AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudipto Sen: ‘ದಿ ಕೇರಳ ಸ್ಟೋರಿ’ ನಿರ್ದೇಶಕನ ವೆಬ್​ಸೈಟ್​ ಹ್ಯಾಕ್​; ಚಿತ್ರ ಬಿಡುಗಡೆ ಹೊಸ್ತಿಲಿನಲ್ಲಿ ಇಂಥ ಕೃತ್ಯ ಯಾಕೆ?

The Kerala Story: ಹಲವು ಕಾರಣಗಳಿಂದಾಗಿ ‘ದಿ ಕೇರಳ ಸ್ಟೋರಿ’ ಸಿನಿಮಾ ಸುದ್ದಿ ಆಗುತ್ತಿದೆ. ನಿರ್ದೇಶಕ ಸುದೀಪ್ತೋ ಸೇನ್​ ಅವರ ವೆಬ್​ಸೈಟ್​ ಮೇಲೆ ಸೈಬರ್​ ಕಳ್ಳರು ಕಣ್ಣು ಹಾಕಿದ್ದಾರೆ.

Sudipto Sen: ‘ದಿ ಕೇರಳ ಸ್ಟೋರಿ’ ನಿರ್ದೇಶಕನ ವೆಬ್​ಸೈಟ್​ ಹ್ಯಾಕ್​; ಚಿತ್ರ ಬಿಡುಗಡೆ ಹೊಸ್ತಿಲಿನಲ್ಲಿ ಇಂಥ ಕೃತ್ಯ ಯಾಕೆ?
ದಿ ಕೇರಳ ಸ್ಟೋರಿ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: May 02, 2023 | 6:22 PM

Share

ಮುಖ್ಯಾಂಶಗಳು

  • ಅದಾ ಶರ್ಮಾ ಅವರು ಕಾಣಿಸಿಕೊಂಡ ‘ದಿ ಕೇರಳ ಸ್ಟೋರಿ’ ಸಿನಿಮಾ
  • ​ ಇಂಡೋನೇಷಿಯಾದಿಂದ ಹ್ಯಾಕ್ ಆಯ್ತು ಸುದೀಪ್ತೋ ಸೇನ್​ ಅವರ ವೆಬ್​ಸೈಟ್
  • ಸಿನಿಮಾ ಬಿಡುಗಡೆ ಆಗುವುದನ್ನು ತಡೆಯುವ ಉದ್ದೇಶದಿಂದ ಈ ಕೃತ್ಯ ಸಾಧ್ಯತೆ

ಮೇ 5ರಂದು ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾ ಕುರಿತಂತೆ ಈಗಾಗಲೇ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಈ ಚಿತ್ರ ಬಿಡುಗಡೆ ಆಗದಂತೆ ತಡೆಯಬೇಕು ಎಂದು ಕೂಡ ಹಲವರು ಪ್ರಯತ್ನಿಸುತ್ತಿದ್ದಾರೆ. ಇದೆಲ್ಲದರ ನಡುವೆ ನಿರ್ದೇಶಕ ಸುದೀಪ್ತೋ ಸೇನ್​ (Sudipto Sen) ಅವರ ವೆಬ್​ಸೈಟ್​ ಹ್ಯಾಕ್​ ಆಗಿದೆ. ಸೈಬರ್​ ಕಳ್ಳರು ಕೆಲವು ಹೊತ್ತಿಯ ತನಕ ಈ ವೆಬ್​ಸೈಟ್​ ಅನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿರುವುದು ವರದಿ ಆಗಿದೆ. ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ ಆಗುವುದನ್ನು ತಡೆಯುವ ಉದ್ದೇಶದಿಂದಲೇ ಈ ಪ್ರಯತ್ನ ಮಾಡಲಾಗಿದೆ ಎಂಬ ಮಾತು ಕೇಳಿಬಂದಿದೆ. ಚಿತ್ರದ ಬಿಡುಗಡೆಗೆ ಇನ್ನೂ ಮೂರು ದಿನ ಬಾಕಿ ಇದೆ. ಅಷ್ಟರಲ್ಲಿ ಒಂದಷ್ಟು ಕ್ಷಿಪ್ರ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ. ಒಟ್ಟಿನಲ್ಲಿ ರಿಲೀಸ್​ಗೂ ಮುನ್ನವೇ ಈ ಸಿನಿಮಾ ಚಕಮಕಿ ಎಬ್ಬಿಸಿದೆ. ಈ ಚಿತ್ರದಲ್ಲಿ ನಟಿ ಅದಾ ಶರ್ಮಾ (Adah Sharma) ಅವರು ಪ್ರಮುಖ ಪಾತ್ರ ಮಾಡಿದ್ದಾರೆ.

ನಿರ್ದೇಶಕ ಸುದೀಪ್ತೋ ಸೇನ್​ ಅವರ ವೆಬ್​ಸೈಟ್​ ಅನ್ನು ಇಂಡೋನೇಷಿಯಾದಿಂದ ಹ್ಯಾಕ್​ ಮಾಡಲಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ವೆಬ್​ಸೈಟ್​ನ ಚಟುವಟಿಕೆಗಳಲ್ಲಿ ವ್ಯತ್ಯಯ ಆಗುವ ರೀತಿಯಲ್ಲಿ ಹಾನಿ ಮಾಡಲಾಗಿದೆ. ಬೆದರಿಕೆವೊಡ್ಡುವ ಉದ್ದೇಶದಿಂದಲೇ ಸೈಬರ್​ ಖದೀಮರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: The Kerala Story: ‘ದಿ ಕೇರಳ ಸ್ಟೋರಿ’ ವಿವಾದ: ‘ನಾವು ಸಾಕ್ಷಿ ಇಲ್ಲದೇ ಏನನ್ನೂ ಹೇಳಲ್ಲ’ ಎಂದ ನಿರ್ಮಾಪಕ ವಿಪುಲ್​ ಶಾ

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ತಡೆ ನೀಡಿ ಎಂದು ಸಲ್ಲಿಕೆ ಆಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ನಕಾರ
Image
‘ದಿ ಕೇರಳ ಸ್ಟೋರಿ’ ಟ್ರೇಲರ್ ವಿರುದ್ಧ ಅಸಮಾಧಾನಗೊಂಡ ಕೇರಳ ಸಿಎಂ; ಚಿತ್ರಕ್ಕೆ ಬೀಳಲಿದೆ ತಡೆ?
Image
‘ಹಿಜಾಬ್ ಹಾಕಿದವರ ಮೇಲೆ ಅತ್ಯಾಚಾರ ಆಗಲ್ಲ, ಅಲ್ಲಾಹ್ ಮಾತ್ರ ಕಾಪಾಡುವವನು’; ಚರ್ಚೆ ಹುಟ್ಟುಹಾಕಿದ ‘ದಿ ಕೇರಳ ಸ್ಟೋರಿ’ ಟ್ರೇಲರ್
Image
The Kerala Story: ‘ದಿ ಕೇರಳ ಸ್ಟೋರಿ’ ವಿವಾದ: ‘ನಾವು ಸಾಕ್ಷಿ ಇಲ್ಲದೇ ಏನನ್ನೂ ಹೇಳಲ್ಲ’ ಎಂದ ನಿರ್ಮಾಪಕ ವಿಪುಲ್​ ಶಾ

‘ದಿ ಕೇರಳ ಸ್ಟೋರಿ’ ವಿವಾದ ಏನು?

ಅದಾ ಶರ್ಮಾ ಅವರು ಕಾಣಿಸಿಕೊಂಡ ‘ದಿ ಕೇರಳ ಸ್ಟೋರಿ’ ಚಿತ್ರದ ಟೀಸರ್​ ಬಿಡುಗಡೆ ಆದಾಗಲೇ ವಿವಾದದ ಕಿಡಿ ಹೊತ್ತಿಕೊಂಡಿತ್ತು. ಹಿಂದೂ ಮತ್ತು ಕ್ರಿಶ್ಚಿಯನ್​ ಹುಡುಗಿಯರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿ, ನಂತರ ಅವರನ್ನು ಉಗ್ರ ಸಂಘಟನೆಗಳಲ್ಲಿ ಬಳಸಿಕೊಳ್ಳುವ ಜಾಲದ ಬಗ್ಗೆ ಇದರಲ್ಲಿ ತೋರಿಸಲಾಗಿತ್ತು. ಇತ್ತೀಚೆಗೆ ಬಿಡುಗಡೆ ಆಗಿರುವ ಟ್ರೇಲರ್​ನಲ್ಲಿ ಇನ್ನಷ್ಟು ವಿವರಗಳನ್ನು ನೀಡಲಾಗಿದೆ. ಅದನ್ನು ಕಂಡು ಅನೇಕರು ಬೆಚ್ಚಿ ಬಿದ್ದಿದ್ದಾರೆ. ಆ ಮೂಲಕ ‘ದಿ ಕೇರಳ ಸ್ಟೋರಿ’ ಬಗ್ಗೆ ಹೈಪ್​ ಸೃಷ್ಟಿ ಆಗಿದೆ.

ಇದನ್ನೂ ಓದಿ: The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿನ ಮಾಹಿತಿ ನಿಜ ಅಂತ ಸಾಬೀತು ಮಾಡಿದ್ರೆ 1 ಕೋಟಿ ರೂ. ಬಹುಮಾನ

‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ತೋರಿಸಲಾಗುತ್ತಿರುವ ಮಾಹಿತಿ ನಿಜವೋ ಸುಳ್ಳೋ ಎಂಬ ಬಗ್ಗೆ ಖಚಿತತೆ ಇಲ್ಲ. ಇದರ ಸತ್ಯಾಸತ್ಯತೆ ಕುರಿತು ಕೆಲವರು ಪ್ರಶ್ನೆ ಎತ್ತಿದ್ದಾರೆ. ಈ ಚಿತ್ರಕ್ಕೆ ಸೆನ್ಸಾರ್​ ಮಂಡಳಿಯಿಂದ ‘ಎ’ ಪ್ರಮಾಣಪತ್ರ ಸಿಕ್ಕಿದೆ. ಸಿನಿಮಾದಲ್ಲಿನ 10 ದೃಶ್ಯಗಳಿಗೆ ಕತ್ತರಿ ಹಾಕಲು ಸೆನ್ಸಾರ್​ ಮಂಡಳಿ ಆದೇಶಿಸಿದೆ ಎಂದು ವರದಿ ಆಗಿದೆ. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಕ್ಕೆ ಎಷ್ಟು ಕಲೆಕ್ಷನ್​ ಆಗಲಿದೆ ಎಂಬ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ