Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ ಪೀಡಿತ ಅಭಿಮಾನಿಗೆ ಅತ್ಯಮೂಲ್ಯ ಕ್ಷಣಗಳನ್ನು ನೀಡಿದ ಪ್ರಭಾಸ್​; ನಟನ ದೊಡ್ಡತನಕ್ಕೆ ಮೆಚ್ಚುಗೆ​

ಕ್ಯಾನ್ಸರ್​ನಿಂದ ಬಳಲುತ್ತಿರುವ ಅಭಿಮಾನಿ ಜೊತೆ ಪ್ರಭಾಸ್​ ಒಂದಷ್ಟು ಸಮಯ ಕಳೆದಿದ್ದಾರೆ. ಈ ವಿಚಾರದಲ್ಲಿ ಅವರು ಪ್ರಚಾರ ಬಯಸುವುದಿಲ್ಲ. ಹಾಗಿದ್ದರೂ ಅಭಿಮಾನಿಗಳು ಕೆಲವು ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಮಾಡುತ್ತಿದ್ದಾರೆ.

ಕ್ಯಾನ್ಸರ್​ ಪೀಡಿತ ಅಭಿಮಾನಿಗೆ ಅತ್ಯಮೂಲ್ಯ ಕ್ಷಣಗಳನ್ನು ನೀಡಿದ ಪ್ರಭಾಸ್​; ನಟನ ದೊಡ್ಡತನಕ್ಕೆ ಮೆಚ್ಚುಗೆ​
ಪ್ರಭಾಸ್​
Follow us
TV9 Web
| Updated By: ಮದನ್​ ಕುಮಾರ್​

Updated on: Sep 19, 2021 | 8:16 AM

ಸದ್ಯ ಅತಿ ಹೆಚ್ಚು ಬ್ಯುಸಿ ಆಗಿರುವ ನಟರ ಪೈಕಿ ಪ್ರಭಾಸ್​ ಕೂಡ ಪ್ರಮುಖರು. ‘ರಾಧೆ ಶ್ಯಾಮ್​’, ‘ಆದಿಪುರುಷ್​’, ‘ಸಲಾರ್​’ ಮುಂತಾದ ಹೈವೋಲ್ಟೇಜ್​ ಸಿನಿಮಾಗಳ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ಪ್ರತಿಯೊಂದು ನಿಮಿಷ ಕೂಡ ಅವರಿಗೆ ಅತ್ಯಮೂಲ್ಯವಾಗಿದೆ. ಹೀಗಿರುವಾಗ ಅವರು ತಮ್ಮ ವಿಶೇಷ ಅಭಿಮಾನಿಗಾಗಿ ಒಂದಷ್ಟು ಸಮಯವನ್ನು ಮೀಸಲಿಟ್ಟಿದ್ದಾರೆ. ಕ್ಯಾನ್ಸರ್​ ಪೀಡಿತ ಅಭಿಮಾನಿಯೊಬ್ಬರ ಜೊತೆ ವಿಡಿಯೋ ಕಾಲ್​ ಮಾಡಿ ಮಾತನಾಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದು, ಪ್ರಭಾಸ್​ ಕೆಲಸಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕ್ಯಾನ್ಸರ್​ನಿಂದ ಜೀವನ್ಮರಣದ ನಡುವೆ ಹೋರಾಡುತ್ತಿರುವ ಅಭಿಮಾನಿಯೊಬ್ಬರು ಪ್ರಭಾಸ್​ ಜೊತೆ ಮಾತನಾಡಬೇಕು ಎಂಬ ಕನಸು ಇಟ್ಟುಕೊಂಡಿದ್ದರು. ಅದನ್ನು ಪ್ರಭಾಸ್​ ನನಸಾಗಿಸಿದ್ದಾರೆ. ಆದಿಪುರುಷ್​ ಚಿತ್ರದ ಶೂಟಿಂಗ್​ ಬಿಡುವಿನಲ್ಲಿ ಒಂದಷ್ಟು ಸಮಯ ಮಾಡಿಕೊಂಡು ಅವರು ವಿಡಿಯೋ ಕಾಲ್​ ಮಾಡಿದ್ದಾರೆ. ಇದರಿಂದ ಆ ಅಭಿಮಾನಿಯ ಮನಸ್ಸಿಗೆ ಅದೆಷ್ಟೋ ಸಮಾಧಾನ ಸಿಕ್ಕಿರುತ್ತದೆ. ಪ್ರಭಾಸ್​ ಅವರ ಈ ಕೆಲಸಕ್ಕೆ ಆಸ್ಪತ್ರೆಯ ಸಿಬ್ಬಂದಿ ಧನ್ಯವಾದ ತಿಳಿಸಿದ್ದಾರೆ.

ಅನೇಕ ಸ್ಟಾರ್​ ನಟರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಟಾಲಿವುಡ್​ನಲ್ಲಿ ಮಹೇಶ್​ ಬಾಬು, ಜ್ಯೂ.ಎನ್​ಟಿಆರ್​, ಪವನ್​ ಕಲ್ಯಾಣ್​ ಮುಂತಾದವರು ಬಡವರಿಗೆ ಸಹಾಯ ಮಾಡುತ್ತಿದ್ದಾರೆ. ಅದೇ ಹಾದಿಯಲ್ಲಿ ಪ್ರಭಾಸ್​ ಕೂಡ ಸಾಗುತ್ತಿದ್ದಾರೆ. ಆದರೆ ಈ ವಿಚಾರದಲ್ಲಿ ಅವರು ಪ್ರಚಾರ ಬಯಸುವುದಿಲ್ಲ. ಹಾಗಿದ್ದರೂ ಈ ಫೋಟೋಗಳನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಮಾಡುತ್ತಿದ್ದಾರೆ.

ಫಿಟ್ನೆಸ್​ ಕಳೆದುಕೊಂಡ ಪ್ರಭಾಸ್​:

ರಾಮಾಯಣದ ಕಥೆಯನ್ನು ಆಧರಿಸಿ ‘ಆದಿಪುರುಷ್​’ ಸಿನಿಮಾ ತಯಾರಾಗುತ್ತಿದೆ. ಅದರಲ್ಲಿ ಪ್ರಭಾಸ್​ಗೆ ರಾಮನ ಪಾತ್ರ ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಪ್ರಭಾಸ್​ ಅವರ ದೇಹದ ತೂಕ ಏಕಾಏಕಿ ಹೆಚ್ಚಾಗಿದೆ. ಇಂಥ ಫ್ಯಾಟ್​ ಅವತಾರದಲ್ಲಿ ರಾಮನನ್ನು ನೋಡಲು ಜನರು ಇಷ್ಟಪಡುವುದಿಲ್ಲ ಎಂಬುದು ಖಚಿತ. ಹಾಗಾಗಿ ಪ್ರಭಾಸ್​ ತೂಕ ಕಡಿಮೆ ಮಾಡಿಕೊಳ್ಳಬೇಕಿರುವುದು ತುಂಬ ಅನಿವಾರ್ಯ ಆಗಿದೆ. ಅದಕ್ಕಾಗಿ ಈ ಚಿತ್ರದ ನಿರ್ದೇಶಕ ಓಂ ರಾವುತ್​ ಒಂದು ಪ್ಲ್ಯಾನ್​ ಮಾಡಿದ್ದಾರೆ.

ಪ್ರಭಾಸ್​ಗೆ ವಿದೇಶದಲ್ಲಿ ಚಿಕಿತ್ಸೆ ಕೊಡಿಸಲು ನಿರ್ಧರಿಸಲಾಗಿದೆ ಎಂಬ ಸುದ್ದಿ ಈಗ ಕೇಳಿಬರುತ್ತಿದೆ. ಹೀಗೆ ಏಕಾಏಕಿ ದೇಹದ ತೂಕ ಹೆಚ್ಚಲು ಕಾರಣ ಏನು ಎಂಬುದನ್ನು ತಿಳಿದುಕೊಳ್ಳಲು ಅವರಿಗೆ ಇಂಗ್ಲೆಂಡ್​ನಲ್ಲಿ ಆರೋಗ್ಯ ತಪಾಸಣೆ ಮಾಡಿಸಲಾಗುವುದು. ಅಲ್ಲಿಯೇ ಚಿಕಿತ್ಸೆ ಕೊಡಿಸಿ, ಆದಷ್ಟು ಬೇಗ ಅವರನ್ನು ಮೊದಲಿನ ಗೆಟಪ್​ಗೆ ಮರಳಿಸಲು ನಿರ್ದೇಶಕರು ತೀರ್ಮಾನ ತೆಗೆದುಕೊಂಡಿದ್ದಾರೆ ಎಂಬ ಸುದ್ದಿ ಜೋರಾಗಿ ಹರಿದಾಡುತ್ತಿದೆ. ಆದರೆ ಈ ಸುದ್ದಿ ಕುರಿತಂತೆ ಚಿತ್ರತಂಡದ ಯಾರೊಬ್ಬರೂ ಅಧಿಕೃತ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ:

‘ಪ್ರಭಾಸ್​ ಜತೆ ಇದ್ದರೆ ಫಿಟ್​ನೆಸ್​ ಕಳೆದುಕೊಳ್ತೀರಿ’; ಟಾಲಿವುಡ್​ ನಟನ ವಿಚಿತ್ರ ಆರೋಪ

Prabhas: ಡೇಟಿಂಗ್​ ವಿಚಾರಕ್ಕೆ ಜಾಗತಿಕ ಮಟ್ಟದಲ್ಲಿ ಪ್ರಭಾಸ್​ ಸುದ್ದಿ; ಇದೆಲ್ಲ ಯಾರ ಜೊತೆ, ಏನು ಕಥೆ?

ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ