AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Cylinder: ಆಸ್ಪತ್ರೆಗೆ ಆಕ್ಸಿಜನ್​ ನೀಡಲು ಮುಂದಾದ ನಟಿ ಸುಶ್ಮಿತಾ ಸೇನ್​​ಗೆ ತಪ್ಪಲಿಲ್ಲ ಟ್ರೋಲ್ ಕಾಟ

Sushmita Sen: ದಿನದಿಂದ ದಿನಕ್ಕೆ ಕೊವಿಡ್ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಆಸ್ಪತ್ರೆಗಳಲ್ಲಿ ಹಾಸಿಗೆ ಇಲ್ಲದಂತಾಗಿದೆ. ಅಲ್ಲದೆ, ಆಕ್ಸಿಜನ್​ ಸಿಲಿಂಡರ್​ಗಳ ತೀವ್ರ ಕೊರತೆ ಉಂಟಾಗಿದೆ.

Oxygen Cylinder: ಆಸ್ಪತ್ರೆಗೆ ಆಕ್ಸಿಜನ್​ ನೀಡಲು ಮುಂದಾದ ನಟಿ ಸುಶ್ಮಿತಾ ಸೇನ್​​ಗೆ ತಪ್ಪಲಿಲ್ಲ ಟ್ರೋಲ್ ಕಾಟ
ನಟಿ ಸುಶ್ಮಿತಾ ಸೇನ್​
ಮದನ್​ ಕುಮಾರ್​
|

Updated on: Apr 23, 2021 | 12:32 PM

Share

ಕೊರೊನಾ ವೈರಸ್​ ಹಾವಳಿಗೆ ಇಡೀ ದೇಶವೇ ತತ್ತರಿಸುತ್ತಿದೆ. ಎಲ್ಲ ವಯೋಮಾನದವರು ಈ ಮಾಹಾಮಾರಿಗೆ ಟಾರ್ಗೆಟ್​ ಆಗುತ್ತಿದ್ದಾರೆ. ಈ ಬಾರಿ ಮಹಾನಗರಗಳಲ್ಲಿ ಕೊವಿಡ್​ ಕಾಟ ಹೆಚ್ಚಾಗಿದೆ. ಎಲ್ಲೆಲ್ಲೂ ಭಯಾನಕ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ. ಅದರಲ್ಲೂ ಉಸಿರಾಟ ಸಂಬಂಧಿ ಕಾಯಿಲೆ ಇರುವವರು ಆಕ್ಸಿಜನ್​ ಸಿಲಿಂಡರ್​ ಕೊರತೆಯಿಂದ ಬಳಲುವಂತಾಗಿದೆ. ಈ ಸಂದರ್ಭದಲ್ಲಿ ಸಹಾಯ ಮಾಡಲು ಬಂದ ಬಾಲಿವುಡ್​ ನಟಿ ಸುಶ್ಮಿತಾ ಸೇನ್ ಅವರನ್ನು ಕೆಲವರು ಟ್ರೋಲ್​ ಮಾಡಿದ್ದಾರೆ.

ದಿನದಿಂದ ದಿನಕ್ಕೆ ಕೊವಿಡ್ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಆಸ್ಪತ್ರೆಗಳಲ್ಲಿ ಹಾಸಿಗೆ ಇಲ್ಲದಂತಾಗಿದೆ. ಅಲ್ಲದೆ, ಆಕ್ಸಿಜನ್​ ಸಿಲಿಂಡರ್​ಗಳ ಕೊರತೆ ಉಂಟಾಗಿದೆ. ದೆಹಲಿಯ ಒಂದು ಆಸ್ಪತ್ರೆಯಲ್ಲಿ ಆಕ್ಸಿಜನ್​ ಇಲ್ಲದೇ ರೋಗಿಗಳು ಪರದಾಡುತ್ತಿರುವುದು ನಟಿ ಸುಶ್ಮಿತಾ ಸೇನ್​ ಅವರ ಗಮನಕ್ಕೆ ಬಂದ ತಕ್ಷಣ ಅವರು ಸಹಾಯ ಮಾಡಲು ಮುಂದಾದರು. ಕೈಲಾದಷ್ಟು ಆಕ್ಸಿಜನ್​ ಸಿಲಿಂಡರ್​ಗಳನ್ನು ವ್ಯವಸ್ಥೆ ಮಾಡಿದರು. ಆದರೆ ಅವುಗಳನ್ನು ಮುಂಬೈನಿಂದ ದೆಹಲಿಗೆ ಕಳಿಸುವುದು ಹೇಗೆ ಎಂಬ ಚಿಂತೆ ಅವರಿಗೆ ಎದುರಾಯಿತು.

ಈ ಸಮಸ್ಯೆಯನ್ನು ಅವರು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡರು. ಅನೇಕರಿಂದ ಹಲವು ಬಗೆಯ ಪ್ರತಿಕ್ರಿಯೆಗಳು ಬಂದವು. ಅಷ್ಟರಲ್ಲಾಗಲೇ ದೆಹಲಿಯ ಆಸ್ಪತ್ರೆಗೆ ಆಕ್ಸಿಜನ್​ ವ್ಯವಸ್ಥೆ ಬೇರೆ ಕಡೆಯಿಂದ ಆಯಿತು ಎಂಬ ವಿಷಯ ತಿಳಿದು ಸುಶ್ಮಿತಾ ನಿಟ್ಟುಸಿರು ಬಿಟ್ಟರು. ಆದರೆ ಈ ನಡುವೆ ಅವರನ್ನು ಕೆಲವರು ಟ್ರೋಲ್​ ಮಾಡಿದ್ದಾರೆ. ಮುಂಬೈನಲ್ಲಿಯೇ ಪರಿಸ್ಥಿತಿ ಹದಗೆಡುತ್ತಿರುವಾಗ ನೀವು ಆಕ್ಸಿಜನ್​ ಸಿಲಿಂಡರ್​ಗಳನ್ನು ದೆಹಲಿಗೆ ನೀಡುವ ಅವಶ್ಯಕತೆ ಏನಿದೆ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ.

ಆಕ್ಸಿಜನ್​ ಕೊರತೆ ಎಲ್ಲ ಕಡೆಗೂ ಇದೆ. ಇದೇ ಸಿಲಿಂಡರ್​ಗಳನ್ನು ಮುಂಬೈನ ಯಾವುದಾದರೂ ಆಸ್ಪತ್ರೆಗೆ ನೀಡಬಾರದೇಕೆ ಎಂದು ವ್ಯಕ್ತಿಯೊಬ್ಬರು ಮಾಡಿದ ಕಾಮೆಂಟ್​ಗೆ ಸುಶ್ಮಿತಾ ತಿರುಗೇಟು ನೀಡಿದ್ದಾರೆ. ‘ಮುಂಬೈನಲ್ಲಿ ಇನ್ನೂ ಆಕ್ಸಿಜನ್​ ಸಿಲಿಂಡರ್​ಗಳು ಸಿಗುತ್ತಿವೆ. ಆದರೆ ದೆಹಲಿಗೆ ಇದರ ಅನಿವಾರ್ಯತೆ ಹೆಚ್ಚಿದೆ. ಅದರಲ್ಲೂ ಚಿಕ್ಕ ಆಸ್ಪತ್ರೆಗಳಿಗೆ ಹೆಚ್ಚು ಅವಶ್ಯಕತೆ ಇದೆ. ನಿಮ್ಮ ಕೈಯಲ್ಲಿ ಸಾಧ್ಯವಾದರೆ ಸಹಾಯ ಮಾಡಿ’ ಎಂದು ಸುಶ್ಮಿತಾ ಉತ್ತರಿಸಿದ್ದಾರೆ.

ಮುಂಬೈನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಏ.14ರಿಂದ 15 ದಿನಗಳ ಲಾಕ್​ಡೌನ್​ ಜಾರಿಯಲ್ಲಿದೆ. ಸಿನಿಮಾ, ಧಾರಾವಾಹಿ, ರಿಯಾಲಿಟಿ ಶೋಗಳ ಚಿತ್ರೀಕರಣ ಸ್ಥಗಿತಗೊಳಿಸಲಾಗಿದೆ. ಅನೇಕ ಸೆಲೆಬ್ರಿಟಿಗಳು ಮುಂಬೈ ತೊರೆದು ಬೇರೆ ಊರುಗಳಿಗೆ ತೆರಳುತ್ತಿದ್ದಾರೆ.

ಇದನ್ನೂ ಓದಿ: Shravan Rathod: ಖ್ಯಾತ ಸಂಗೀತ ನಿರ್ದೇಶಕ ಶ್ರವಣ್​ ರಾಥೋಡ್​ ಕೊರೊನಾ ವೈರಸ್​ನಿಂದ ನಿಧನ; ಚಿತ್ರರಂಗಕ್ಕೆ ಆಘಾತ

ಸ್ಯಾಂಡಲ್​ವುಡ್​ ಯುವ ನಟ, ನಿರ್ಮಾಪಕ ಕೊರೊನಾಗೆ ಬಲಿ

(Actress Sushmita Sen replies to Twitter user who criticized her for sending oxygen cylinders to Delhi from Mumbai)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್