AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆದಿಪುರುಷ್​​’ ಚಿತ್ರಕ್ಕೆ ಮುಳುವಾದ ವಿವಾದ; ಉತ್ತರಿಸಲು ಸೆನ್ಸಾರ್ ಮಂಡಳಿಗೆ ಕೋರ್ಟ್​ ಆದೇಶ

ಶನಿವಾರ (ಜನವರಿ 14) ಅಲಹಾಬಾದ್ ಹೈಕೋರ್ಟ್​​ನ ಲಖನೌ ಪೀಠವು ಸೆನ್ಸಾರ್ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ. ಸಲ್ಲಿಕೆ ಆದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಉತ್ತರಿಸುವಂತೆ ಕೋರ್ಟ್​ ಸೂಚನೆ ನೀಡಿದೆ.

‘ಆದಿಪುರುಷ್​​’ ಚಿತ್ರಕ್ಕೆ ಮುಳುವಾದ ವಿವಾದ; ಉತ್ತರಿಸಲು ಸೆನ್ಸಾರ್ ಮಂಡಳಿಗೆ ಕೋರ್ಟ್​ ಆದೇಶ
ಆದಿಪುರುಷ್ ಚಿತ್ರದಲ್ಲಿ ಪ್ರಭಾಸ್
TV9 Web
| Edited By: |

Updated on: Jan 14, 2023 | 2:48 PM

Share

ಪ್ರಭಾಸ್ (Prabhas) ನಟನೆಯ ‘ಆದಿಪುರುಷ್​’ ಚಿತ್ರಕ್ಕೆ ಒಂದಾದ ಮೇಲೆ ಒಂದರಂತೆ ವಿವಾದಗಳು ಸುತ್ತಿಕೊಳ್ಳುತ್ತಿವೆ. ವಿವಾದಗಳಿಂದ ಚಿತ್ರತಂಡ ದೂರ ಉಳಿಯಬೇಕು ಎಂದುಕೊಂಡರೂ ಅದು ಸಾಧ್ಯವಾಗುತ್ತಿಲ್ಲ. ಸಿನಿಮಾ ಬಗ್ಗೆ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಚಿತ್ರದ ಟೀಸರ್ ಈ ನಿರೀಕ್ಷೆಯನ್ನು ನಾಶ ಮಾಡಿತ್ತು. ಜನರು ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದರು. ಚಿತ್ರದಲ್ಲಿ ರಾವಣನ ಪಾತ್ರ ಮಾಡಿದ ಸೈಫ್ ಅಲಿ ಖಾನ್​ (Saif Ali Khan) ಖಿಲ್ಜಿಯ ರೀತಿ ಕಾಣುತ್ತಾನೆ ಎಂಬ ಆರೋಪಗಳು ಬಂದವು. ಈಗ ಸಿನಿಮಾಗೆ ಮತ್ತೊಂದು ತೊಂದರೆ ಆಗುವ ಸೂಚನೆ ಸಿಕ್ಕಿದೆ.

ವಿಎಫ್​ಎಕ್ಸ್ ವಿಚಾರದಲ್ಲಿ ‘ಆದಿಪುರುಷ್​’ ಚಿತ್ರವನ್ನು ಟೀಕಿಸಲಾಗಿದೆ. ರಾವಣನ ಪಾತ್ರ ಸರಿ ಇಲ್ಲ ಎಂದು ದೂರಲಾಗಿದೆ. ಅಷ್ಟೇ ಅಲ್ಲ, ಸಿನಿಮಾದಲ್ಲಿ ವಾನರರ ಜತೆ ಬೇರೆ ಪ್ರಾಣಿಗಳೂ ಸೇರಿಕೊಂಡಿವೆ ಎಂದು ಟೀಕೆ ಮಾಡಲಾಗಿದೆ. ಇದರ ಜತೆಗೆ ತಂಡ ಕಾನೂನು ಸಮರ ಎದುರಿಸುತ್ತಿದೆ. ಈಗ ಸೆನ್ಸಾರ್​ ಮಂಡಳಿಗೆ ಕೋರ್ಟ್​ನಿಂದ ನೋಟಿಸ್ ಹೋಗಿದೆ.

ಶನಿವಾರ (ಜನವರಿ 14) ಅಲಹಾಬಾದ್ ಹೈಕೋರ್ಟ್​​ನ ಲಖನೌ ಪೀಠವು ಸೆನ್ಸಾರ್ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ. ಸಲ್ಲಿಕೆ ಆದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಉತ್ತರಿಸುವಂತೆ ಕೋರ್ಟ್​ ಸೂಚನೆ ನೀಡಿದೆ. ಮುಂದಿನ ಅರ್ಜಿ ವಿಚಾರಣೆ ಫೆಬ್ರವರಿ 21ಕ್ಕೆ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ
Image
‘ಹನುಮಾನ್’ ಚಿತ್ರದ ಟೀಸರ್​ನಲ್ಲಿ ಬರುವ ಗ್ರಾಫಿಕ್ಸ್ ನೋಡಿ ಪ್ರಭಾಸ್​ಗೆ ಚುಚ್ಚಿದ ಸಿನಿಪ್ರಿಯರು
Image
ಟ್ರೋಲ್​ಗಳ ಮಧ್ಯೆ ನಿರ್ದೇಶಕ ಓಂ ರಾವತ್ ಪರ ನಿಂತ ‘ಆದಿಪುರುಷ್’ ನಟಿ ಕೃತಿ ಸನೋನ್
Image
ಟ್ರೋಲ್ ಮಧ್ಯೆಯೂ ಓಂ​ ರಾವತ್​ಗೆ 4 ಕೋಟಿ ರೂ. ಕಾರು ಕೊಟ್ಟ ‘ಆದಿಪುರುಷ್’ ನಿರ್ಮಾಪಕ ಭೂಷಣ್​ ಕುಮಾರ್​?

ಹಿಂದೂ ದೇವರಿಗೆ ಅವಮಾನ ಆಗಿದ್ದು, ಸಿನಿಮಾ ಮೇಲೆ ಬ್ಯಾನ್ ಹೇರಬೇಕು ಎಂದು ಈ ಮೊದಲು ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಆಗಿತ್ತು. ಎಲ್ಲವೂ ಅಂದುಕೊಂಡಂತೆ ನಡೆದರೆ ಜನವರಿ12ರಂದು ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ವಿಎಫ್​ಎಕ್ಸ್ ಕೆಲಸಗಳು ಪೂರ್ಣಗೊಂಡಿಲ್ಲ ಎನ್ನುವ ಕಾರಣ ನೀಡಿ ಚಿತ್ರದ ರಿಲೀಸ್ ದಿನಾಂಕವನ್ನು ತಂಡ ಮುಂದೂಡಿಕೊಂಡಿದೆ.

ಅರ್ಜಿಯಲ್ಲೇನಿದೆ?

ಕುಲ್ದೀಪ್ ತಿವಾರಿ ಎಂಬುವವರು ಈ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ. ‘ಸೆನ್ಸಾರ್ ಬೋರ್ಡ್​​ನಿಂದ ಒಪ್ಪಿಗೆ ಪಡೆಯದೇ ಆದಿಪುರುಷ್ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಮೂಲಕ ನಿಯಮ ಉಲ್ಲಂಘನೆ ಆಗಿದೆ. ಸೀತೆಯ ಪಾತ್ರಕ್ಕೆ ಬೇರೆ ರೀತಿಯ ಉಡುಗೆ ತೊಡಿಸಲಾಗಿದೆ. ಜನರ ನಂಬಿಕೆಗೆ ವಿರುದ್ಧವಾಗಿ ದೇವರನ್ನು ತೋರಿಸಲಾಗಿದೆ. ರಾವಣನ ಪಾತ್ರ ಕೂಡ ಸರಿಯಾಗಿ ಮೂಡಿ ಬಂದಿಲ್ಲ’ ಎಂದು ಕುಲ್ದೀಪ್ ಆರೋಪಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!