ‘ಭರಾಟೆ’ ಚಿತ್ರದಲ್ಲಿ ನಟಿಸಿದರು. ಈ ಸಿನಿಮಾ ಯಶಸ್ಸು ಕಾಣದೇ ಇದ್ದರೂ ಅವರ ಖ್ಯಾತಿ ಹೆಚ್ಚಿತು. 2021ರಲ್ಲಿ ರಿಲೀಸ್ ಆದ ‘ಪೆಳ್ಳಿ ಸಂದಡಿ’ ಚಿತ್ರ ಕೂಡ ಹಿಟ್ ಆಯಿತು. ಕಳೆದ ವರ್ಷ ಬಿಡುಗಡೆ ಆದ ‘ಧಮಾಕ’ ಚಿತ್ರದಿಂದ ಅವರು ಸಾಕಷ್ಟು ಜನಪ್ರಿಯತೆ ಪಡೆದರು.

ಕೈಯಲ್ಲಿರುವ ಸಿನಿಮಾಗಳು

ಮಹೇಶ್ ಬಾಬು ನಟನೆಯ 28ನೇ ಚಿತ್ರಕ್ಕೆ ಶ್ರೀಲೀಲಾ ನಾಯಕಿ. ಈ ಚಿತ್ರದಲ್ಲಿ ಎರಡನೇ ಹೀರೋಯಿನ್ ಆದರೂ ಅವರ ಪಾತ್ರಕ್ಕೆ ಪ್ರಾಮುಖ್ಯತೆ ಇದೆ. ‘ಎನ್​ಬಿಕೆ108’ ಚಿತ್ರದಲ್ಲಿ ಬಾಲಯ್ಯ ಅವರ ಮಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ನಿತೀನ್ ಅವರ 32ನೇ ಚಿತ್ರಕ್ಕೆ ಶ್ರೀಲೀಲಾ ನಾಯಕಿ. ‘ಅನಗನಗ ಒಕ ರಾಜು’ ಚಿತ್ರದಲ್ಲೂ ಅವರು ಬಣ್ಣ ಹಚ್ಚುತ್ತಿದ್ದಾರೆ. ವೈಷ್ಣವ್ ತೇಜ್ ಅವರ ಇನ್ನೂ ಶೀರ್ಷಿಕೆ ಇಡದ ನಾಲ್ಕನೇ ಚಿತ್ರಕ್ಕೂ ಶ್ರೀಲೀಲಾ ಹೀರೋಯಿನ್.

ಉಳಿದ ನಟಿಯರಿಗೆ ಶಾಕ್

ಶ್ರೀಲೀಲಾ ಅವರ ಬೆಳವಣಿಗೆ ಇತರ ನಟಿಯರಿಗೆ ಶಾಕ್ ತಂದಿದೆ ಎನ್ನಲಾಗುತ್ತಿದೆ. ಪೂಜಾ ಹೆಗ್ಡೆ, ರಶ್ಮಿಕಾ ಮಂದಣ್ಣ ಅವರು ತೆಲುಗಿನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಅವರು ಕೂಡ ಅಲ್ಲಿ ಫೇಮಸ್ ಆಗಿದ್ದಾರೆ. ಆದರೆ, ಒಟ್ಟೊಟ್ಟಿಗೆ ಇಷ್ಟೊಂದು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸಲು ಸಾಧ್ಯವಾಗಿಲ್ಲ. ಒಂದೊಮ್ಮೆ ಶ್ರೀಲೀಲಾ ಖ್ಯಾತಿ ಮತ್ತಷ್ಟು ಹೆಚ್ಚಿ, ಅವರು ಸ್ಟಾರ್ ನಟರ ಜೊತೆ ನಟಿಸೋಕೆ ಶುರು ಮಾಡಿದರೆ ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆಗೆ ಬೇಡಿಕೆ ಕಡಿಮೆ ಆಗಬಹುದು ಅನ್ನೋದು ಸಿನಿ ಪಂಡಿತರ ಊಹೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:11 am, Tue, 28 February 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ