AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆದಿಪುರುಷ್​​’ ಚಿತ್ರಕ್ಕೆ ಮುಳುವಾದ ವಿವಾದ; ಉತ್ತರಿಸಲು ಸೆನ್ಸಾರ್ ಮಂಡಳಿಗೆ ಕೋರ್ಟ್​ ಆದೇಶ

ಶನಿವಾರ (ಜನವರಿ 14) ಅಲಹಾಬಾದ್ ಹೈಕೋರ್ಟ್​​ನ ಲಖನೌ ಪೀಠವು ಸೆನ್ಸಾರ್ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ. ಸಲ್ಲಿಕೆ ಆದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಉತ್ತರಿಸುವಂತೆ ಕೋರ್ಟ್​ ಸೂಚನೆ ನೀಡಿದೆ.

‘ಆದಿಪುರುಷ್​​’ ಚಿತ್ರಕ್ಕೆ ಮುಳುವಾದ ವಿವಾದ; ಉತ್ತರಿಸಲು ಸೆನ್ಸಾರ್ ಮಂಡಳಿಗೆ ಕೋರ್ಟ್​ ಆದೇಶ
ಆದಿಪುರುಷ್ ಚಿತ್ರದಲ್ಲಿ ಪ್ರಭಾಸ್
TV9 Web
| Edited By: |

Updated on: Jan 14, 2023 | 2:48 PM

Share

ಪ್ರಭಾಸ್ (Prabhas) ನಟನೆಯ ‘ಆದಿಪುರುಷ್​’ ಚಿತ್ರಕ್ಕೆ ಒಂದಾದ ಮೇಲೆ ಒಂದರಂತೆ ವಿವಾದಗಳು ಸುತ್ತಿಕೊಳ್ಳುತ್ತಿವೆ. ವಿವಾದಗಳಿಂದ ಚಿತ್ರತಂಡ ದೂರ ಉಳಿಯಬೇಕು ಎಂದುಕೊಂಡರೂ ಅದು ಸಾಧ್ಯವಾಗುತ್ತಿಲ್ಲ. ಸಿನಿಮಾ ಬಗ್ಗೆ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಚಿತ್ರದ ಟೀಸರ್ ಈ ನಿರೀಕ್ಷೆಯನ್ನು ನಾಶ ಮಾಡಿತ್ತು. ಜನರು ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದರು. ಚಿತ್ರದಲ್ಲಿ ರಾವಣನ ಪಾತ್ರ ಮಾಡಿದ ಸೈಫ್ ಅಲಿ ಖಾನ್​ (Saif Ali Khan) ಖಿಲ್ಜಿಯ ರೀತಿ ಕಾಣುತ್ತಾನೆ ಎಂಬ ಆರೋಪಗಳು ಬಂದವು. ಈಗ ಸಿನಿಮಾಗೆ ಮತ್ತೊಂದು ತೊಂದರೆ ಆಗುವ ಸೂಚನೆ ಸಿಕ್ಕಿದೆ.

ವಿಎಫ್​ಎಕ್ಸ್ ವಿಚಾರದಲ್ಲಿ ‘ಆದಿಪುರುಷ್​’ ಚಿತ್ರವನ್ನು ಟೀಕಿಸಲಾಗಿದೆ. ರಾವಣನ ಪಾತ್ರ ಸರಿ ಇಲ್ಲ ಎಂದು ದೂರಲಾಗಿದೆ. ಅಷ್ಟೇ ಅಲ್ಲ, ಸಿನಿಮಾದಲ್ಲಿ ವಾನರರ ಜತೆ ಬೇರೆ ಪ್ರಾಣಿಗಳೂ ಸೇರಿಕೊಂಡಿವೆ ಎಂದು ಟೀಕೆ ಮಾಡಲಾಗಿದೆ. ಇದರ ಜತೆಗೆ ತಂಡ ಕಾನೂನು ಸಮರ ಎದುರಿಸುತ್ತಿದೆ. ಈಗ ಸೆನ್ಸಾರ್​ ಮಂಡಳಿಗೆ ಕೋರ್ಟ್​ನಿಂದ ನೋಟಿಸ್ ಹೋಗಿದೆ.

ಶನಿವಾರ (ಜನವರಿ 14) ಅಲಹಾಬಾದ್ ಹೈಕೋರ್ಟ್​​ನ ಲಖನೌ ಪೀಠವು ಸೆನ್ಸಾರ್ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ. ಸಲ್ಲಿಕೆ ಆದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಉತ್ತರಿಸುವಂತೆ ಕೋರ್ಟ್​ ಸೂಚನೆ ನೀಡಿದೆ. ಮುಂದಿನ ಅರ್ಜಿ ವಿಚಾರಣೆ ಫೆಬ್ರವರಿ 21ಕ್ಕೆ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ
Image
‘ಹನುಮಾನ್’ ಚಿತ್ರದ ಟೀಸರ್​ನಲ್ಲಿ ಬರುವ ಗ್ರಾಫಿಕ್ಸ್ ನೋಡಿ ಪ್ರಭಾಸ್​ಗೆ ಚುಚ್ಚಿದ ಸಿನಿಪ್ರಿಯರು
Image
ಟ್ರೋಲ್​ಗಳ ಮಧ್ಯೆ ನಿರ್ದೇಶಕ ಓಂ ರಾವತ್ ಪರ ನಿಂತ ‘ಆದಿಪುರುಷ್’ ನಟಿ ಕೃತಿ ಸನೋನ್
Image
ಟ್ರೋಲ್ ಮಧ್ಯೆಯೂ ಓಂ​ ರಾವತ್​ಗೆ 4 ಕೋಟಿ ರೂ. ಕಾರು ಕೊಟ್ಟ ‘ಆದಿಪುರುಷ್’ ನಿರ್ಮಾಪಕ ಭೂಷಣ್​ ಕುಮಾರ್​?

ಹಿಂದೂ ದೇವರಿಗೆ ಅವಮಾನ ಆಗಿದ್ದು, ಸಿನಿಮಾ ಮೇಲೆ ಬ್ಯಾನ್ ಹೇರಬೇಕು ಎಂದು ಈ ಮೊದಲು ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಆಗಿತ್ತು. ಎಲ್ಲವೂ ಅಂದುಕೊಂಡಂತೆ ನಡೆದರೆ ಜನವರಿ12ರಂದು ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ವಿಎಫ್​ಎಕ್ಸ್ ಕೆಲಸಗಳು ಪೂರ್ಣಗೊಂಡಿಲ್ಲ ಎನ್ನುವ ಕಾರಣ ನೀಡಿ ಚಿತ್ರದ ರಿಲೀಸ್ ದಿನಾಂಕವನ್ನು ತಂಡ ಮುಂದೂಡಿಕೊಂಡಿದೆ.

ಅರ್ಜಿಯಲ್ಲೇನಿದೆ?

ಕುಲ್ದೀಪ್ ತಿವಾರಿ ಎಂಬುವವರು ಈ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ. ‘ಸೆನ್ಸಾರ್ ಬೋರ್ಡ್​​ನಿಂದ ಒಪ್ಪಿಗೆ ಪಡೆಯದೇ ಆದಿಪುರುಷ್ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಮೂಲಕ ನಿಯಮ ಉಲ್ಲಂಘನೆ ಆಗಿದೆ. ಸೀತೆಯ ಪಾತ್ರಕ್ಕೆ ಬೇರೆ ರೀತಿಯ ಉಡುಗೆ ತೊಡಿಸಲಾಗಿದೆ. ಜನರ ನಂಬಿಕೆಗೆ ವಿರುದ್ಧವಾಗಿ ದೇವರನ್ನು ತೋರಿಸಲಾಗಿದೆ. ರಾವಣನ ಪಾತ್ರ ಕೂಡ ಸರಿಯಾಗಿ ಮೂಡಿ ಬಂದಿಲ್ಲ’ ಎಂದು ಕುಲ್ದೀಪ್ ಆರೋಪಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!