Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ ಪೀಡಿತ ಅಭಿಮಾನಿಗೆ ಅತ್ಯಮೂಲ್ಯ ಕ್ಷಣಗಳನ್ನು ನೀಡಿದ ಪ್ರಭಾಸ್​; ನಟನ ದೊಡ್ಡತನಕ್ಕೆ ಮೆಚ್ಚುಗೆ​

ಕ್ಯಾನ್ಸರ್​ನಿಂದ ಬಳಲುತ್ತಿರುವ ಅಭಿಮಾನಿ ಜೊತೆ ಪ್ರಭಾಸ್​ ಒಂದಷ್ಟು ಸಮಯ ಕಳೆದಿದ್ದಾರೆ. ಈ ವಿಚಾರದಲ್ಲಿ ಅವರು ಪ್ರಚಾರ ಬಯಸುವುದಿಲ್ಲ. ಹಾಗಿದ್ದರೂ ಅಭಿಮಾನಿಗಳು ಕೆಲವು ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಮಾಡುತ್ತಿದ್ದಾರೆ.

ಕ್ಯಾನ್ಸರ್​ ಪೀಡಿತ ಅಭಿಮಾನಿಗೆ ಅತ್ಯಮೂಲ್ಯ ಕ್ಷಣಗಳನ್ನು ನೀಡಿದ ಪ್ರಭಾಸ್​; ನಟನ ದೊಡ್ಡತನಕ್ಕೆ ಮೆಚ್ಚುಗೆ​
ಪ್ರಭಾಸ್​
Follow us
TV9 Web
| Updated By: ಮದನ್​ ಕುಮಾರ್​

Updated on: Sep 19, 2021 | 8:16 AM

ಸದ್ಯ ಅತಿ ಹೆಚ್ಚು ಬ್ಯುಸಿ ಆಗಿರುವ ನಟರ ಪೈಕಿ ಪ್ರಭಾಸ್​ ಕೂಡ ಪ್ರಮುಖರು. ‘ರಾಧೆ ಶ್ಯಾಮ್​’, ‘ಆದಿಪುರುಷ್​’, ‘ಸಲಾರ್​’ ಮುಂತಾದ ಹೈವೋಲ್ಟೇಜ್​ ಸಿನಿಮಾಗಳ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ಪ್ರತಿಯೊಂದು ನಿಮಿಷ ಕೂಡ ಅವರಿಗೆ ಅತ್ಯಮೂಲ್ಯವಾಗಿದೆ. ಹೀಗಿರುವಾಗ ಅವರು ತಮ್ಮ ವಿಶೇಷ ಅಭಿಮಾನಿಗಾಗಿ ಒಂದಷ್ಟು ಸಮಯವನ್ನು ಮೀಸಲಿಟ್ಟಿದ್ದಾರೆ. ಕ್ಯಾನ್ಸರ್​ ಪೀಡಿತ ಅಭಿಮಾನಿಯೊಬ್ಬರ ಜೊತೆ ವಿಡಿಯೋ ಕಾಲ್​ ಮಾಡಿ ಮಾತನಾಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದು, ಪ್ರಭಾಸ್​ ಕೆಲಸಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕ್ಯಾನ್ಸರ್​ನಿಂದ ಜೀವನ್ಮರಣದ ನಡುವೆ ಹೋರಾಡುತ್ತಿರುವ ಅಭಿಮಾನಿಯೊಬ್ಬರು ಪ್ರಭಾಸ್​ ಜೊತೆ ಮಾತನಾಡಬೇಕು ಎಂಬ ಕನಸು ಇಟ್ಟುಕೊಂಡಿದ್ದರು. ಅದನ್ನು ಪ್ರಭಾಸ್​ ನನಸಾಗಿಸಿದ್ದಾರೆ. ಆದಿಪುರುಷ್​ ಚಿತ್ರದ ಶೂಟಿಂಗ್​ ಬಿಡುವಿನಲ್ಲಿ ಒಂದಷ್ಟು ಸಮಯ ಮಾಡಿಕೊಂಡು ಅವರು ವಿಡಿಯೋ ಕಾಲ್​ ಮಾಡಿದ್ದಾರೆ. ಇದರಿಂದ ಆ ಅಭಿಮಾನಿಯ ಮನಸ್ಸಿಗೆ ಅದೆಷ್ಟೋ ಸಮಾಧಾನ ಸಿಕ್ಕಿರುತ್ತದೆ. ಪ್ರಭಾಸ್​ ಅವರ ಈ ಕೆಲಸಕ್ಕೆ ಆಸ್ಪತ್ರೆಯ ಸಿಬ್ಬಂದಿ ಧನ್ಯವಾದ ತಿಳಿಸಿದ್ದಾರೆ.

ಅನೇಕ ಸ್ಟಾರ್​ ನಟರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಟಾಲಿವುಡ್​ನಲ್ಲಿ ಮಹೇಶ್​ ಬಾಬು, ಜ್ಯೂ.ಎನ್​ಟಿಆರ್​, ಪವನ್​ ಕಲ್ಯಾಣ್​ ಮುಂತಾದವರು ಬಡವರಿಗೆ ಸಹಾಯ ಮಾಡುತ್ತಿದ್ದಾರೆ. ಅದೇ ಹಾದಿಯಲ್ಲಿ ಪ್ರಭಾಸ್​ ಕೂಡ ಸಾಗುತ್ತಿದ್ದಾರೆ. ಆದರೆ ಈ ವಿಚಾರದಲ್ಲಿ ಅವರು ಪ್ರಚಾರ ಬಯಸುವುದಿಲ್ಲ. ಹಾಗಿದ್ದರೂ ಈ ಫೋಟೋಗಳನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಮಾಡುತ್ತಿದ್ದಾರೆ.

ಫಿಟ್ನೆಸ್​ ಕಳೆದುಕೊಂಡ ಪ್ರಭಾಸ್​:

ರಾಮಾಯಣದ ಕಥೆಯನ್ನು ಆಧರಿಸಿ ‘ಆದಿಪುರುಷ್​’ ಸಿನಿಮಾ ತಯಾರಾಗುತ್ತಿದೆ. ಅದರಲ್ಲಿ ಪ್ರಭಾಸ್​ಗೆ ರಾಮನ ಪಾತ್ರ ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಪ್ರಭಾಸ್​ ಅವರ ದೇಹದ ತೂಕ ಏಕಾಏಕಿ ಹೆಚ್ಚಾಗಿದೆ. ಇಂಥ ಫ್ಯಾಟ್​ ಅವತಾರದಲ್ಲಿ ರಾಮನನ್ನು ನೋಡಲು ಜನರು ಇಷ್ಟಪಡುವುದಿಲ್ಲ ಎಂಬುದು ಖಚಿತ. ಹಾಗಾಗಿ ಪ್ರಭಾಸ್​ ತೂಕ ಕಡಿಮೆ ಮಾಡಿಕೊಳ್ಳಬೇಕಿರುವುದು ತುಂಬ ಅನಿವಾರ್ಯ ಆಗಿದೆ. ಅದಕ್ಕಾಗಿ ಈ ಚಿತ್ರದ ನಿರ್ದೇಶಕ ಓಂ ರಾವುತ್​ ಒಂದು ಪ್ಲ್ಯಾನ್​ ಮಾಡಿದ್ದಾರೆ.

ಪ್ರಭಾಸ್​ಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಲು ನಿರ್ಧರಿಸಲಾಗಿದೆ ಎಂಬ ಸುದ್ದಿ ಈಗ ಕೇಳಿಬರುತ್ತಿದೆ. ಹೀಗೆ ಏಕಾಏಕಿ ದೇಹದ ತೂಕ ಹೆಚ್ಚಲು ಕಾರಣ ಏನು ಎಂಬುದನ್ನು ತಿಳಿದುಕೊಳ್ಳಲು ಅವರಿಗೆ ಇಂಗ್ಲೆಂಡ್​ನಲ್ಲಿ ಆರೋಗ್ಯ ತಪಾಸಣೆ ಮಾಡಿಸಲಾಗುವುದು. ಅಲ್ಲಿಯೇ ಚಿಕಿತ್ಸೆ ಕೊಡಿಸಿ, ಆದಷ್ಟು ಬೇಗ ಅವರನ್ನು ಮೊದಲಿನ ಗೆಟಪ್​ಗೆ ಮರಳಿಸಲು ನಿರ್ದೇಶಕರು ತೀರ್ಮಾನ ತೆಗೆದುಕೊಂಡಿದ್ದಾರೆ ಎಂಬ ಸುದ್ದಿ ಜೋರಾಗಿ ಹರಿದಾಡುತ್ತಿದೆ. ಆದರೆ ಈ ಸುದ್ದಿ ಕುರಿತಂತೆ ಚಿತ್ರತಂಡದ ಯಾರೊಬ್ಬರೂ ಅಧಿಕೃತ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ:

‘ಪ್ರಭಾಸ್​ ಜತೆ ಇದ್ದರೆ ಫಿಟ್​ನೆಸ್​ ಕಳೆದುಕೊಳ್ತೀರಿ’; ಟಾಲಿವುಡ್​ ನಟನ ವಿಚಿತ್ರ ಆರೋಪ

Prabhas: ಡೇಟಿಂಗ್​ ವಿಚಾರಕ್ಕೆ ಜಾಗತಿಕ ಮಟ್ಟದಲ್ಲಿ ಪ್ರಭಾಸ್​ ಸುದ್ದಿ; ಇದೆಲ್ಲ ಯಾರ ಜೊತೆ, ಏನು ಕಥೆ?

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!