AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆದಿಪುರುಷ್​​’ ಚಿತ್ರಕ್ಕೆ ಮುಳುವಾದ ವಿವಾದ; ಉತ್ತರಿಸಲು ಸೆನ್ಸಾರ್ ಮಂಡಳಿಗೆ ಕೋರ್ಟ್​ ಆದೇಶ

ಶನಿವಾರ (ಜನವರಿ 14) ಅಲಹಾಬಾದ್ ಹೈಕೋರ್ಟ್​​ನ ಲಖನೌ ಪೀಠವು ಸೆನ್ಸಾರ್ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ. ಸಲ್ಲಿಕೆ ಆದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಉತ್ತರಿಸುವಂತೆ ಕೋರ್ಟ್​ ಸೂಚನೆ ನೀಡಿದೆ.

‘ಆದಿಪುರುಷ್​​’ ಚಿತ್ರಕ್ಕೆ ಮುಳುವಾದ ವಿವಾದ; ಉತ್ತರಿಸಲು ಸೆನ್ಸಾರ್ ಮಂಡಳಿಗೆ ಕೋರ್ಟ್​ ಆದೇಶ
ಆದಿಪುರುಷ್ ಚಿತ್ರದಲ್ಲಿ ಪ್ರಭಾಸ್
TV9 Web
| Edited By: |

Updated on: Jan 14, 2023 | 2:48 PM

Share

ಪ್ರಭಾಸ್ (Prabhas) ನಟನೆಯ ‘ಆದಿಪುರುಷ್​’ ಚಿತ್ರಕ್ಕೆ ಒಂದಾದ ಮೇಲೆ ಒಂದರಂತೆ ವಿವಾದಗಳು ಸುತ್ತಿಕೊಳ್ಳುತ್ತಿವೆ. ವಿವಾದಗಳಿಂದ ಚಿತ್ರತಂಡ ದೂರ ಉಳಿಯಬೇಕು ಎಂದುಕೊಂಡರೂ ಅದು ಸಾಧ್ಯವಾಗುತ್ತಿಲ್ಲ. ಸಿನಿಮಾ ಬಗ್ಗೆ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಚಿತ್ರದ ಟೀಸರ್ ಈ ನಿರೀಕ್ಷೆಯನ್ನು ನಾಶ ಮಾಡಿತ್ತು. ಜನರು ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದರು. ಚಿತ್ರದಲ್ಲಿ ರಾವಣನ ಪಾತ್ರ ಮಾಡಿದ ಸೈಫ್ ಅಲಿ ಖಾನ್​ (Saif Ali Khan) ಖಿಲ್ಜಿಯ ರೀತಿ ಕಾಣುತ್ತಾನೆ ಎಂಬ ಆರೋಪಗಳು ಬಂದವು. ಈಗ ಸಿನಿಮಾಗೆ ಮತ್ತೊಂದು ತೊಂದರೆ ಆಗುವ ಸೂಚನೆ ಸಿಕ್ಕಿದೆ.

ವಿಎಫ್​ಎಕ್ಸ್ ವಿಚಾರದಲ್ಲಿ ‘ಆದಿಪುರುಷ್​’ ಚಿತ್ರವನ್ನು ಟೀಕಿಸಲಾಗಿದೆ. ರಾವಣನ ಪಾತ್ರ ಸರಿ ಇಲ್ಲ ಎಂದು ದೂರಲಾಗಿದೆ. ಅಷ್ಟೇ ಅಲ್ಲ, ಸಿನಿಮಾದಲ್ಲಿ ವಾನರರ ಜತೆ ಬೇರೆ ಪ್ರಾಣಿಗಳೂ ಸೇರಿಕೊಂಡಿವೆ ಎಂದು ಟೀಕೆ ಮಾಡಲಾಗಿದೆ. ಇದರ ಜತೆಗೆ ತಂಡ ಕಾನೂನು ಸಮರ ಎದುರಿಸುತ್ತಿದೆ. ಈಗ ಸೆನ್ಸಾರ್​ ಮಂಡಳಿಗೆ ಕೋರ್ಟ್​ನಿಂದ ನೋಟಿಸ್ ಹೋಗಿದೆ.

ಶನಿವಾರ (ಜನವರಿ 14) ಅಲಹಾಬಾದ್ ಹೈಕೋರ್ಟ್​​ನ ಲಖನೌ ಪೀಠವು ಸೆನ್ಸಾರ್ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ. ಸಲ್ಲಿಕೆ ಆದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಉತ್ತರಿಸುವಂತೆ ಕೋರ್ಟ್​ ಸೂಚನೆ ನೀಡಿದೆ. ಮುಂದಿನ ಅರ್ಜಿ ವಿಚಾರಣೆ ಫೆಬ್ರವರಿ 21ಕ್ಕೆ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ
Image
‘ಹನುಮಾನ್’ ಚಿತ್ರದ ಟೀಸರ್​ನಲ್ಲಿ ಬರುವ ಗ್ರಾಫಿಕ್ಸ್ ನೋಡಿ ಪ್ರಭಾಸ್​ಗೆ ಚುಚ್ಚಿದ ಸಿನಿಪ್ರಿಯರು
Image
ಟ್ರೋಲ್​ಗಳ ಮಧ್ಯೆ ನಿರ್ದೇಶಕ ಓಂ ರಾವತ್ ಪರ ನಿಂತ ‘ಆದಿಪುರುಷ್’ ನಟಿ ಕೃತಿ ಸನೋನ್
Image
ಟ್ರೋಲ್ ಮಧ್ಯೆಯೂ ಓಂ​ ರಾವತ್​ಗೆ 4 ಕೋಟಿ ರೂ. ಕಾರು ಕೊಟ್ಟ ‘ಆದಿಪುರುಷ್’ ನಿರ್ಮಾಪಕ ಭೂಷಣ್​ ಕುಮಾರ್​?

ಹಿಂದೂ ದೇವರಿಗೆ ಅವಮಾನ ಆಗಿದ್ದು, ಸಿನಿಮಾ ಮೇಲೆ ಬ್ಯಾನ್ ಹೇರಬೇಕು ಎಂದು ಈ ಮೊದಲು ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಆಗಿತ್ತು. ಎಲ್ಲವೂ ಅಂದುಕೊಂಡಂತೆ ನಡೆದರೆ ಜನವರಿ12ರಂದು ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ವಿಎಫ್​ಎಕ್ಸ್ ಕೆಲಸಗಳು ಪೂರ್ಣಗೊಂಡಿಲ್ಲ ಎನ್ನುವ ಕಾರಣ ನೀಡಿ ಚಿತ್ರದ ರಿಲೀಸ್ ದಿನಾಂಕವನ್ನು ತಂಡ ಮುಂದೂಡಿಕೊಂಡಿದೆ.

ಅರ್ಜಿಯಲ್ಲೇನಿದೆ?

ಕುಲ್ದೀಪ್ ತಿವಾರಿ ಎಂಬುವವರು ಈ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ. ‘ಸೆನ್ಸಾರ್ ಬೋರ್ಡ್​​ನಿಂದ ಒಪ್ಪಿಗೆ ಪಡೆಯದೇ ಆದಿಪುರುಷ್ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಮೂಲಕ ನಿಯಮ ಉಲ್ಲಂಘನೆ ಆಗಿದೆ. ಸೀತೆಯ ಪಾತ್ರಕ್ಕೆ ಬೇರೆ ರೀತಿಯ ಉಡುಗೆ ತೊಡಿಸಲಾಗಿದೆ. ಜನರ ನಂಬಿಕೆಗೆ ವಿರುದ್ಧವಾಗಿ ದೇವರನ್ನು ತೋರಿಸಲಾಗಿದೆ. ರಾವಣನ ಪಾತ್ರ ಕೂಡ ಸರಿಯಾಗಿ ಮೂಡಿ ಬಂದಿಲ್ಲ’ ಎಂದು ಕುಲ್ದೀಪ್ ಆರೋಪಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!