AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

150 ರೂಪಾಯಿ ಟಿಕೆಟ್ ದರ ನಿಗದಿ ಮಾಡಿದರೂ ಜನ ಬರಲಿಲ್ಲ; ಉಲ್ಟಾ ಆಯ್ತು ‘ಆದಿಪುರುಷ್’ ಪ್ಲಾನ್

ತಂಡದವರು 150 ರೂಪಾಯಿ ಟಿಕೆಟ್ ಆಫರ್ ಕೊಟ್ಟರೂ ಜನರು ಸಿನಿಮಾ ನೋಡುತ್ತಿಲ್ಲ. ಈ ಬೆಳವಣಿಗೆಯಿಂದ ಪ್ರಭಾಸ್ ಸಿನಿಮಾ ಅತೀ ಶೀಘ್ರದಲ್ಲೇ ಒಟಿಟಿಗೆ ಕಾಲಿಡಲಿದೆ ಎನ್ನಲಾಗುತ್ತಿದೆ.

150 ರೂಪಾಯಿ ಟಿಕೆಟ್ ದರ ನಿಗದಿ ಮಾಡಿದರೂ ಜನ ಬರಲಿಲ್ಲ; ಉಲ್ಟಾ ಆಯ್ತು ‘ಆದಿಪುರುಷ್’ ಪ್ಲಾನ್
ಆದಿಪುರುಷ್
ರಾಜೇಶ್ ದುಗ್ಗುಮನೆ
|

Updated on:Jun 23, 2023 | 2:51 PM

Share

‘ಆದಿಪುರುಷ್’ ಚಿತ್ರ (Adipurush Movie) ಮೊದಲ ದಿನ ಅಬ್ಬರಿಸಿದ ಪರಿ ನೋಡಿ ಅನೇಕರು ಅಚ್ಚರಿಗೊಂಡರು. ಈ ಚಿತ್ರ ವೀಕೆಂಡ್​ನಲ್ಲಿ ಕಮಾಯಿ ಮಾಡಿದ್ದಷ್ಟೇ, ವಾರದ ದಿನಗಳಲ್ಲಿ ಸಿನಿಮಾ ನೆಲಕಚ್ಚಿತು. ಮೊದಲ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ 140 ಕೋಟಿ ರೂಪಾಯಿ ಬಾಚಿಕೊಂಡಿದ್ದ ಈ ಚಿತ್ರ ಏಳನೇ ದಿನಕ್ಕೆ ಕೇವಲ 5.5 ಕೋಟಿ ರೂಪಾಯಿ ಕಮಾಯಿ ಮಾಡಿ ತೃಪ್ತಿಪಟ್ಟುಕೊಂಡಿದೆ. ತಂಡದವರು 150 ರೂಪಾಯಿ ಟಿಕೆಟ್ ಆಫರ್ ಕೊಟ್ಟರೂ ಜನರು ಸಿನಿಮಾ ನೋಡುತ್ತಿಲ್ಲ. ಈ ಬೆಳವಣಿಗೆಯಿಂದ ಪ್ರಭಾಸ್ (Prabhas) ಸಿನಿಮಾ ಅತೀ ಶೀಘ್ರದಲ್ಲೇ ಒಟಿಟಿಗೆ ಕಾಲಿಡಲಿದೆ ಎಂಬುದು ಬಹುತೇಕ ಖಚಿತವಾಗಿದೆ.

ಮೊದಲು ಸಿನಿಮಾ ರಿಲೀಸ್ ಆಗಿ ಹಲವು ತಿಂಗಳ ಬಳಿಕ ಟಿವಿಯಲ್ಲಿ ಪ್ರಸಾರ ಕಾಣುತ್ತಿತ್ತು. ಅದರಲ್ಲೂ ಸೂಪರ್ ಹಿಟ್ ಚಿತ್ರಗಳು ಟಿವಿಯಲ್ಲಿ ಪ್ರಸಾರ ಕಾಣಬೇಕು ಎಂದರೆ ವಿಶೇಷ ದಿನ ಬರಬೇಕು. ಈ ಕಾರಣಕ್ಕೆ ಅನೇಕರು ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡಲು ಬಯಸುತ್ತಿದ್ದರು. ಆದರೆ, ಈಗ ಕಾಲ ಬದಲಾಗಿದೆ. ಜನರು ಮೊದಲು ವಿಮರ್ಶೆ ನೋಡುತ್ತಾರೆ. ಚಿತ್ರ ಚೆನ್ನಾಗಿದ್ದರೆ ಮಾತ್ರ ಥಿಯೇಟರ್​ಗೆ ಹೋಗುತ್ತಾರೆ. ವಿಮರ್ಶಕರು ಸ್ವಲ್ಪ ನೆಗೆಟಿವ್ ವಿಮರ್ಶೆ ನೀಡಿದರೂ ಸಿನಿಮಾನ ಒಟಿಟಿಯಲ್ಲಿ ನೋಡೋಣ ಎಂದು ಸುಮ್ಮನಾಗುತ್ತಾರೆ. ಈಗ ‘ಆದಿಪುರುಷ್’ ಚಿತ್ರವನ್ನು ಒಟಿಟಿಯಲ್ಲಿ ನೋಡೋಣ ಎಂದು ಅನೇಕರು ಸುಮ್ಮನಾಗಿದ್ದಾರೆ. ಹೀಗಾಗಿ, ಚಿತ್ರದ ಗಳಿಕೆಯಲ್ಲಿ ಇಳಿಕೆ ಆಗಿದೆ.

ಇದನ್ನೂ ಓದಿ: ‘ಆದಿಪುರುಷ್’ ಸಿನಿಮಾ ನೋಡಲು 5,500 ಕಿಮೀ ಪ್ರಯಾಣಿಸಿದ ಪ್ರಭಾಸ್ ಮಹಿಳಾ ಅಭಿಮಾನಿ

‘ಆದಿಪುರುಷ್’ ಸಿನಿಮಾ ವಿಶ್ವಮಟ್ಟದಲ್ಲಿ 400+ ಕೋಟಿ ರೂಪಾಯಿ ಗಳಿಸಿದೆ. ಭಾರತದಲ್ಲಿ ಎಲ್ಲಾ ಭಾಷೆಗಳಿಂದ ಈ ಚಿತ್ರ ಗಳಿಕೆ ಮಾಡಿದ್ದು 250+ ಕೋಟಿ ರೂಪಾಯಿ. ಗುರುವಾರ (ಜೂನ್ 22) ಈ ಚಿತ್ರ 5.5 ಕೋಟಿ ರೂಪಾಯಿಗೆ ತೃಪ್ತಿಪಟ್ಟುಕೊಂಡಿದೆ. ಈ ವೀಕೆಂಡ್​ನಲ್ಲಿ ಸಿನಿಮಾ ಯಾವ ರೀತಿಯಲ್ಲಿ ಕಮಾಯಿ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಗುರುವಾರ ಮಲ್ಟಿಪ್ಲೆಕ್ಸ್​​ಗಳಲ್ಲಿ 150 ರೂಪಾಯಿಗೆ ಟಿಕೆಟ್ ಬೆಲೆ ಇಳಿಸಲಾಗಿತ್ತು. ಐನಾಕ್ಸ್, ಪಿವಿಆರ್ ಮೊದಲಾದ ಕಡೆಗಳಲ್ಲಿ ಈ ಆಫರ್ ಇತ್ತು. ಇಷ್ಟೇ ಅಲ್ಲದೆ ಸಿನಿಮಾದ ವಿವಾದಾತ್ಮಕ ಡೈಲಾಗ್​ಗಳನ್ನು ಬದಲಿಸಲಾಗಿದೆ. ಆದಾಗ್ಯೂ ಜನರು ಸಿನಿಮಾ ನೋಡಲು ಬರುತ್ತಿಲ್ಲ. ಇದು ಚಿತ್ರತಂಡಕ್ಕೆ ಹಿನ್ನಡೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:18 am, Fri, 23 June 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ