AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಯ ಟಾಪ್​ಲೆಸ್​ ಫೋಟೋಗೆ ಕೊಳಕು ಕಮೆಂಟ್​ ಮಾಡಿ, ಆಮೇಲೆ ಅಕ್ಕ ಎಂದ ಈ ಭೂಪ ಯಾರು?

Tina Dutta Topless Photo: ಟೀನಾ ದತ್ತ ಅವರ ಟಾಪ್​ಲೆಸ್​ ಫೋಟೋ ಕಂಡ ನೆಟ್ಟಿಗನೊಬ್ಬ ತೀರಾ ಅಸಭ್ಯ, ಅಶ್ಲೀಲ ಭಾಷೆಯಲ್ಲಿ ಕಮೆಂಟ್​ ಮಾಡಿದ್ದಾನೆ. ಅಂತಹ ಕೀಳು ಪದಗಳನ್ನು ಬಳಸಿ ಆತ ಕಮೆಂಟ್​ ಮಾಡಿರುವುದು ನಟಿಯ ಕೋಪಕ್ಕೆ ಕಾರಣ ಆಗಿದೆ.

ನಟಿಯ ಟಾಪ್​ಲೆಸ್​ ಫೋಟೋಗೆ ಕೊಳಕು ಕಮೆಂಟ್​ ಮಾಡಿ, ಆಮೇಲೆ ಅಕ್ಕ ಎಂದ ಈ ಭೂಪ ಯಾರು?
ಟೀನಾ ದತ್ತ
TV9 Web
| Edited By: |

Updated on:Jun 04, 2021 | 9:38 AM

Share

ಸೆಲೆಬ್ರಿಟಿಗಳಿಗೆ ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲಿಗರು ಕಾಟ ಕೊಡುವುದು ಹೊಸದೇನಲ್ಲ. ಆದರೆ ಎಲ್ಲದಕ್ಕೂ ಒಂದು ಮಿತಿ ಇರಲೇಬೇಕು. ನೆಟ್ಟಿಗರ ಕಮೆಂಟ್​ ಕೆಲವೊಮ್ಮೆ ಅಸಭ್ಯತೆಯ ಗಡಿ ಮೀರುತ್ತದೆ. ಆಗ ಯಾವ ಸೆಲೆಬ್ರಿಟಿಯೂ ಸುಮ್ಮನೆ ಕೂರುವುದಿಲ್ಲ. ಇತ್ತೀಚೆಗೆ ನಟಿ ಟೀನಾ ದತ್ತ ಅವರಿಗೆ ಅದೇ ರೀತಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಫಾಲೋ ಮಾಡುತ್ತಿರುವ ಒಬ್ಬ ವ್ಯಕ್ತಿಯ ಬಣ್ಣವನ್ನು ಅವರು ಬಯಲು ಮಾಡಿದ್ದಾರೆ. ಆತ ಮಾಡಿದ ಕೊಳಕು ಕಮೆಂಟ್​ಗಳ ಸ್ಕ್ರೀನ್​ಶಾಟ್​ಗಳನ್ನು ಟೀನಾ ದತ್ತ ಬಹಿರಂಗ ಪಡಿಸಿದ್ದಾರೆ. ಇಷ್ಟೆಲ್ಲ ಆದ ಬಳಿಕ ಆತ ಹೊಸ ಡ್ರಾಮಾ ಶುರು ಮಾಡಿದ್ದಾನೆ.

ಹಿಂದಿ ಕಿರುತೆರೆಯ ಅನೇಕ ಧಾರಾವಾಹಿ ಮತ್ತು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡು ಜನಪ್ರಿಯತೆ ಗಳಿಸಿರುವ ನಟಿ ಟೀನಾ ದತ್ತ ಅವರು ಸೋಶಿಯಲ್​ ಮೀಡಿಯಾದಲ್ಲೂ ಹೆಚ್ಚು ಫೇಮಸ್​​ ಆಗಿದ್ದಾರೆ. ಇತ್ತೀಚೆಗೆ ಅವರು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಒಂದು ಫೋಟೋ ಹಂಚಿಕೊಂಡಿದ್ದರು. ಟಾಪ್​ಲೆಸ್​ ಆಗಿ ಪೋಸ್​ ನೀಡಿ, ಮಾದಕ ನೋಟ ಬೀರಿದ್ದರು. ಅದನ್ನು ಕಂಡ ನೆಟ್ಟಿಗನೊಬ್ಬ ತೀರಾ ಅಸಭ್ಯ, ಅಶ್ಲೀಲ ಭಾಷೆಯಲ್ಲಿ ಕಮೆಂಟ್​ ಮಾಡಿದ್ದಾನೆ. ಈ ಸುದ್ದಿಯಲ್ಲಿ ಆ ಪದಗಳನ್ನು ಬರೆಯಲು ಸಾಧ್ಯವೇ ಇಲ್ಲ. ಅಂತಹ ಕೀಳು ಪದಗಳನ್ನು ಬಳಸಿ ಆತ ಕಮೆಂಟ್​ ಮಾಡಿರುವುದು ಟೀನಾ ದತ್ತ ಕೋಪಕ್ಕೆ ಕಾರಣ ಆಗಿದೆ. ಕೂಡಲೇ ಆತನ ಕಮೆಂಟ್​ಗಳ ಸ್ಕ್ರೀನ್​ ಶಾಟ್​ ಹಂಚಿಕೊಂಡಿರುವ ಟೀನಾ ದತ್ತ ಅವರು ಆ ಕಿಡಿಗೇಡಿಯ ಮರ್ಯಾದೆ ಹರಾಜು ಹಾಕಿದ್ದಾರೆ.

ಆತನ ಫೋಟೋ ಮತ್ತು ಗುರುತನ್ನು ಜಗಜ್ಜಾಹೀರು ಮಾಡುವ ಮೂಲಕ ಕೀಳು ಮನಸ್ಥಿತಿಯ ಆ ನೆಟ್ಟಿಗನಿಗೆ ಟೀನಾ ದತ್ತ ಪಾಠ ಕಲಿಸಿದ್ದಾರೆ. ಈಗ ಎಲ್ಲರೆದುರು ಮಾನ ಹರಾಜು ಆಗುತ್ತಿದ್ದಂತೆಯೇ ಆತ ಟೀನಾಗೆ ಮೆಸೇಜ್​ ಮಾಡಿ ಕ್ಷಮೆ ಕೇಳಿದ್ದಾನೆ. ಅಚ್ಚರಿ ಎಂದರೆ, ಕೆಲವೇ ಕ್ಷಣಗಳ ಹಿಂದೆ ಅಶ್ಲೀಲ ಪದಗಳಿಂದ ಕಮೆಂಟ್​ ಮಾಡಿದ್ದವನು ಈಗ ‘ಅಕ್ಕ.. ದಯವಿಟ್ಟು ಕ್ಷಮಿಸಿ’ ಎಂದು ಮೆಸೇಜ್​ ಮಾಡಿರುವುದು ಕಂಡು ಟೀನಾಗೆ ಅಚ್ಚರಿ ಆಗಿದೆ. ‘ನೋಡಿ ಈಗ ಅಕ್ಕ ಎನ್ನುತ್ತಿದ್ದಾನೆ’ ಎಂದು ಆ ಮೆಸೇಜ್​ನ ಸ್ಕ್ರೀನ್​ಶಾಟ್ ಅನ್ನು ಕೂಡ ಟೀನಾ ಬಹಿರಂಗಪಡಿಸಿದ್ದಾರೆ.

ಇಷ್ಟೆಲ್ಲ ಆದ ಬಳಿಕ ಅವರು ಕಮೆಂಟ್​ ಆಯ್ಕೆಯನ್ನೇ ನಿಷ್ಕ್ರಿಯಗೊಳಿಸಿದ್ದಾರೆ.

ಇದನ್ನೂ ಓದಿ:

ನೀಲಿ ಚಿತ್ರಕ್ಕೆ ಮಲಯಾಳಂ ನಟಿ ಫೋಟೋ ಅಂಟಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ ಶಾಕ್​ ಆದ ರಮ್ಯಾ ಸುರೇಶ್

ನಿಮ್ಮ ಪರ್ಸನಲ್​ ಮೆಸೇಜ್​ ಬೇರೆ ಯಾರೂ ಓದಬಾರದು ಎಂದರೆ ಏನು ಮಾಡ್ಬೇಕು? ಇಲ್ಲಿದೆ ಸನ್ನಿ ಲಿಯೋನ್​ ಉಪಾಯ

Published On - 9:35 am, Fri, 4 June 21

Follow Us
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!