AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ‘ಆದಿಪುರುಷ್​’ ಕಲೆಕ್ಷನ್​ನಲ್ಲಿ ಸ್ವಲ್ಪ ಚೇತರಿಕೆ; ಮಳೆ ನಡುವೆಯೂ ಹಲವು ಕಡೆಗಳಲ್ಲಿ ಹೌಸ್​ಫುಲ್​

Adipurush Box Office Collection: 2ನೇ ವೀಕೆಂಡ್​ನಲ್ಲಿ ‘ಆದಿಪುರುಷ್​’ ಸಿನಿಮಾ ಸಂಪೂರ್ಣವಾಗಿ ತನ್ನ ಆಟ ನಿಲ್ಲಿಸಲಿದೆ ಎಂದು ಕೆಲವರು ಊಹಿಸಿದ್ದರು. ಆದರೆ ಆ ರೀತಿ ಆಗಿಲ್ಲ.

Adipurush: ‘ಆದಿಪುರುಷ್​’ ಕಲೆಕ್ಷನ್​ನಲ್ಲಿ ಸ್ವಲ್ಪ ಚೇತರಿಕೆ; ಮಳೆ ನಡುವೆಯೂ ಹಲವು ಕಡೆಗಳಲ್ಲಿ ಹೌಸ್​ಫುಲ್​
ಪ್ರಭಾಸ್​, ಕೃತಿ ಸನೋನ್
ಮದನ್​ ಕುಮಾರ್​
|

Updated on: Jun 25, 2023 | 11:16 AM

Share

ಜೂನ್​ 16ರಂದು ತೆರೆಕಂಡ ‘ಆದಿಪುರುಷ್​’ ಸಿನಿಮಾ (Adipurush Movie) ಹೇಳಿಕೊಳ್ಳುವಂತಹ ಕಲೆಕ್ಷನ್​ ಮಾಡಿಲ್ಲ. ಈ ಚಿತ್ರಕ್ಕೆ ಪ್ರೇಕ್ಷಕರಿಂದ ನೆಗೆಟಿವ್​ ಪ್ರತಿಕ್ರಿಯೆ ಸಿಕ್ಕಿದ್ದೇ ಹೆಚ್ಚು. ಓಂ ರಾವತ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಪ್ರಭಾಸ್​ (Prabhas) ಅವರ ಅಭಿಮಾನಿಗಳು ‘ಆದಿಪುರುಷ್​’ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಆ ನಿರೀಕ್ಷೆಯ ಮಟ್ಟವನ್ನು ತಲುಪಲು ಈ ಸಿನಿಮಾಗೆ ಸಾಧ್ಯವಾಗಲಿಲ್ಲ. ರಾಮಾಯಣದ ಕಥೆಯನ್ನು ಆಧರಿಸಿ ಈ ಸಿನಿಮಾದಲ್ಲಿ ಅನೇಕ ತಪ್ಪುಗಳು ಇವೆ ಎಂಬುದನ್ನು ಪ್ರೇಕ್ಷಕರು ಪತ್ತೆ ಹೆಚ್ಚಿದರು. ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್​ ಆಗಿದ್ದರಿಂದ ಸಿನಿಮಾದ ಕಲೆಕ್ಷನ್​ ಮೇಲೆ ಪರಿಣಾಮ ಬೀರಿತು. ಆದರೆ ಅಚ್ಚರಿ ಎಂಬಂತೆ ಎರಡನೇ ವೀಕೆಂಡ್​ನಲ್ಲಿ ‘ಆದಿಪುರುಷ್​’ ಕಲೆಕ್ಷನ್​ (Adipurush Box Office Collection) ಕೊಂಚ ಸುಧಾರಿಸಿದೆ. ಜೂನ್​ 24ರಂದು ಹಲವು ಕಡೆಗಳಲ್ಲಿ ಹೌಸ್​ಫುಲ್​ ಆಗಿದೆ.

ಎರಡನೇ ವೀಕೆಂಡ್​ನಲ್ಲಿ ‘ಆದಿಪುರುಷ್​’ ಸಿನಿಮಾ ಸಂಪೂರ್ಣವಾಗಿ ತನ್ನ ಆಟ ನಿಲ್ಲಿಸಲಿದೆ ಎಂದು ಕೆಲವರು ಊಹಿಸಿದ್ದರು. ಆದರೆ ಆ ರೀತಿ ಆಗಿಲ್ಲ. ಮೊದಲ ವಾರದಲ್ಲಿ ಸಿನಿಮಾ ನೋಡಲು ಸಾಧ್ಯವಾಗದೇ ಇರುವವರು 2ನೇ ವೀಕೆಂಡ್​ನಲ್ಲಿ ಚಿತ್ರಮಂದಿರಕ್ಕೆ ಬರುತ್ತಿದ್ದಾರೆ. ಇದರಿಂದ ಜೂನ್​ 24ರಂದು ಈ ಸಿನಿಮಾದ ಕಲೆಕ್ಷನ್​ ಸ್ವಲ್ಪ ಏರಿಕೆ ಆಗಿದೆ. ಭಾನುವಾರ (ಜೂನ್​ 25) ಕೂಡ ಇದೇ ರೀತಿ ಹೌಸ್​ಫುಲ್​ ಆದರೆ ಚಿತ್ರದ ಟೋಟಲ್​ ಗಳಿಕೆ ಹೆಚ್ಚಾಗಲಿದೆ.

ಇದನ್ನೂ ಓದಿ: Om Raut: ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ‘ಆದಿಪುರುಷ್​’ ನಿರ್ದೇಶಕ ಓಂ ರಾವತ್​ಗೆ ಮುಂಬೈ ಪೊಲೀಸರಿಂದ​ ಭದ್ರತೆ?

ಹೈದರಾಬಾದ್​ನಲ್ಲಿ ಶನಿವಾರ ಸಿಕ್ಕಾಪಟ್ಟೆ ಮಳೆ ಸುರಿದಿದೆ. ಮಳೆಯ ರಭಸಕ್ಕೆ ಅನೇಕ ರಸ್ತೆಗಳು ಜಲಾವೃತಗೊಂಡಿವೆ. ಟ್ರಾಫಿಕ್​ ಸವಾರರು ತುಂಬ ಸಮಸ್ಯೆ ಎದುರಿಸಿದ್ದಾರೆ. ಅಚ್ಚರಿ ಏನೆಂದರೆ ಈ ಪರಿ ಮಳೆಯ ನಡುವೆಯೂ ‘ಆದಿಪುರುಷ್​’ ಸಿನಿಮಾ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಆಗಿದೆ. ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಲು ಜನರು ಬಯಸುತ್ತಿದ್ದಾರೆ ಎಂಬುದಕ್ಕೆ ಇದು ಸಾಕ್ಷಿ. ಇನ್ನೂ ಅನೇಕರು ಈ ಸಿನಿಮಾವನ್ನು ಒಟಿಟಿಯಲ್ಲಿ ನೋಡುವುದಕ್ಕಾಗಿ ಕಾದಿದ್ದಾರೆ. ‘ಅಮೇಜಾನ್ ಪ್ರೈಂ ವಿಡಿಯೋ’ ಮೂಲಕ ‘ಆದಿಪುರುಷ್​’ ಚಿತ್ರ ಒಟಿಟಿಗೆ ಬರಲಿದೆ. ಆದರೆ ದಿನಾಂಕ ಇನ್ನೂ ನಿಗದಿ ಆಗಿಲ್ಲ.

ಇದನ್ನೂ ಓದಿ: Om Raut: ‘ಆದಿಪುರುಷ್​’ ಚಿತ್ರಕ್ಕೆ ಕೆಟ್ಟ ವಿಮರ್ಶೆ ಸಿಕ್ಕ ಬಳಿಕ ನಿರ್ದೇಶಕ ಓಂ ರಾವತ್​ ಪ್ರತಿಕ್ರಿಯೆ ಏನು?

‘ಆದಿಪುರುಷ್​’ ಸಿನಿಮಾ ಭಾರತದ ಮಾರುಕಟ್ಟೆಯಲ್ಲಿ 268 ಕೋಟಿ ರೂಪಾಯಿ ಮಾಡಿದೆ. ವಿಶ್ವಾದ್ಯಂತ ಇದರ ಗಳಿಕೆ 386 ಕೋಟಿ ರೂಪಾಯಿ ಆಗಿದೆ. ಈ ಸಿನಿಮಾದ ಬಜೆಟ್​ ದುಬಾರಿ ಆಗಿರುವುದರಿಂದ ಚಿತ್ರಮಂದಿರದಲ್ಲಿ ಆಗಿರುವ ಈ ಕಲೆಕ್ಷನ್​ ತೃಪ್ತಿದಾಯಕವಾಗಿಲ್ಲ. ಪ್ರಭಾಸ್​ ಅವರು ಈ ಸಿನಿಮಾದಲ್ಲಿ ರಾಮನ ಪಾತ್ರ ಮಾಡಿದ್ದಾರೆ. ಸೀತೆಯಾಗಿ ಕೃತಿ ಸನೋನ್ ಅವರು ನಟಿಸಿದ್ದಾರೆ. ರಾವಣನಾಗಿ ಸೈಫ್​ ಅಲಿ ಖಾನ್​, ಲಕ್ಷ್ಮಣನಾಗಿ ಸನ್ನಿ ಸಿಂಗ್​, ಆಂಜನೇಯನಾಗಿ ದೇವದತ್ತ ನಾಗೆ ಅಭಿನಯಿಸಿದ್ದಾರೆ. ಈ ಚಿತ್ರದಿಂದ ನಿರ್ದೇಶಕ ಓಂ ರಾವತ್​ ಅವರು ಸಖತ್​ ಟ್ರೋಲ್​ಗೆ ಒಳಗಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!