AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಷ್ಟು ಕೋಟಿ ಕೊಟ್ಟರೂ ಈ ಮದುಮಗಳು ಧರಿಸಿದ ಸೀರೆಗೆ ಬೆಲೆ ಕಟ್ಟೋಕಾಗಲ್ಲ; ಏನಿದರ ವಿಶೇಷ?

Yami Gautam Wedding: ಸೆಲೆಬ್ರಿಟಿಗಳ ಕಾಸ್ಟ್ಯೂಮ್​ ಎಂದರೆ ಅವುಗಳ ದುಬಾರಿ ಬೆಲೆಯ ಕಾರಣಕ್ಕಾಗಿ ಸುದ್ದಿ ಆಗುತ್ತವೆ. ಆದರೆ ಯಾಮಿ ಗೌತಮ್​ ಧರಿಸಿದ ಸೀರೆಯ ಬೆಲೆಯನ್ನು ದುಡ್ಡಿನಿಂದ ಅಳೆಯಲು ಸಾಧ್ಯವಿಲ್ಲ.

ಎಷ್ಟು ಕೋಟಿ ಕೊಟ್ಟರೂ ಈ ಮದುಮಗಳು ಧರಿಸಿದ ಸೀರೆಗೆ ಬೆಲೆ ಕಟ್ಟೋಕಾಗಲ್ಲ; ಏನಿದರ ವಿಶೇಷ?
ಆದಿತ್ಯ ಧಾರ್ ಜೊತೆ ಹಸೆಮಣೆ ಏರಿದ ಯಾಮಿ ಗೌತಮ್​
ಮದನ್​ ಕುಮಾರ್​
| Edited By: |

Updated on: Jun 12, 2021 | 4:39 PM

Share

ಸೆಲೆಬ್ರಿಟಿಗಳ ಮದುವೆ ಸಿಕ್ಕಾಪಟ್ಟೆ ಅದ್ದೂರಿಯಾಗಿ ನಡೆಯುವುದು ಕಾಮನ್​. ಆದರೆ ಈಗ ಎಲ್ಲೆಲ್ಲೂ ಲಾಕ್​ಡೌನ್​ ಇರುವುದರಿಂದ ಹಾಗೂ ಕೊರೊನಾ ವೈರಸ್​ ಹರಡುವ ಭಯದಿಂದ ಎಲ್ಲರೂ ಸಿಂಪಲ್​ ಆಗಿ ಮದುವೆ ಆಗುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ನಟಿ ಯಾಮಿ ಗೌತಮ್​ ಅವರು ಗುಟ್ಟಾಗಿ ಮದುವೆಯಾದರು. ಮದುವೆ ಫೋಟೋ ಬಹಿರಂಗ ಆದ ಬಳಿಕವೇ ಈ ವಿಷಯ ಜಗತ್ತಿಗೆ ಗೊತ್ತಾಯಿತು. ಈ ಶುಭ ಸಮಾರಂಭದಲ್ಲಿ ಅವರು ಧರಿಸಿದ ಸೀರೆ ಈಗ ಟಾಕ್​ ಆಫ್​ ದಿ ಟೌನ್​ ಆಗಿದೆ.

ಬಾಲಿವುಡ್​ನ ಸೂಪರ್​ ಹಿಟ್​ ಸಿನಿಮಾ ‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಚಿತ್ರದ ನಿರ್ದೇಶಕ ಆದಿತ್ಯ ಧಾರ್​ ಜೊತೆ ಯಾಮಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ಮದುವೆ ನಡೆಯಿತು. ಲಾಕ್​ಡೌನ್​ ಇರುವ ಕಾರಣ ಮದುವೆಗಾಗಿ ಅದ್ದೂರಿಯಾಗಿ ಶಾಪಿಂಗ್​ ಮಾಡಲು ಸಾಧ್ಯವಾಗಿಲ್ಲ. ವೃತ್ತಿಪರ ಮೇಕಪ್​ ಕಲಾವಿದರನ್ನೂ ಕರೆಸದೇ ಸ್ವತಃ ಯಾಮಿ ಗೌತಮ್​ ಅವರೇ ಮೇಕಪ್​ ಮಾಡಿಕೊಂಡರು. ಇದೆಲ್ಲದರ ನಡುವೆ ಯಾಮಿ ಧರಿಸಿದ ಸೀರೆ ಎಲ್ಲರ ಗಮನ ಸೆಳೆಯುತ್ತಿದೆ. ಅದಕ್ಕೆ ವಿಶೇಷ ಕಾರಣ ಕೂಡ ಇದೆ.

ಸೆಲೆಬ್ರಿಟಿಗಳ ಕಾಸ್ಟ್ಯೂಮ್​ ಎಂದರೆ ಅವುಗಳ ದುಬಾರಿ ಬೆಲೆಯ ಕಾರಣಕ್ಕಾಗಿ ಸುದ್ದಿ ಆಗುತ್ತವೆ. ಆದರೆ ಯಾಮಿ ಧರಿಸಿದ ಸೀರೆಯ ಬೆಲೆಯನ್ನು ದುಡ್ಡಿನಿಂದ ಅಳೆಯಲು ಸಾಧ್ಯವಿಲ್ಲ. ಯಾಕೆಂದರೆ ಅದು ಅವರ ತಾಯಿಯ ಸೀರೆ. ಅಚ್ಚರಿ ವಿಚಾರ ಏನೆಂದರೆ, ಅದು 33 ವರ್ಷಗಳಷ್ಟು ಹಳೆಯ ಸೀರೆ! ಅದರೂ ಈ ತಲೆಮಾರಿನ ಫ್ಯಾಷನ್​ಗೆ ಪೈಪೋಟಿ ನೀಡುವ ರೀತಿಯಲ್ಲಿ ಅದನ್ನು ಧರಿಸಿ ಯಾಮಿ ಮಿಂಚಿದ್ದಾರೆ. 33 ವರ್ಷಗಳ ಹಳೆಯ ಸೀರೆ ಎಂಬುದು ಗೊತ್ತಾದ ಬಳಿಕ ಎಲ್ಲರೂ ಹುಬ್ಬೇರಿಸುತ್ತಿದ್ದಾರೆ.

‘ಕುಟುಂಬದವರ ಆಶೀರ್ವಾದದೊಂದಿಗೆ ನಾವು ಇಂದು (ಜೂ.4) ಮದುವೆ ಆದೆವು. ಕೇವಲ ನಮ್ಮ ಆಪ್ತರ ಸಮ್ಮುಖದಲ್ಲಿ ಖಾಸಗಿಯಾಗಿ ಈ ವಿವಾಹ ಸಮಾರಂಭ ನೆರವೇರಿತು. ಪ್ರೀತಿ-ಸ್ನೇಹದ ನಮ್ಮ ಈ ಹೊಸ ಪಯಣಕ್ಕೆ ನಿಮ್ಮೆಲ್ಲರ ಆಶೀರ್ವಾದ ಬೇಕು’ ಎಂದು ಯಾಮಿ ಗೌತಮ್​ ಕೋರಿದ್ದರು.

ಕನ್ನಡದ ‘ಉಲ್ಲಾಸ ಉತ್ಸಾಹ’ ಸಿನಿಮಾ ಮೂಲಕ ಯಾಮಿ ಗೌತಮ್​ ಅವರು ಬಣ್ಣದ ಬದುಕು ಆರಂಭಿಸಿದ್ದರು. ಆ ಚಿತ್ರದಲ್ಲಿ ನಟ ಗಣೇಶ್​ಗೆ ಅವರು ಜೋಡಿ ಆಗಿದ್ದರು. ಬಳಿಕ ಅವರು ಪರಭಾಷೆಯಲ್ಲಿ ಮಿಂಚಲು ಆರಂಭಿಸಿದರು. ಈಗ ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಸದ್ಯ ‘ಭೂತ್​ ಪೊಲೀಸ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ:

ಯಾಮಿ ಗೌತಮ್​ ಪೋಸ್ಟ್​ನಲ್ಲಿ ಕಂಗನಾ ಕಿರಿಕ್​; ಬಾಲಿವುಡ್​ ನಟನಿಗೆ ಚಪ್ಪಲಿ ತೋರಿಸುವ ಬಗ್ಗೆ ಮಾತನಾಡಿದ ನಟಿ

‘ನಮ್ಮನ್ನು ಕ್ಷಮಿಸಿ’; ಮದುವೆ ಬೆನ್ನಲ್ಲೇ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದ ಪ್ರಣಿತಾ ಮತ್ತು ನಿತಿನ್

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!