AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉರಿ’ ನಿರ್ದೇಶಕನ ಜೊತೆ ಗುಟ್ಟಾಗಿ ಮದುವೆಯಾದ ‘ಉಲ್ಲಾಸ ಉತ್ಸಾಹ’ ಚಿತ್ರದ ನಟಿ ಯಾಮಿ ಗೌತಮ್​

Yami Gautam: ಕನ್ನಡದ ನಟಿ ಪ್ರಣಿತಾ ಸುಭಾಷ್​ ಅವರು ಗುಟ್ಟಾಗಿ ಮದುವೆ ಆದ ಬೆನ್ನಲ್ಲೇ ‘ಉಲ್ಲಾಸ ಉತ್ಸಾಹ’ ಸಿನಿಮಾ ನಟಿ ಯಾಮಿ ಗೌತಮ್​ ಕೂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರ ಮದುವೆ ಫೋಟೋಗಳು ವೈರಲ್​ ಆಗಿವೆ.

‘ಉರಿ’ ನಿರ್ದೇಶಕನ ಜೊತೆ ಗುಟ್ಟಾಗಿ ಮದುವೆಯಾದ ‘ಉಲ್ಲಾಸ ಉತ್ಸಾಹ’ ಚಿತ್ರದ ನಟಿ ಯಾಮಿ ಗೌತಮ್​
ಯಾಮಿ ಗೌತಮ್, ಆದಿತ್ಯ ಧಾರ್​
ಮದನ್​ ಕುಮಾರ್​
|

Updated on: Jun 05, 2021 | 8:29 AM

Share

‘ಉಲ್ಲಾಸ ಉತ್ಸಾಹ’ ಸಿನಿಮಾದಲ್ಲಿ ಗೋಲ್ಡನ್​ ಸ್ಟಾರ್​ ಗಣೇಶ್​ ಜೊತೆ ತೆರೆಹಂಚಿಕೊಂಡಿದ್ದ ನಟಿ ಯಾಮಿ ಗೌತಮ್​ ಅವರು ಸದ್ದಿಲ್ಲದೇ ಹಸೆಮಣೆ ಏರಿದ್ದಾರೆ. ಬಾಲಿವುಡ್​ನ ‘ಉರಿ’ ಚಿತ್ರಕ್ಕೆ ನಿರ್ದೇಶನ ಮಾಡಿ ಭಾರಿ ಯಶಸ್ಸು ಕಂಡ ನಿರ್ದೇಶಕ ಆದಿತ್ಯ ಧಾರ್​ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಯಾಮಿ ಮದುವೆ ಆಗುತ್ತಾರೆ ಎಂಬ ಸುಳಿವು ಕೂಡ ಇರಲಿಲ್ಲ. ಕೆಲವೇ ಕೆಲವರ ಸಮ್ಮುಖದಲ್ಲಿ ವಿವಾಹ ಸಮಾರಂಭ ನೆರವೇರಿದೆ. ಈ ಹೊಸ ಜೋಡಿ ತಮ್ಮ ಮದುವೆ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಬಳಿಕವೇ ವಿಷಯ ಬಹಿರಂಗ ಆಗಿದೆ.

ಸೆಲೆಬ್ರಿಟಿಗಳ ವಿವಾಹ ಎಂದರೆ ಅದ್ದೂರಿಯಾಗಿ ನಡೆಯುವುದು ಸಹಜ. ಆದರೆ ದೇಶಾದ್ಯಂತ ಕೊವಿಡ್​ ಹಾವಳಿ ಹೆಚ್ಚಿರುವುದರಿಂದ ಎಲ್ಲರೂ ಸಿಂಪಲ್​ ಆಗಿ ಮದುವೆ ಆಗುತ್ತಿದ್ದಾರೆ. ಯಾಮಿ ಗೌತಮ್​ ಮತ್ತು ಆದಿತ್ಯ ಧಾರ್​ ಕೂಡ ಅದೇ ಹಾದಿ ತುಳಿದಿದ್ದಾರೆ. 2019ರಲ್ಲಿ ತೆರೆಕಂಡ ‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಸಿನಿಮಾ ದೊಡ್ಡ ಹಿಟ್ ಆಯಿತು. ಆ ಚಿತ್ರದಿಂದ ಆದಿತ್ಯ ಧಾರ್​ ಅವರ ಜನಪ್ರಿಯತೆ ಹೆಚ್ಚಿತು. ವಿಕ್ಕಿ ಕೌಶಾಲ್​ ನಾಯಕನಾಗಿದ್ದ ಆ ಚಿತ್ರದಲ್ಲಿ ಯಾಮಿ ಗೌತಮ್​ ಅವರು ರಾ ಏಜೆಂಟ್​ ಪಾತ್ರ ಮಾಡಿದ್ದರು. ಆಗಲೇ ಆದಿತ್ಯ ಮತ್ತು ಯಾಮಿ ನಡುವೆ ಗೆಳೆತನ ಬೆಳೆದಿತ್ತು. ಈಗ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮದುವೆ ಫೋಟೋಗಳನ್ನು ಹಂಚಿಕೊಂಡಿರುವ ಯಾಮಿ ಗೌತಮ್​ ಅವರು ಎಲ್ಲರ ಆಶೀರ್ವಾದ ಕೋರಿದ್ದಾರೆ. ‘ಕುಟುಂಬದವರ ಆಶೀರ್ವಾದದೊಂದಿಗೆ ನಾವು ಇಂದು ಮದುವೆ ಆದೆವು. ಕೇವಲ ನಮ್ಮ ಆಪ್ತರ ಸಮ್ಮುಖದಲ್ಲಿ ಖಾಸಗಿಯಾಗಿ ಈ ವಿವಾಹ ಸಮಾರಂಭ ನೆರವೇರಿತು. ಪ್ರೀತಿ-ಸ್ನೇಹದ ನಮ್ಮ ಈ ಹೊಸ ಪಯಣಕ್ಕೆ ನಿಮ್ಮೆಲ್ಲರ ಆಶೀರ್ವಾದ ಬೇಕು’ ಎಂದು ಅವರು ತಿಳಿಸಿದ್ದಾರೆ.

ನವಜೋಡಿಗೆ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ. ಬಾಲಿವುಡ್​ ಸೆಲೆಬ್ರಿಟಿಗಳಾದ ದಿಯಾ ಮಿರ್ಜಾ, ವಾಣಿ ಕಪೂರ್​, ಜಾಕ್ವಲಿನ್​ ಫರ್ನಾಂಡಿಸ್​, ನೇಹಾ ಧೂಪಿಯಾ ಮುಂತಾದವರು ಕಮೆಂಟ್​ ಮೂಲಕ ಅಭಿನಂದನೆ ತಿಳಿಸಿದ್ದಾರೆ. ಯಾಮಿ ಪತಿ ಆದಿತ್ಯ ಧಾರ್​ ಈಗ ‘ದಿ ಇಮ್ಮಾರ್ಟಲ್​ ಅಶ್ವತ್ಥಾಮ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಆ ಚಿತ್ರದಲ್ಲೂ ವಿಕ್ಕಿ ಕೌಶಾಲ್​ ಹೀರೋ.

ಕನ್ನಡದಲ್ಲಿ ‘ಉಲ್ಲಾಸ ಉತ್ಸಾಹ’ ಸಿನಿಮಾ ಮಾಡಿದ ಬಳಿಕ ಬೇರೆ ಬೇರೆ ಭಾಷೆಗಳಿಂದ ಯಾಮಿ ಗೌತಮ್​ ಅವರಿಗೆ ಆಫರ್​ಗಳು ಬರಲಾರಂಭಿಸಿದವು. ಸದ್ಯ ಅವರು ಹಿಂದಿಯ ‘ಭೂತ್​ ಪೊಲೀಸ್’​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ನಟಿ ಪ್ರಣಿತಾ ಕೂಡ ಇದೇ ರೀತಿ ಗುಟ್ಟಾಗಿ ಮದುವೆ ಆಗಿದ್ದರು.

ಇದನ್ನೂ ಓದಿ:

‘ನಮ್ಮನ್ನು ಕ್ಷಮಿಸಿ’; ಮದುವೆ ಬೆನ್ನಲ್ಲೇ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದ ಪ್ರಣಿತಾ ಮತ್ತು ನಿತಿನ್

Pranitha Marriage: ಪ್ರಣಿತಾ ಮದುವೆ ಬಳಿಕ ರಮ್ಯಾ ಕಡೆಗೆ ಪ್ರಶ್ನೆ ಎಸೆದ ಅಭಿಮಾನಿಗಳು​; ಏನಿದು ಲಿಂಕ್​?

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ