Om Raut: ‘ಆದಿಪುರುಷ್​’ ಚಿತ್ರಕ್ಕೆ ಕೆಟ್ಟ ವಿಮರ್ಶೆ ಸಿಕ್ಕ ಬಳಿಕ ನಿರ್ದೇಶಕ ಓಂ ರಾವತ್​ ಪ್ರತಿಕ್ರಿಯೆ ಏನು?

Adipurush Movie: ‘ಆದಿಪುರುಷ್​’ ಸಿನಿಮಾದಲ್ಲಿನ ಎಲ್ಲ ತಪ್ಪುಗಳಿಗೆ ನೇರವಾಗಿ ನಿರ್ದೇಶಕ ಓಂ ರಾವತ್​ ಅವರನ್ನು ಹೊಣೆಯಾಗಿಸಲಾಗುತ್ತಿದೆ. ಹಲವು ರೀತಿಯಲ್ಲಿ ಟೀಕೆ ಮಾಡಲಾಗುತ್ತಿದೆ.

Om Raut: ‘ಆದಿಪುರುಷ್​’ ಚಿತ್ರಕ್ಕೆ ಕೆಟ್ಟ ವಿಮರ್ಶೆ ಸಿಕ್ಕ ಬಳಿಕ ನಿರ್ದೇಶಕ ಓಂ ರಾವತ್​ ಪ್ರತಿಕ್ರಿಯೆ ಏನು?
ಪ್ರಭಾಸ್​ , ಓಂ ರಾವತ್​
Follow us
|

Updated on:Jun 18, 2023 | 7:34 AM

‘ಆದಿಪುರುಷ್​’ ಸಿನಿಮಾ (Adipurush) ವಿಚಾರದಲ್ಲಿ ಪ್ರೇಕ್ಷಕರು ಅಂದುಕೊಂಡಿದ್ದೇ ಬೇರೆ, ಆಗಿದ್ದೇ ಬೇರೆ. ರಾಮಾಯಣದ ಕಥೆಯನ್ನು ದೊಡ್ಡ ಪರದೆ ಮೇಲೆ ನೋಡಲು ಹೋದ ಪ್ರೇಕ್ಷಕರಿಗೆ ಬೇಸರ ಆಗಿದೆ. ನಿರ್ದೇಶಕ ಓಂ ರಾವತ್​ (Om Raut) ಅವರು ಈ ಸಿನಿಮಾವನ್ನು ಕಟ್ಟಿಕೊಟ್ಟ ರೀತಿಗೆ ಸಿನಿಪ್ರಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಹುತೇಕ ಜನರಿಗೆ ಈ ಸಿನಿಮಾ ಇಷ್ಟ ಆಗಿಲ್ಲ. ನೇರವಾಗಿ ಎಲ್ಲರೂ ಕೆಟ್ಟ ಪ್ರತಿಕ್ರಿಯೆ ನೀಡಿದ್ದಾರೆ. ಇದು ‘ಆದಿಪುರುಷ್​’ ಚಿತ್ರತಂಡಕ್ಕೆ ನಿಜಕ್ಕೂ ಮುಜುಗರ ತರುವ ವಿಚಾರ. ಪ್ರಭಾಸ್​ (Prabhas) ಅವರ ಅಭಿಮಾನಿಗಳಿಗೂ ಇದರಿಂದ ಬೇಸರ ಆಗಿದೆ. ಓಂ ರಾವತ್​ ಅವರನ್ನು ಎಲ್ಲರೂ ಟೀಕೆ ಮಾಡುತ್ತಿದ್ದಾರೆ. ಈ ನಡುವೆ ಟ್ವೀಟ್​ ಮಾಡಿರುವ ಅವರ ‘ಜೈ ಶ್ರೀರಾಮ್​’ ಎಂದು ರಾಮನ ಜಪ ಮಾಡಿದ್ದಾರೆ. ಅದಕ್ಕೆ ಕಾರಣವೂ ಇದೆ.

‘ಆದಿಪುರುಷ್​’ ಸಿನಿಮಾ ಪ್ರದರ್ಶನ ಆಗುವ ಎಲ್ಲ ಚಿತ್ರಮಂದಿರಗಳಲ್ಲೂ ಹನುಮಂತನಿಗಾಗಿ ಒಂದು ಸೀಟು ಮೀಸಲಿಡುವಂತೆ ಚಿತ್ರತಂಡ ಮನವಿ ಮಾಡಿಕೊಂಡಿತ್ತು. ಅದಕ್ಕೆ ಬಹುತೇಕ ಚಿತ್ರಮಂದಿರಗಳಿಂದ ಸ್ಪಂದನೆ ವ್ಯಕ್ತವಾಗಿದೆ. ಸೀಟು ಖಾಲಿ ಬಿಡುವುದು ಮಾತ್ರವಲ್ಲದೇ ಅದರ ಮೇಲೆ ಆಂಜನೇಯನ ಫೋಟೋ ಇಟ್ಟು ಪೂಜೆ ಮಾಡಲಾಗಿದೆ. ಹಲವು ಥಿಯೇಟರ್​ಗಳ ಫೋಟೋ ಹಂಚಿಕೊಂಡಿರುವ ಓಂ ರಾವತ್​ ಅವರು ಅದಕ್ಕೆ ‘ಜೈ ಶ್ರೀರಾಮ್​’ ಎಂದು ಕ್ಯಾಪ್ಷನ್​ ನೀಡಿ ಟ್ವೀಟ್​ ಮಾಡಿದ್ದಾರೆ. ಇದನ್ನು ಹೊರತುಪಡಿಸಿ ಅವರು ಬೇರೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

‘ಆದಿಪುರುಷ್​’ ಸಿನಿಮಾದಲ್ಲಿನ ಎಲ್ಲ ತಪ್ಪುಗಳಿಗೆ ನೇರವಾಗಿ ನಿರ್ದೇಶಕ ಓಂ ರಾವತ್​ ಅವರನ್ನು ಹೊಣೆಯಾಗಿಸಲಾಗುತ್ತಿದೆ. ಹಳೇ ರಾಮಾಯಣ ಧಾರಾವಾಹಿಗೆ ಹೋಲಿಸಿ ಮಾತನಾಡಲಾಗುತ್ತಿದೆ. ರಾವಣನನ್ನು ತೋರಿಸಿದ ರೀತಿ ಸರಿಯಿಲ್ಲ. ಪ್ರಭಾಸ್​ಗೆ ರಾಮನ ಪಾತ್ರ ಹೊಂದಿಕೆ ಆಗಿಲ್ಲ. ಗ್ರಾಫಿಕ್ಸ್​ ಗುಣಮಟ್ಟ ಸರಿಯಿಲ್ಲ ಎಂಬಿತ್ಯಾದಿ ಟೀಕೆಗಳು ಕೇಳಿಬಂದಿವೆ. ಈ ಎಲ್ಲದಕ್ಕೂ ಓಂ ರಾವತ್​ ಅವರು ಯಾವ ರೀತಿ ಉತ್ತರ ನೀಡುತ್ತಾರೆ ಎಂಬುದನ್ನು ತಿಳಿಯಲು ಎಲ್ಲರೂ ಕಾದಿದ್ದಾರೆ.

Adipurush Review: ಗ್ರಾಫಿಕ್ಸ್​ ನಂಬಿಕೊಂಡು ಯುದ್ಧ ಮಾಡಿದ ರಾಮ-ರಾವಣ; ಇದು ಓಂ ರಾವತ್​ ರಾಮಾಯಣ

ಓಂ ರಾವತ್​ ಅವರು ‘ತಾನಾಜಿ’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಪಡೆದಿದ್ದರು. ಆ ಚಿತ್ರದ ಬಳಿಕ ಅವರಿಗೆ ‘ಆದಿಪುರುಷ್​’ ಸಿನಿಮಾವನ್ನು ನಿರ್ದೇಶಿಸುವ ಜವಾಬ್ದಾರಿ ನೀಡಲಾಯಿತು. ಆದರೆ ಅವರು ಆರಂಭದಲ್ಲೇ ಎಡವಿದರು. ಟೀಸರ್​ ಬಿಡುಗಡೆ ಆದಾಗಲೇ ಜನರಿಂದ ಕಟು ಟೀಕೆ ವ್ಯಕ್ತವಾಗಿತ್ತು. ಆ ಬಳಿಕ ಒಂದಷ್ಟು ಬದಲಾವಣೆ ಮಾಡಿಕೊಳ್ಳುತ್ತಾರೆ ಎಂದು ವರದಿ ಆಗಿತ್ತು. ಆದರೆ ಆ ಬದಲಾವಣೆಗಳು ಪ್ರೇಕ್ಷಕರಿಗೆ ಸಮಾಧಾನ ತಂದಿಲ್ಲ.

ಆದಿಪುರುಷ್ ಸಿನಿಮಾ ಬಗ್ಗೆ ಚತ್ತೀಸ್​ಘಡ ಸಿಎಂ ಆಕ್ಷೇಪ, ಜನರು ಬಯಸಿದರೆ ಬ್ಯಾನ್

ಸೈಫ್​ ಅಲಿ ಖಾನ್​ ಅವರು ‘ಆದಿಪುರುಷ್​’ ಚಿತ್ರದಲ್ಲಿ ರಾವಣನ ಪಾತ್ರ ಮಾಡಿದ್ದಾರೆ. ಕೃತಿ ಸನೋನ್​ ಅವರು ಸೀತೆಯಾಗಿ ಅಭಿನಯಿಸಿದ್ದಾರೆ. ಸನ್ನಿ ಸಿಂಗ್​ ಅವರು ಲಕ್ಷ್ಮಣನಾಗಿ ಕಾಣಿಸಿಕೊಂಡಿದ್ದಾರೆ. ದೇವದತ್ತ ನಾಗೆ ಮಾಡಿದ ಆಂಜನೇಯನ ಪಾತ್ರಕ್ಕೆ ಜನಮೆಚ್ಚುಗೆ ಸಿಕ್ಕಿದೆ. ಮೊದಲ ದಿನ ಈ ಸಿನಿಮಾಗೆ ವಿಶ್ವಾದ್ಯಂತ 150 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ ಎಂದು ವರದಿ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:33 am, Sun, 18 June 23

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ