AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಈ ನಟನ ಮೇಲೆ ನಟಿ ಅದಾಗೆ ಇದೆ ವಿಶೇಷ ಪ್ರೀತಿ, ಗೌರವ

ಅದಾ ಶರ್ಮಾ ಅವರ ಜನ್ಮದಿನ.ಪುನೀತ್ ರಾಜ್‌ಕುಮಾರ್ ಅವರು ಅವರ ವೃತ್ತಿಜೀವನದ ಮೇಲೆ ಸಾಕಷ್ಟು ಪ್ರಭಾವ ಬೀರಿದ್ದಾರೆ. 'ರಣ ವಿಕ್ರಮ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅದಾ, ಪುನೀತ್ ರಾಜ್‌ಕುಮಾರ್ ಅವರ ಸಮಯಪ್ರಜ್ಞೆ, ದಯೆ, ಹಾಗೂ ಅಭಿಮಾನಿಗಳೊಂದಿಗೆ ವರ್ತಿಸುವ ರೀತಿಯಿಂದ ಸ್ಫೂರ್ತಿ ಪಡೆದಿದ್ದಾರೆ ಎಂದು ಹೇಳಿದ್ದಾರೆ.

ಕನ್ನಡದ ಈ ನಟನ ಮೇಲೆ ನಟಿ ಅದಾಗೆ ಇದೆ ವಿಶೇಷ ಪ್ರೀತಿ, ಗೌರವ
ಅದಾ ಶರ್ಮಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: May 11, 2025 | 6:30 AM

Share

ನಟಿ ಅದಾ ಶರ್ಮಾ (Adah Sharma) ಅವರಿಗೆ ಇಂದು (ಮೇ 11) ಜನ್ಮದಿನ. ಅವರ ಅಭಿಮಾನಿ ಬಳಗ ಈಗ ಹಿರಿದಾಗಿದೆ. ಅವರು ಅನೇಕರ ಫೇವರಿಟ್ ನಟಿ ಎನಿಸಿಕೊಂಡಿದ್ದು ಗೊತ್ತೇ ಇದೆ. ಈ ನಟಿ ಅದಾಗೆ ಕನ್ನಡದ ಓರ್ವ ಹಿರೋ ತುಂಬಾನೇ ಸ್ಫೂರ್ತಿ. ಅವರು ಯಾರು ಎಂದು ಅನೇಕ ಬಾರಿ ಹೇಳಿಕೊಂಡಿದ್ದರು. ಅವರೇ ಪುನೀತ್ ರಾಜ್​ಕುಮಾರ್. ಅವರ ಜೊತೆ ಸಿನಿಮಾ ಮಾಡಿದ ಅದಾ ಅವರು, ಸಾಕಷ್ಟು ವಿಚಾರಗಳನ್ನು ಕಲಿತುಕೊಂಡರು ಅನ್ನೋದು ವಿಶೇಷ.

ಅದಾ ಶರ್ಮಾ ಹಾಗೂ ಪುನೀತ್ ಅವರು ‘ರಣ ವಿಕ್ರಮ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡಿತು. ಇದು ಅದಾ ಶರ್ಮಾ ನಟನೆಯ ಮೊದಲ ಕನ್ನಡ ಸಿನಿಮಾ. ಈ ಚಿತ್ರದ ಶೂಟ್ ವೇಳೆ ಅದಾ ಸಾಕಷ್ಟು ಕಲಿತರು. ಇಷ್ಟು ಖ್ಯಾತಿ ಪಡೆದ ಹೊರತಾಗಿಯೂ ಹಂಬಲ್ ಆಗಿರೋದು ಹೇಗೆ ಎಂದು ಅದಾ ಅವರು ಪುನೀತ್ ಅವರಿಂದ ಕಲಿತರು.

‘9 ವರ್ಷಗಳ ಹಿಂದೆ ನಾನು ಕನ್ನಡಕ್ಕೆ ಕಾಲಿಟ್ಟೆ. ಅದೂ ಅತಿದೊಡ್ಡ ಸೂಪರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಎದುರು. ಬೆಂಗಳೂರು ವಿಮಾನ ನಿಲ್ದಾಣದಿಂದ ಹೋಟೆಲ್‌ವರೆಗೆ ಬರುವಾಗ ಅವರ ಫೋಟೋ ದೊಡ್ಡ ಬ್ರಾಂಡ್‌ಗಳ 50ಕ್ಕೂ ಹೆಚ್ಚು ಹೋರ್ಡಿಂಗ್‌ಗಳ ಮೇಲೆ ಇತ್ತು. ಸೆಟ್ ಹೊರಗೆ ಹಿಂದಿನ ರಾತ್ರಿಯಿಂದಲೇ ಅವರನ್ನು ನೋಡಲು ನಿಂತಿದ್ದ ಜನರ ದಂಡೇ ಇತ್ತು. ನಾನು ತುಂಬಾ ನರ್ವಸ್ ಆಗಿದ್ದೆ ಮತ್ತು ಎಲ್ಲರೂ ನನಗೆ ಈ ಅವಕಾಶ ಸಿಕ್ಕಿದ್ದು ಎಷ್ಟು ಅದೃಷ್ಟ ಎಂದು ಪದೇ ಪದೇ ಹೇಳುತ್ತಿದ್ದರು’ ಎಂದಿದ್ದರು ಅದಾ.

‘ನನಗೆ ಸಿಕ್ಕ ಅದೃಷ್ಟ ಎಲ್ಲಾ ನಿರೀಕ್ಷೆಗಳನ್ನು ಮೀರಿತ್ತು. ಅವರು ತುಂಬಾನೇ ದಯಾಳು. ಅಭಿಮಾನಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡುತ್ತಿದ್ದರು. ಸಮಯಪ್ರಜ್ಞೆ ಹೊಂದಿದ್ದರು. ನನಗೆ ಭಾಷೆ ಗೊತ್ತಿಲ್ಲ ಎಂದು ಗೊತ್ತಿದ್ದ ಅವರು, ನನಗಾಗಿ ವಿಷಯಗಳನ್ನು ಅನುವಾದಿಸುತ್ತಿದ್ದರು. ಅವರು ತಮ್ಮ ಹೆಂಡತಿ ಮತ್ತು ಕುಟುಂಬದ ಬಗ್ಗೆ ತುಂಬಾ ಪ್ರೀತಿಯಿಂದ ಮಾತನಾಡಿದರು. 45 ಡಿಗ್ರಿಯಲ್ಲೂ ಸೆಟ್‌ನಲ್ಲಿ ವಾತಾವರಣವನ್ನು ಖುಷಿಯಾಗಿಡುವಲ್ಲಿ ಯಶಸ್ವಿಯಾದರು’ ಎಂದಿದ್ದರು ಅದಾ.

ಇದನ್ನೂ ಓದಿ: ಗಾಯಕನ ಮಗಳು ಎಂದು ಖ್ಯಾತ ನಿರ್ದೇಶಕನಿಗೆ ಸುಳ್ಳು ಹೇಳಿದ್ದ ಅದಾ ಶರ್ಮಾ

ಈ ಮೂಲಕ ಅವರು ಪುನೀತ್​ನ ಎಲ್ಲ ವಿಷಯಗಳಲ್ಲಿ ಮಾದರಿಯಾಗಿ ತೆಗೆದುಕೊಂಡರು. ಅದಾ ಶರ್ಮಾ ಈ ಮೊದಲು ಗ್ಲಾಮರಸ್ ಪಾತ್ರ ಮಾಡುತ್ತಿದ್ದರು. ‘ಕೇರಳ ಸ್ಟೋರಿ’ ಸಿನಿಮಾ ಬಳಿಕ ಅವರ ಬದುಕು ಬದಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ