AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ‘ಆದಿಪುರುಷ್​’ ಕಲೆಕ್ಷನ್​ನಲ್ಲಿ ಸ್ವಲ್ಪ ಚೇತರಿಕೆ; ಮಳೆ ನಡುವೆಯೂ ಹಲವು ಕಡೆಗಳಲ್ಲಿ ಹೌಸ್​ಫುಲ್​

Adipurush Box Office Collection: 2ನೇ ವೀಕೆಂಡ್​ನಲ್ಲಿ ‘ಆದಿಪುರುಷ್​’ ಸಿನಿಮಾ ಸಂಪೂರ್ಣವಾಗಿ ತನ್ನ ಆಟ ನಿಲ್ಲಿಸಲಿದೆ ಎಂದು ಕೆಲವರು ಊಹಿಸಿದ್ದರು. ಆದರೆ ಆ ರೀತಿ ಆಗಿಲ್ಲ.

Adipurush: ‘ಆದಿಪುರುಷ್​’ ಕಲೆಕ್ಷನ್​ನಲ್ಲಿ ಸ್ವಲ್ಪ ಚೇತರಿಕೆ; ಮಳೆ ನಡುವೆಯೂ ಹಲವು ಕಡೆಗಳಲ್ಲಿ ಹೌಸ್​ಫುಲ್​
ಪ್ರಭಾಸ್​, ಕೃತಿ ಸನೋನ್
ಮದನ್​ ಕುಮಾರ್​
|

Updated on: Jun 25, 2023 | 11:16 AM

Share

ಜೂನ್​ 16ರಂದು ತೆರೆಕಂಡ ‘ಆದಿಪುರುಷ್​’ ಸಿನಿಮಾ (Adipurush Movie) ಹೇಳಿಕೊಳ್ಳುವಂತಹ ಕಲೆಕ್ಷನ್​ ಮಾಡಿಲ್ಲ. ಈ ಚಿತ್ರಕ್ಕೆ ಪ್ರೇಕ್ಷಕರಿಂದ ನೆಗೆಟಿವ್​ ಪ್ರತಿಕ್ರಿಯೆ ಸಿಕ್ಕಿದ್ದೇ ಹೆಚ್ಚು. ಓಂ ರಾವತ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಪ್ರಭಾಸ್​ (Prabhas) ಅವರ ಅಭಿಮಾನಿಗಳು ‘ಆದಿಪುರುಷ್​’ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಆ ನಿರೀಕ್ಷೆಯ ಮಟ್ಟವನ್ನು ತಲುಪಲು ಈ ಸಿನಿಮಾಗೆ ಸಾಧ್ಯವಾಗಲಿಲ್ಲ. ರಾಮಾಯಣದ ಕಥೆಯನ್ನು ಆಧರಿಸಿ ಈ ಸಿನಿಮಾದಲ್ಲಿ ಅನೇಕ ತಪ್ಪುಗಳು ಇವೆ ಎಂಬುದನ್ನು ಪ್ರೇಕ್ಷಕರು ಪತ್ತೆ ಹೆಚ್ಚಿದರು. ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್​ ಆಗಿದ್ದರಿಂದ ಸಿನಿಮಾದ ಕಲೆಕ್ಷನ್​ ಮೇಲೆ ಪರಿಣಾಮ ಬೀರಿತು. ಆದರೆ ಅಚ್ಚರಿ ಎಂಬಂತೆ ಎರಡನೇ ವೀಕೆಂಡ್​ನಲ್ಲಿ ‘ಆದಿಪುರುಷ್​’ ಕಲೆಕ್ಷನ್​ (Adipurush Box Office Collection) ಕೊಂಚ ಸುಧಾರಿಸಿದೆ. ಜೂನ್​ 24ರಂದು ಹಲವು ಕಡೆಗಳಲ್ಲಿ ಹೌಸ್​ಫುಲ್​ ಆಗಿದೆ.

ಎರಡನೇ ವೀಕೆಂಡ್​ನಲ್ಲಿ ‘ಆದಿಪುರುಷ್​’ ಸಿನಿಮಾ ಸಂಪೂರ್ಣವಾಗಿ ತನ್ನ ಆಟ ನಿಲ್ಲಿಸಲಿದೆ ಎಂದು ಕೆಲವರು ಊಹಿಸಿದ್ದರು. ಆದರೆ ಆ ರೀತಿ ಆಗಿಲ್ಲ. ಮೊದಲ ವಾರದಲ್ಲಿ ಸಿನಿಮಾ ನೋಡಲು ಸಾಧ್ಯವಾಗದೇ ಇರುವವರು 2ನೇ ವೀಕೆಂಡ್​ನಲ್ಲಿ ಚಿತ್ರಮಂದಿರಕ್ಕೆ ಬರುತ್ತಿದ್ದಾರೆ. ಇದರಿಂದ ಜೂನ್​ 24ರಂದು ಈ ಸಿನಿಮಾದ ಕಲೆಕ್ಷನ್​ ಸ್ವಲ್ಪ ಏರಿಕೆ ಆಗಿದೆ. ಭಾನುವಾರ (ಜೂನ್​ 25) ಕೂಡ ಇದೇ ರೀತಿ ಹೌಸ್​ಫುಲ್​ ಆದರೆ ಚಿತ್ರದ ಟೋಟಲ್​ ಗಳಿಕೆ ಹೆಚ್ಚಾಗಲಿದೆ.

ಇದನ್ನೂ ಓದಿ: Om Raut: ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ‘ಆದಿಪುರುಷ್​’ ನಿರ್ದೇಶಕ ಓಂ ರಾವತ್​ಗೆ ಮುಂಬೈ ಪೊಲೀಸರಿಂದ​ ಭದ್ರತೆ?

ಹೈದರಾಬಾದ್​ನಲ್ಲಿ ಶನಿವಾರ ಸಿಕ್ಕಾಪಟ್ಟೆ ಮಳೆ ಸುರಿದಿದೆ. ಮಳೆಯ ರಭಸಕ್ಕೆ ಅನೇಕ ರಸ್ತೆಗಳು ಜಲಾವೃತಗೊಂಡಿವೆ. ಟ್ರಾಫಿಕ್​ ಸವಾರರು ತುಂಬ ಸಮಸ್ಯೆ ಎದುರಿಸಿದ್ದಾರೆ. ಅಚ್ಚರಿ ಏನೆಂದರೆ ಈ ಪರಿ ಮಳೆಯ ನಡುವೆಯೂ ‘ಆದಿಪುರುಷ್​’ ಸಿನಿಮಾ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಆಗಿದೆ. ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಲು ಜನರು ಬಯಸುತ್ತಿದ್ದಾರೆ ಎಂಬುದಕ್ಕೆ ಇದು ಸಾಕ್ಷಿ. ಇನ್ನೂ ಅನೇಕರು ಈ ಸಿನಿಮಾವನ್ನು ಒಟಿಟಿಯಲ್ಲಿ ನೋಡುವುದಕ್ಕಾಗಿ ಕಾದಿದ್ದಾರೆ. ‘ಅಮೇಜಾನ್ ಪ್ರೈಂ ವಿಡಿಯೋ’ ಮೂಲಕ ‘ಆದಿಪುರುಷ್​’ ಚಿತ್ರ ಒಟಿಟಿಗೆ ಬರಲಿದೆ. ಆದರೆ ದಿನಾಂಕ ಇನ್ನೂ ನಿಗದಿ ಆಗಿಲ್ಲ.

ಇದನ್ನೂ ಓದಿ: Om Raut: ‘ಆದಿಪುರುಷ್​’ ಚಿತ್ರಕ್ಕೆ ಕೆಟ್ಟ ವಿಮರ್ಶೆ ಸಿಕ್ಕ ಬಳಿಕ ನಿರ್ದೇಶಕ ಓಂ ರಾವತ್​ ಪ್ರತಿಕ್ರಿಯೆ ಏನು?

‘ಆದಿಪುರುಷ್​’ ಸಿನಿಮಾ ಭಾರತದ ಮಾರುಕಟ್ಟೆಯಲ್ಲಿ 268 ಕೋಟಿ ರೂಪಾಯಿ ಮಾಡಿದೆ. ವಿಶ್ವಾದ್ಯಂತ ಇದರ ಗಳಿಕೆ 386 ಕೋಟಿ ರೂಪಾಯಿ ಆಗಿದೆ. ಈ ಸಿನಿಮಾದ ಬಜೆಟ್​ ದುಬಾರಿ ಆಗಿರುವುದರಿಂದ ಚಿತ್ರಮಂದಿರದಲ್ಲಿ ಆಗಿರುವ ಈ ಕಲೆಕ್ಷನ್​ ತೃಪ್ತಿದಾಯಕವಾಗಿಲ್ಲ. ಪ್ರಭಾಸ್​ ಅವರು ಈ ಸಿನಿಮಾದಲ್ಲಿ ರಾಮನ ಪಾತ್ರ ಮಾಡಿದ್ದಾರೆ. ಸೀತೆಯಾಗಿ ಕೃತಿ ಸನೋನ್ ಅವರು ನಟಿಸಿದ್ದಾರೆ. ರಾವಣನಾಗಿ ಸೈಫ್​ ಅಲಿ ಖಾನ್​, ಲಕ್ಷ್ಮಣನಾಗಿ ಸನ್ನಿ ಸಿಂಗ್​, ಆಂಜನೇಯನಾಗಿ ದೇವದತ್ತ ನಾಗೆ ಅಭಿನಯಿಸಿದ್ದಾರೆ. ಈ ಚಿತ್ರದಿಂದ ನಿರ್ದೇಶಕ ಓಂ ರಾವತ್​ ಅವರು ಸಖತ್​ ಟ್ರೋಲ್​ಗೆ ಒಳಗಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?