AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ದಿನಕ್ಕೆ 300 ಕೋಟಿ ರೂಪಾಯಿ ಬಾಚಿದ ‘ಆದಿಪುರುಷ್’; ಇನ್ನಿದೆ ಚಾಲೆಂಜ್

Adipurush Movie Collection: ‘ಆದಿಪುರುಷ್’ ಚಿತ್ರದಲ್ಲಿ ಬಳಕೆ ಆದ ಭಾಷೆಗಳು ಟೀಕೆಗೆ ಗುರಿಯಾಗಿವೆ. ಪಾತ್ರಗಳ ಬಗ್ಗೆಯೂ ಅಪಸ್ವರ ಕೇಳಿ ಬಂದಿದೆ. ಈ ಮಧ್ಯೆಯೂ ‘ಆದಿಪುರುಷ್’ ಒಳ್ಳೆಯ ಕಮಾಯಿ ಮಾಡಿದೆ.

ಮೂರೇ ದಿನಕ್ಕೆ 300 ಕೋಟಿ ರೂಪಾಯಿ ಬಾಚಿದ ‘ಆದಿಪುರುಷ್’; ಇನ್ನಿದೆ ಚಾಲೆಂಜ್
ಆದಿಪುರುಷ್
ರಾಜೇಶ್ ದುಗ್ಗುಮನೆ
|

Updated on: Jun 19, 2023 | 11:28 AM

Share

‘ಆದಿಪುರುಷ್’ ಸಿನಿಮಾಗೆ (Adipurush Cinema) ಎಲ್ಲ ಕಡೆಗಳಿಂದಲೂ ಟೀಕೆ ವ್ಯಕ್ತವಾಗುತ್ತಿದೆ. ಆದಾಗ್ಯೂ ಚಿತ್ರಕ್ಕೆ ಈ ಮೊದಲು ಸೃಷ್ಟಿ ಆಗಿದ್ದ ಹೈಪ್​ನಿಂದ ಅನೇಕರು ಸಿನಿಮಾ ವೀಕ್ಷಿಸುತ್ತಿದ್ದಾರೆ. ಈ ಚಿತ್ರ ಮೊದಲ ವೀಕೆಂಡ್​ಗೆ ಬರೋಬ್ಬರಿ 300 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಾರದ ದಿನಗಳಲ್ಲಿ ಸಿನಿಮಾ ಯಾವ ರೀತಿಯಲ್ಲಿ ಕಮಾಯಿ ಮಾಡಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಒಂದೊಮ್ಮೆ ಇಲ್ಲಿ ಗಳಿಕೆ ಕಡಿಮೆ ಆದರೆ, ಚಿತ್ರಕ್ಕೆ ಸಂಕಷ್ಟ ಎದುರಾಗಬಹುದು.

ಓಂ ರಾವತ್ ನಿರ್ದೇಶನದ ‘ಆದಿಪುರುಷ್’ ಚಿತ್ರದಲ್ಲಿ ಪ್ರಭಾಸ್ ರಾಮನ ಪಾತ್ರ ಮಾಡಿದರೆ, ಕೃತಿ ಸನೋನ್ ಸೀತೆಯ ಪಾತ್ರ ಮಾಡಿದ್ದಾರೆ. ಈ ಚಿತ್ರ ರಾಮಾಯಣ ಆಧರಿಸಿ ಇರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಿತ್ತು. ಆದರೆ ಮನಬಂದಂತೆ ಸಿನಿಮಾ ಮಾಡಿರುವುದರಿಂದ ಟೀಕೆ ಜೋರಾಗಿದೆ. ಈ ಚಿತ್ರದಲ್ಲಿ ಬಳಕೆ ಆದ ಭಾಷೆಗಳು ಟೀಕೆಗೆ ಗುರಿಯಾಗಿವೆ. ಪಾತ್ರಗಳ ಬಗ್ಗೆಯೂ ಅಪಸ್ವರ ಕೇಳಿ ಬಂದಿದೆ. ಈ ಮಧ್ಯೆಯೂ ‘ಆದಿಪುರುಷ್’ ಒಳ್ಳೆಯ ಕಮಾಯಿ ಮಾಡಿದೆ.

ಮೊದಲ ದಿನ ‘ಆದಿಪುರುಷ್’ ಸಿನಿಮಾಗೆ ಮುಂಜಾನೆ 5 ಗಂಟೆಯಿಂದಲೇ ಶೋಗಳು ಆರಂಭ ಆದವು. ಈ ಕಾರಣಕ್ಕೆ ದೊಡ್ಡ ಮಟ್ಟದ ಹಣ ಹರಿದು ಬಂತು. ವಿಶ್ವಾದ್ಯಂತ ಈ ಚಿತ್ರ ಮೊದಲ ದಿನ 140 ಕೋಟಿ ರೂಪಾಯಿ ಗಳಿಸಿತು. ಎರಡನೇ ದಿನ ಈ ಚಿತ್ರ 100 ಕೋಟಿ ರೂಪಾಯಿ ಬಾಚಿದೆ. ಮೂರನೇ ದಿನ ಈ ಚಿತ್ರದ ಗಳಿಕೆ 65 ಕೋಟಿ ರೂಪಾಯಿ ಆಗಿದೆ. ಈ ಮೂಲಕ ಸಿನಿಮಾದ ಗಳಿಕೆ 300 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: Adipurush: ‘ಆದಿಪುರುಷ್​’ ಪ್ರದರ್ಶನಕ್ಕೂ ಮುನ್ನ ಬರುವ ಸ್ಪಷ್ಟೀಕರಣದಲ್ಲಿ ಏನಿದೆ? ಚಿತ್ರತಂಡದ ಅಸಲಿ ವಾದ ಇಲ್ಲಿದೆ ನೋಡಿ..

ವಾರಂತ್ಯಕ್ಕೆ ಎಲ್ಲರೂ ಸಿನಿಮಾ ವೀಕ್ಷಿಸುತ್ತಾರೆ. ಆದರೆ, ವಾರದ ದಿನಗಳಲ್ಲಿ ಸಿನಿಮಾ ಎಷ್ಟು ಗಳಿಕೆ ಮಾಡಲಿದೆ ಎಂಬುದು ತುಂಬಾನೇ ಮುಖ್ಯವಾಗುತ್ತದೆ. ಹೀಗಾಗಿ, ‘ಆದಿಪುರುಷ್’ ಚಿತ್ರ ಇಂದು (ಜೂನ್ 19) ಎಷ್ಟು ಕಲೆಕ್ಷನ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಬೆಂಗಳೂರು ಸೇರಿ ಬಹುತೇಕ ಕಡೆಗಳಲ್ಲಿ ಈ ಚಿತ್ರಕ್ಕೆ ಫಾಸ್ಟ್ ಫಿಲ್ಲಿಂಗ್ ತೋರಿಸುತ್ತಿಲ್ಲ. ಬಿಗ್ ಬಜೆಟ್ ಸಿನಿಮಾ ಆಗಿರುವುದರಿಂದ ದೊಡ್ಡ ಗಳಿಕೆ ಮಾಡುವುದು ಅನಿವಾರ್ಯ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ