‘ಆದಿಪುರುಷ್​​’ ಚಿತ್ರಕ್ಕೆ ಮುಳುವಾದ ವಿವಾದ; ಉತ್ತರಿಸಲು ಸೆನ್ಸಾರ್ ಮಂಡಳಿಗೆ ಕೋರ್ಟ್​ ಆದೇಶ

ಶನಿವಾರ (ಜನವರಿ 14) ಅಲಹಾಬಾದ್ ಹೈಕೋರ್ಟ್​​ನ ಲಖನೌ ಪೀಠವು ಸೆನ್ಸಾರ್ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ. ಸಲ್ಲಿಕೆ ಆದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಉತ್ತರಿಸುವಂತೆ ಕೋರ್ಟ್​ ಸೂಚನೆ ನೀಡಿದೆ.

‘ಆದಿಪುರುಷ್​​’ ಚಿತ್ರಕ್ಕೆ ಮುಳುವಾದ ವಿವಾದ; ಉತ್ತರಿಸಲು ಸೆನ್ಸಾರ್ ಮಂಡಳಿಗೆ ಕೋರ್ಟ್​ ಆದೇಶ
ಆದಿಪುರುಷ್ ಚಿತ್ರದಲ್ಲಿ ಪ್ರಭಾಸ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jan 14, 2023 | 2:48 PM

ಪ್ರಭಾಸ್ (Prabhas) ನಟನೆಯ ‘ಆದಿಪುರುಷ್​’ ಚಿತ್ರಕ್ಕೆ ಒಂದಾದ ಮೇಲೆ ಒಂದರಂತೆ ವಿವಾದಗಳು ಸುತ್ತಿಕೊಳ್ಳುತ್ತಿವೆ. ವಿವಾದಗಳಿಂದ ಚಿತ್ರತಂಡ ದೂರ ಉಳಿಯಬೇಕು ಎಂದುಕೊಂಡರೂ ಅದು ಸಾಧ್ಯವಾಗುತ್ತಿಲ್ಲ. ಸಿನಿಮಾ ಬಗ್ಗೆ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಚಿತ್ರದ ಟೀಸರ್ ಈ ನಿರೀಕ್ಷೆಯನ್ನು ನಾಶ ಮಾಡಿತ್ತು. ಜನರು ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದರು. ಚಿತ್ರದಲ್ಲಿ ರಾವಣನ ಪಾತ್ರ ಮಾಡಿದ ಸೈಫ್ ಅಲಿ ಖಾನ್​ (Saif Ali Khan) ಖಿಲ್ಜಿಯ ರೀತಿ ಕಾಣುತ್ತಾನೆ ಎಂಬ ಆರೋಪಗಳು ಬಂದವು. ಈಗ ಸಿನಿಮಾಗೆ ಮತ್ತೊಂದು ತೊಂದರೆ ಆಗುವ ಸೂಚನೆ ಸಿಕ್ಕಿದೆ.

ವಿಎಫ್​ಎಕ್ಸ್ ವಿಚಾರದಲ್ಲಿ ‘ಆದಿಪುರುಷ್​’ ಚಿತ್ರವನ್ನು ಟೀಕಿಸಲಾಗಿದೆ. ರಾವಣನ ಪಾತ್ರ ಸರಿ ಇಲ್ಲ ಎಂದು ದೂರಲಾಗಿದೆ. ಅಷ್ಟೇ ಅಲ್ಲ, ಸಿನಿಮಾದಲ್ಲಿ ವಾನರರ ಜತೆ ಬೇರೆ ಪ್ರಾಣಿಗಳೂ ಸೇರಿಕೊಂಡಿವೆ ಎಂದು ಟೀಕೆ ಮಾಡಲಾಗಿದೆ. ಇದರ ಜತೆಗೆ ತಂಡ ಕಾನೂನು ಸಮರ ಎದುರಿಸುತ್ತಿದೆ. ಈಗ ಸೆನ್ಸಾರ್​ ಮಂಡಳಿಗೆ ಕೋರ್ಟ್​ನಿಂದ ನೋಟಿಸ್ ಹೋಗಿದೆ.

ಶನಿವಾರ (ಜನವರಿ 14) ಅಲಹಾಬಾದ್ ಹೈಕೋರ್ಟ್​​ನ ಲಖನೌ ಪೀಠವು ಸೆನ್ಸಾರ್ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ. ಸಲ್ಲಿಕೆ ಆದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಉತ್ತರಿಸುವಂತೆ ಕೋರ್ಟ್​ ಸೂಚನೆ ನೀಡಿದೆ. ಮುಂದಿನ ಅರ್ಜಿ ವಿಚಾರಣೆ ಫೆಬ್ರವರಿ 21ಕ್ಕೆ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ
Image
‘ಹನುಮಾನ್’ ಚಿತ್ರದ ಟೀಸರ್​ನಲ್ಲಿ ಬರುವ ಗ್ರಾಫಿಕ್ಸ್ ನೋಡಿ ಪ್ರಭಾಸ್​ಗೆ ಚುಚ್ಚಿದ ಸಿನಿಪ್ರಿಯರು
Image
ಟ್ರೋಲ್​ಗಳ ಮಧ್ಯೆ ನಿರ್ದೇಶಕ ಓಂ ರಾವತ್ ಪರ ನಿಂತ ‘ಆದಿಪುರುಷ್’ ನಟಿ ಕೃತಿ ಸನೋನ್
Image
ಟ್ರೋಲ್ ಮಧ್ಯೆಯೂ ಓಂ​ ರಾವತ್​ಗೆ 4 ಕೋಟಿ ರೂ. ಕಾರು ಕೊಟ್ಟ ‘ಆದಿಪುರುಷ್’ ನಿರ್ಮಾಪಕ ಭೂಷಣ್​ ಕುಮಾರ್​?

ಹಿಂದೂ ದೇವರಿಗೆ ಅವಮಾನ ಆಗಿದ್ದು, ಸಿನಿಮಾ ಮೇಲೆ ಬ್ಯಾನ್ ಹೇರಬೇಕು ಎಂದು ಈ ಮೊದಲು ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಆಗಿತ್ತು. ಎಲ್ಲವೂ ಅಂದುಕೊಂಡಂತೆ ನಡೆದರೆ ಜನವರಿ12ರಂದು ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ವಿಎಫ್​ಎಕ್ಸ್ ಕೆಲಸಗಳು ಪೂರ್ಣಗೊಂಡಿಲ್ಲ ಎನ್ನುವ ಕಾರಣ ನೀಡಿ ಚಿತ್ರದ ರಿಲೀಸ್ ದಿನಾಂಕವನ್ನು ತಂಡ ಮುಂದೂಡಿಕೊಂಡಿದೆ.

ಅರ್ಜಿಯಲ್ಲೇನಿದೆ?

ಕುಲ್ದೀಪ್ ತಿವಾರಿ ಎಂಬುವವರು ಈ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ. ‘ಸೆನ್ಸಾರ್ ಬೋರ್ಡ್​​ನಿಂದ ಒಪ್ಪಿಗೆ ಪಡೆಯದೇ ಆದಿಪುರುಷ್ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಮೂಲಕ ನಿಯಮ ಉಲ್ಲಂಘನೆ ಆಗಿದೆ. ಸೀತೆಯ ಪಾತ್ರಕ್ಕೆ ಬೇರೆ ರೀತಿಯ ಉಡುಗೆ ತೊಡಿಸಲಾಗಿದೆ. ಜನರ ನಂಬಿಕೆಗೆ ವಿರುದ್ಧವಾಗಿ ದೇವರನ್ನು ತೋರಿಸಲಾಗಿದೆ. ರಾವಣನ ಪಾತ್ರ ಕೂಡ ಸರಿಯಾಗಿ ಮೂಡಿ ಬಂದಿಲ್ಲ’ ಎಂದು ಕುಲ್ದೀಪ್ ಆರೋಪಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ