AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ಅಯೋಧ್ಯೆಗೆ ತೆರಳಿ ವಿಶೇಷವಾಗಿ ಸಿನಿಮಾ ಪ್ರಚಾರ ಮಾಡಲಿರುವ ಪ್ರಭಾಸ್​?

Prabhas: ‘ಆದಿಪುರುಷ್​’ ಚಿತ್ರ ಅದ್ದೂರಿ ಬಜೆಟ್​ನಲ್ಲಿ ಮೂಡಿಬರುತ್ತಿದೆ. ರಾಮನ ಪಾತ್ರ ಮಾಡುತ್ತಿರುವ ನಟ ಪ್ರಭಾಸ್​ ಪಾಲಿಗೆ ಈ ಸಿನಿಮಾ ವಿಶೇಷವಾಗಿರಲಿದೆ.

Adipurush: ಅಯೋಧ್ಯೆಗೆ ತೆರಳಿ ವಿಶೇಷವಾಗಿ ಸಿನಿಮಾ ಪ್ರಚಾರ ಮಾಡಲಿರುವ ಪ್ರಭಾಸ್​?
ಪ್ರಭಾಸ್
TV9 Web
| Edited By: |

Updated on:Sep 14, 2022 | 8:40 AM

Share

ಪ್ಯಾನ್​ ಇಂಡಿಯಾ ಹೀರೋ ಪ್ರಭಾಸ್ (Prabhas)​ ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಿದೆ. ‘ಬಾಹುಬಲಿ’ ನಂತರ ಅವರು ನಟಿಸಿದ ಬೇರೆ ಯಾವ ಚಿತ್ರವೂ ಅವರಿಗೆ ನಿರೀಕ್ಷಿತ ಮಟ್ಟದ ಯಶಸ್ಸು ತಂದುಕೊಡಲಿಲ್ಲ. ‘ಸಾಹೋ’, ‘ರಾಧೆ ಶ್ಯಾಮ್​’ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಸೋತವು. ಮುಂಬರುವ ಸಿನಿಮಾಗಳನ್ನು ಹೇಗಾದರೂ ಮಾಡಿ ಗೆಲ್ಲಿಸಲೇಬೇಕು ಎಂದು ಪ್ರಭಾಸ್​ ಹಠ ತೊಟ್ಟಂತಿದೆ. ಸದ್ಯ ಅವರು ‘ಆದಿಪುರುಷ್​’ (Adipurush Movi) ಮತ್ತು ‘ಸಲಾರ್​’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಆ ಪೈಕಿ ‘ಆದಿಪುರುಷ್​’ ಚಿತ್ರ ಮೊದಲು ರಿಲೀಸ್​ ಆಗಲಿದೆ. ಅದರ ಟೀಸರ್​ ಬಿಡುಗಡೆಗಾಗಿ ಚಿತ್ರತಂಡ ವಿಶೇಷ ಪ್ಲ್ಯಾನ್ ಮಾಡಿಕೊಂಡಿದೆ ಎನ್ನಲಾಗುತ್ತಿದೆ. ಅಯೋಧ್ಯೆಯಲ್ಲಿ (Ayodhya) ರಾವಣನ ಪ್ರತಿಕೃತಿ ದಹಿಸುವ ಮೂಲಕ ಪ್ರಭಾಸ್​ ಈ ಚಿತ್ರದ ಟೀಸರ್​ ರಿಲೀಸ್​ ಮಾಡಲಿದ್ದಾರೆ ಎಂಬ ಗುಸಗುಸು ಕೇಳಿಬಂದಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಪ್ರಭಾಸ್​ ಅಭಿಮಾನಿಗಳು ‘ಆದಿಪುರುಷ್​’ ಚಿತ್ರದ ಮೇಲೆ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ರಾಮಾಯಣದ ಕಥೆಯನ್ನು ಆಧರಿಸಿ ಈ ಚಿತ್ರ ಮೂಡಿಬರುತ್ತಿದೆ. ಕೃತಿ ಸನನ್​, ಸೈಫ್​ ಅಲಿ ಖಾನ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ತಾನಾಜಿ’ ಸಿನಿಮಾ ಖ್ಯಾತಿಯ ಓಂ ರಾವುತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಟೀಸರ್​ ಹೇಗೆ ಮೂಡಿಬಂದಿರಬಹುದು ಎಂಬುದನ್ನು ತಿಳಿಯುವ ಕೌತುಕ ಅಭಿಮಾನಿಗಳ ಮನದಲ್ಲಿ ಸೃಷ್ಟಿ ಆಗಿದೆ.

‘ಆದಿಪುರುಷ್​’ ಚಿತ್ರ ಅದ್ದೂರಿ ಬಜೆಟ್​ನಲ್ಲಿ ಮೂಡಿಬರುತ್ತಿದೆ. ಪ್ರಭಾಸ್​ ಅವರ ಪಾಲಿಗೆ ಈ ಚಿತ್ರ ವಿಶೇಷವಾಗಿರಲಿದೆ. ಯಾಕೆಂದರೆ ಅವರು ಈ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿದ್ದಾರೆ. ರಾವಣನಾಗಿ ಸೈಫ್​ ಅಲಿ ಖಾನ್​ ಅಬ್ಬರಿಸಲಿದ್ದಾರೆ. 2023ರ ಜನವರಿ 12ರಂದು ಈ ಚಿತ್ರ ರಿಲೀಸ್​ ಆಗಲಿದೆ.

ಇದನ್ನೂ ಓದಿ
Image
Krisham Raju: ಪ್ರಭಾಸ್ ದೊಡ್ಡಪ್ಪ, ಟಾಲಿವುಡ್​ನ​ ರೆಬೆಲ್​ಸ್ಟಾರ್ ಕೃಷ್ಣಂರಾಜು ನಿಧನ
Image
Prabhas: ಭಾರತದಲ್ಲಿ ನೂರಾರು ಕೋಟಿ ರೂ. ಸಂಬಳ ಪಡೆದು ದುಬೈನಲ್ಲಿ ಬಿಸ್ನೆಸ್​ ಮಾಡುತ್ತಿರುವ ಪ್ರಭಾಸ್?
Image
Prashanth Neel Birthday: ಬೆಂಗಳೂರಿಗೆ ಬಂದು ಪ್ರಶಾಂತ್​ ನೀಲ್​ ಬರ್ತ್​ಡೇ ಪಾರ್ಟಿಯಲ್ಲಿ ಭಾಗಿಯಾದ ಪ್ರಭಾಸ್​
Image
‘ರಾಧೆ ಶ್ಯಾಮ್​’ ಸೋಲಿಗೆ 2 ಮುಖ್ಯ ಕಾರಣ ತಿಳಿಸಿದ ಪ್ರಭಾಸ್​; ಪ್ರೇಕ್ಷಕರು ಈ ನೆಪವನ್ನೆಲ್ಲ ಒಪ್ಪುತ್ತಾರಾ?

ಅಕ್ಟೋಬರ್​ ಮೊದಲ ವಾರದಲ್ಲಿ ದಸರಾ ಸಂಭ್ರಮ ಮನೆ ಮಾಡಿರುತ್ತದೆ. ಅನೇಕ ಕಡೆಗಳಲ್ಲಿ ‘ರಾವಣ ದಹನ’ ಮಾಡಲಾಗುತ್ತದೆ. ಅಯೋಧ್ಯೆ ಮಾತ್ರವಲ್ಲದೇ ದೆಹಲಿಯಲ್ಲೂ ಪ್ರಭಾಸ್​ ಅವರು ರಾವಣ ದಹನ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಹಿಂದೆ ಅಕ್ಷಯ್​ ಕುಮಾರ್​, ಜಾನ್​ ಅಬ್ರಾಹಂ, ಅಜಯ್​ ದೇವಗನ್​ ಮುಂತಾದ ನಟರು ದೆಹಲಿಯ ‘ಲವ ಕುಶ ರಾಮ್​​ಲೀಲಾ’ದಲ್ಲಿ ನಡೆಯುವ ರಾವಣ ದಹನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಬಾರಿ ಪ್ರಭಾಸ್​ಗೆ ಆಹ್ವಾನ ನೀಡಿರುವ ಬಗ್ಗೆ ಆಯೋಜಕರು ಮಾಹಿತಿ ನೀಡಿದ್ದಾರೆ.

ಪ್ರಭಾಸ್​ ನಟಿಸುತ್ತಿರುವ ‘ಸಲಾರ್​’ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿದ್ದಾರೆ. ಆ ಸಿನಿಮಾ ಮೇಲೆ ಕೂಡ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:32 am, Wed, 14 September 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!