AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Cylinder: ಆಸ್ಪತ್ರೆಗೆ ಆಕ್ಸಿಜನ್​ ನೀಡಲು ಮುಂದಾದ ನಟಿ ಸುಶ್ಮಿತಾ ಸೇನ್​​ಗೆ ತಪ್ಪಲಿಲ್ಲ ಟ್ರೋಲ್ ಕಾಟ

Sushmita Sen: ದಿನದಿಂದ ದಿನಕ್ಕೆ ಕೊವಿಡ್ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಆಸ್ಪತ್ರೆಗಳಲ್ಲಿ ಹಾಸಿಗೆ ಇಲ್ಲದಂತಾಗಿದೆ. ಅಲ್ಲದೆ, ಆಕ್ಸಿಜನ್​ ಸಿಲಿಂಡರ್​ಗಳ ತೀವ್ರ ಕೊರತೆ ಉಂಟಾಗಿದೆ.

Oxygen Cylinder: ಆಸ್ಪತ್ರೆಗೆ ಆಕ್ಸಿಜನ್​ ನೀಡಲು ಮುಂದಾದ ನಟಿ ಸುಶ್ಮಿತಾ ಸೇನ್​​ಗೆ ತಪ್ಪಲಿಲ್ಲ ಟ್ರೋಲ್ ಕಾಟ
ನಟಿ ಸುಶ್ಮಿತಾ ಸೇನ್​
ಮದನ್​ ಕುಮಾರ್​
|

Updated on: Apr 23, 2021 | 12:32 PM

Share

ಕೊರೊನಾ ವೈರಸ್​ ಹಾವಳಿಗೆ ಇಡೀ ದೇಶವೇ ತತ್ತರಿಸುತ್ತಿದೆ. ಎಲ್ಲ ವಯೋಮಾನದವರು ಈ ಮಾಹಾಮಾರಿಗೆ ಟಾರ್ಗೆಟ್​ ಆಗುತ್ತಿದ್ದಾರೆ. ಈ ಬಾರಿ ಮಹಾನಗರಗಳಲ್ಲಿ ಕೊವಿಡ್​ ಕಾಟ ಹೆಚ್ಚಾಗಿದೆ. ಎಲ್ಲೆಲ್ಲೂ ಭಯಾನಕ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ. ಅದರಲ್ಲೂ ಉಸಿರಾಟ ಸಂಬಂಧಿ ಕಾಯಿಲೆ ಇರುವವರು ಆಕ್ಸಿಜನ್​ ಸಿಲಿಂಡರ್​ ಕೊರತೆಯಿಂದ ಬಳಲುವಂತಾಗಿದೆ. ಈ ಸಂದರ್ಭದಲ್ಲಿ ಸಹಾಯ ಮಾಡಲು ಬಂದ ಬಾಲಿವುಡ್​ ನಟಿ ಸುಶ್ಮಿತಾ ಸೇನ್ ಅವರನ್ನು ಕೆಲವರು ಟ್ರೋಲ್​ ಮಾಡಿದ್ದಾರೆ.

ದಿನದಿಂದ ದಿನಕ್ಕೆ ಕೊವಿಡ್ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಆಸ್ಪತ್ರೆಗಳಲ್ಲಿ ಹಾಸಿಗೆ ಇಲ್ಲದಂತಾಗಿದೆ. ಅಲ್ಲದೆ, ಆಕ್ಸಿಜನ್​ ಸಿಲಿಂಡರ್​ಗಳ ಕೊರತೆ ಉಂಟಾಗಿದೆ. ದೆಹಲಿಯ ಒಂದು ಆಸ್ಪತ್ರೆಯಲ್ಲಿ ಆಕ್ಸಿಜನ್​ ಇಲ್ಲದೇ ರೋಗಿಗಳು ಪರದಾಡುತ್ತಿರುವುದು ನಟಿ ಸುಶ್ಮಿತಾ ಸೇನ್​ ಅವರ ಗಮನಕ್ಕೆ ಬಂದ ತಕ್ಷಣ ಅವರು ಸಹಾಯ ಮಾಡಲು ಮುಂದಾದರು. ಕೈಲಾದಷ್ಟು ಆಕ್ಸಿಜನ್​ ಸಿಲಿಂಡರ್​ಗಳನ್ನು ವ್ಯವಸ್ಥೆ ಮಾಡಿದರು. ಆದರೆ ಅವುಗಳನ್ನು ಮುಂಬೈನಿಂದ ದೆಹಲಿಗೆ ಕಳಿಸುವುದು ಹೇಗೆ ಎಂಬ ಚಿಂತೆ ಅವರಿಗೆ ಎದುರಾಯಿತು.

ಈ ಸಮಸ್ಯೆಯನ್ನು ಅವರು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡರು. ಅನೇಕರಿಂದ ಹಲವು ಬಗೆಯ ಪ್ರತಿಕ್ರಿಯೆಗಳು ಬಂದವು. ಅಷ್ಟರಲ್ಲಾಗಲೇ ದೆಹಲಿಯ ಆಸ್ಪತ್ರೆಗೆ ಆಕ್ಸಿಜನ್​ ವ್ಯವಸ್ಥೆ ಬೇರೆ ಕಡೆಯಿಂದ ಆಯಿತು ಎಂಬ ವಿಷಯ ತಿಳಿದು ಸುಶ್ಮಿತಾ ನಿಟ್ಟುಸಿರು ಬಿಟ್ಟರು. ಆದರೆ ಈ ನಡುವೆ ಅವರನ್ನು ಕೆಲವರು ಟ್ರೋಲ್​ ಮಾಡಿದ್ದಾರೆ. ಮುಂಬೈನಲ್ಲಿಯೇ ಪರಿಸ್ಥಿತಿ ಹದಗೆಡುತ್ತಿರುವಾಗ ನೀವು ಆಕ್ಸಿಜನ್​ ಸಿಲಿಂಡರ್​ಗಳನ್ನು ದೆಹಲಿಗೆ ನೀಡುವ ಅವಶ್ಯಕತೆ ಏನಿದೆ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ.

ಆಕ್ಸಿಜನ್​ ಕೊರತೆ ಎಲ್ಲ ಕಡೆಗೂ ಇದೆ. ಇದೇ ಸಿಲಿಂಡರ್​ಗಳನ್ನು ಮುಂಬೈನ ಯಾವುದಾದರೂ ಆಸ್ಪತ್ರೆಗೆ ನೀಡಬಾರದೇಕೆ ಎಂದು ವ್ಯಕ್ತಿಯೊಬ್ಬರು ಮಾಡಿದ ಕಾಮೆಂಟ್​ಗೆ ಸುಶ್ಮಿತಾ ತಿರುಗೇಟು ನೀಡಿದ್ದಾರೆ. ‘ಮುಂಬೈನಲ್ಲಿ ಇನ್ನೂ ಆಕ್ಸಿಜನ್​ ಸಿಲಿಂಡರ್​ಗಳು ಸಿಗುತ್ತಿವೆ. ಆದರೆ ದೆಹಲಿಗೆ ಇದರ ಅನಿವಾರ್ಯತೆ ಹೆಚ್ಚಿದೆ. ಅದರಲ್ಲೂ ಚಿಕ್ಕ ಆಸ್ಪತ್ರೆಗಳಿಗೆ ಹೆಚ್ಚು ಅವಶ್ಯಕತೆ ಇದೆ. ನಿಮ್ಮ ಕೈಯಲ್ಲಿ ಸಾಧ್ಯವಾದರೆ ಸಹಾಯ ಮಾಡಿ’ ಎಂದು ಸುಶ್ಮಿತಾ ಉತ್ತರಿಸಿದ್ದಾರೆ.

ಮುಂಬೈನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಏ.14ರಿಂದ 15 ದಿನಗಳ ಲಾಕ್​ಡೌನ್​ ಜಾರಿಯಲ್ಲಿದೆ. ಸಿನಿಮಾ, ಧಾರಾವಾಹಿ, ರಿಯಾಲಿಟಿ ಶೋಗಳ ಚಿತ್ರೀಕರಣ ಸ್ಥಗಿತಗೊಳಿಸಲಾಗಿದೆ. ಅನೇಕ ಸೆಲೆಬ್ರಿಟಿಗಳು ಮುಂಬೈ ತೊರೆದು ಬೇರೆ ಊರುಗಳಿಗೆ ತೆರಳುತ್ತಿದ್ದಾರೆ.

ಇದನ್ನೂ ಓದಿ: Shravan Rathod: ಖ್ಯಾತ ಸಂಗೀತ ನಿರ್ದೇಶಕ ಶ್ರವಣ್​ ರಾಥೋಡ್​ ಕೊರೊನಾ ವೈರಸ್​ನಿಂದ ನಿಧನ; ಚಿತ್ರರಂಗಕ್ಕೆ ಆಘಾತ

ಸ್ಯಾಂಡಲ್​ವುಡ್​ ಯುವ ನಟ, ನಿರ್ಮಾಪಕ ಕೊರೊನಾಗೆ ಬಲಿ

(Actress Sushmita Sen replies to Twitter user who criticized her for sending oxygen cylinders to Delhi from Mumbai)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!