AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuman: ‘ಆದಿಪುರುಷ್​’ ಬಳಿಕ ‘ಹನುಮಾನ್​’ ಸಿನಿಮಾ ಮೇಲೆ ಮೂಡಿದೆ ನಿರೀಕ್ಷೆ: ಇದೂ ಸಹ ಪ್ಯಾನ್​ ಇಂಡಿಯಾ ಚಿತ್ರ

Ramayana: ‘ಹನುಮಾನ್​’ ಚಿತ್ರಕ್ಕೆ ಪ್ರಶಾಂತ್​ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದರಲ್ಲಿ ಸಾಕಷ್ಟು ಗ್ರಾಫಿಕ್ಸ್​ ಬಳಕೆ ಆಗುತ್ತಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

Hanuman: ‘ಆದಿಪುರುಷ್​’ ಬಳಿಕ ‘ಹನುಮಾನ್​’ ಸಿನಿಮಾ ಮೇಲೆ ಮೂಡಿದೆ ನಿರೀಕ್ಷೆ: ಇದೂ ಸಹ ಪ್ಯಾನ್​ ಇಂಡಿಯಾ ಚಿತ್ರ
ಹನುಮಾನ್​
ಮದನ್​ ಕುಮಾರ್​
|

Updated on: Jun 19, 2023 | 3:03 PM

Share

ಪೌರಾಣಿಕ ಕಥೆಗಳು ಎಂದಿಗೂ ಹಳೆಯದಾಗುವುದಿಲ್ಲ. ಹಾಗಾಗಿ ಮಹಾಭಾರತ, ರಾಮಾಯಣ ಮುಂತಾದ ಕಥೆಗಳನ್ನು ಆಧರಿಸಿ ಹಲವು ಸಿನಿಮಾ ಮತ್ತು ಧಾರಾವಾಹಿಗಳು ಮೂಡಿಬರುತ್ತಲೇ ಇವೆ. ಇತ್ತೀಚೆಗಷ್ಟೇ ‘ಆದಿಪುರುಷ್​’ ಸಿನಿಮಾ (Adipurush Movie) ಬಿಡುಗಡೆ ಆಯಿತು. ಈ ಸಿನಿಮಾದಲ್ಲಿ ಪ್ರಭಾಸ್​ ಅವರು ರಾಮನಾಗಿ ಕಾಣಿಸಿಕೊಂಡಿದ್ದಾರೆ. ಓಂ ರಾವತ್​ ನಿರ್ದೇಶನದ ಈ ಚಿತ್ರಕ್ಕೆ ಭಾರಿ ಟೀಕೆ ವ್ಯಕ್ತವಾಗಿದೆ. ಸರಿಯಾದ ರೀತಿಯಲ್ಲಿ ರಾಮಾಯಣದ (Ramayana) ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಿಲ್ಲ ಎಂದು ಹಲವರು ತಕರಾರು ತೆಗೆದಿದ್ದಾರೆ. ಇದರ ಬೆನ್ನಲ್ಲೇ ಬೇರೆ ಸಿನಿಮಾಗಳ ಬಗ್ಗೆಯೂ ಚರ್ಚೆ ಆಗುತ್ತಿದೆ. ರಾಮಾಯಣದ ಕಥೆಯನ್ನು ಆಧರಿಸಿ ಇನ್ನೂ ಕೆಲವು ಚಿತ್ರಗಳು ಸಿದ್ಧ ಆಗುತ್ತಿವೆ. ಆ ಪೈಕಿ ಹೆಚ್ಚು ನಿರೀಕ್ಷೆ ಮೂಡಿಸಿರುವುದು ‘ಹನುಮಾನ್​’ (Hanuman) ಸಿನಿಮಾ. ಈ ಚಿತ್ರ ಕೂಡ ‘ಆದಿಪುರುಷ್​’ ರೀತಿಯೇ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮೂಡಿಬರಲಿದೆ ಎಂಬುದು ವಿಶೇಷ. ಹೆಸರೇ ಸೂಚಿಸುವಂತೆ ಇದರಲ್ಲಿ ಆಂಜನೇಯನ ಕಥೆ ಪ್ರಮುಖವಾಗಿ ಇರಲಿದೆ.

‘ಹನುಮಾನ್​’ ಚಿತ್ರಕ್ಕೆ ಪ್ರಶಾಂತ್​ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ತೇಜ ಸಜ್ಜಾ ಅವರು ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಅಮೃತಾ ಅಯ್ಯರ್​, ವರಲಕ್ಷ್ಮಿ ಶರತ್​ಕುಮಾರ್​, ವಿನಯ್ ರೈ, ರಾಜ್​ ದೀಪಕ್​ ಶೆಟ್ಟಿ, ವೆನ್ನೆಲಾ ಕಿಶೋರ್​ ಮುಂತಾದವರು ಕೂಡ ‘ಹನುಮಾನ್​’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. 2022ರ ನವೆಂಬರ್​ ತಿಂಗಳಲ್ಲಿ ಈ ಸಿನಿಮಾದ ಟೀಸರ್​ ಬಿಡುಗಡೆ ಆಗಿತ್ತು. ಇದು ಪ್ಯಾನ್​ ಇಂಡಿಯಾ ಸಿನಿಮಾ ಆಗಿದ್ದು ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂನಲ್ಲಿ ಬಿಡುಗಡೆ ಆಗಲಿದೆ.

ಇದನ್ನೂ ಓದಿ: Om Raut: ‘ಆದಿಪುರುಷ್​’ ಚಿತ್ರಕ್ಕೆ ಕೆಟ್ಟ ವಿಮರ್ಶೆ ಸಿಕ್ಕ ಬಳಿಕ ನಿರ್ದೇಶಕ ಓಂ ರಾವತ್​ ಪ್ರತಿಕ್ರಿಯೆ ಏನು?

ಪೌರಾಣಿಕ ಕಥಾಹಂದರ ಇಟ್ಟುಕೊಂಡು ಸಿನಿಮಾ ಮಾಡುವಾಗ ಸಾಕಷ್ಟು ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ‘ಆದಿಪುರುಷ್​’ ರೀತಿ ಟೀಕೆಗೆ ಒಳಗಾಗಬೇಕಾಗುತ್ತದೆ. ಈಗ ‘ಹನುಮಾನ್​’ ಸಿನಿಮಾ ಯಾವ ರೀತಿ ಇರಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ವಿಶೇಷ ಏನೆಂದರೆ ಇದು ಸಂಪೂರ್ಣ ಪೌರಾಣಿಕ ಕಥೆಯನ್ನು ಹೊಂದಿರುವ ಸಿನಿಮಾ ಅಲ್ಲ. ಹನುಮಂತನ ಪಾತ್ರವನ್ನು ಕೇಂದ್ರವಾಗಿ ಇಟ್ಟುಕೊಂಡು ಬೇರೆಯದೇ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗುವುದು ಎಂಬುದಕ್ಕೆ ಟೀಸರ್​ನಲ್ಲಿ ಸುಳಿವು ಸಿಕ್ಕಿದೆ. ಆ ಬಗ್ಗೆ ಇನ್ನಷ್ಟೇ ಹೆಚ್ಚಿನ ಅಪ್​ಡೇಟ್​ ಸಿಗಬೇಕಿದೆ.

‘ಹನುಮಾನ್​’ ಸಿನಿಮಾದ ಕೆಲಸಗಳು ತಡವಾಗುತ್ತಿವೆ. ಇದರಲ್ಲಿ ಸಾಕಷ್ಟು ಗ್ರಾಫಿಕ್ಸ್​ ಬಳಕೆ ಆಗುತ್ತಿದೆ. ಮೂಲಗಳ ಪ್ರಕಾರ 1600 ಶಾಟ್​ಗಳಲ್ಲಿ ವಿಎಫ್​​ಎಕ್ಸ್​ ಇರಲಿದೆ. ಅದಕ್ಕಾಗಿ ಚಿತ್ರದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಿಗೆ ಹೆಚ್ಚು ಸಮಯ ಹಿಡಿಯುತ್ತಿದೆ. ದಿನದಿಂದ ದಿನಕ್ಕೆ ಚಿತ್ರದ ಬಜೆಟ್​ ಹೆಚ್ಚಾಗುತ್ತಿದೆ. ಸಿನಿಮಾದ ಬಿಸ್ನೆಸ್​ ಮಾತುಕತೆ ಕೂಡ ಅಂತಿಮವಾಗಿಲ್ಲ. ಈ ಎಲ್ಲ ಕಾರಣಗಳಿಂದಾಗಿ ‘ಹನುಮಾನ್​’ ಚಿತ್ರದ ರಿಲೀಸ್​ ವಿಳಂಬ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ