Om Raut: ಮತ್ತೆ ಟ್ರೋಲ್​ ಆದ ‘ಆದಿಪುರುಷ್​’ ನಿರ್ದೇಶಕ ಓಂ ರಾವತ್​; ಈ ಬಾರಿ ಫ್ಯಾನ್ಸ್​ ಕೋಪಕ್ಕೆ ಕಾರಣ ಏನು?

Adipurush Movie | Prabhas: ಕಳಪೆ ಗ್ರಾಫಿಕ್ಸ್​ ಕಾರಣಕ್ಕೆ ‘ಆದಿಪುರುಷ್​’ ನಿರ್ದೇಶಕ ಓಂ ರಾವತ್​ ಅವರನ್ನು ಈ ಹಿಂದೆ ಟ್ರೋಲ್​ ಮಾಡಲಾಗಿತ್ತು. ಆದರೆ ಈಗ ಮತ್ತೊಂದು ಕಾರಣಕ್ಕೆ ಪ್ರಭಾಸ್​ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದಾರೆ.

Om Raut: ಮತ್ತೆ ಟ್ರೋಲ್​ ಆದ ‘ಆದಿಪುರುಷ್​’ ನಿರ್ದೇಶಕ ಓಂ ರಾವತ್​; ಈ ಬಾರಿ ಫ್ಯಾನ್ಸ್​ ಕೋಪಕ್ಕೆ ಕಾರಣ ಏನು?
ಓಂ ರಾವತ್, ಪ್ರಭಾಸ್

Updated on: Mar 24, 2023 | 6:07 PM

ನಟ ಪ್ರಭಾಸ್​ (Prabhas) ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಇದ್ದಾರೆ. ಅವರನ್ನು ಬಿಗ್​ ಸ್ಕ್ರೀನ್​ನಲ್ಲಿ ನೋಡಲು ಫ್ಯಾನ್ಸ್​ ಹಂಬಲಿಸುತ್ತಿದ್ದಾರೆ. ಅವರು ನಟಿಸಿರುವ ‘ಆದಿಪುರುಷ್​’ ಸಿನಿಮಾ (Adipurush Movie) ಜೂನ್​ 16ರಂದು ಬಿಡುಗಡೆ ಆಗಲಿದೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆದರೆ ನಿರ್ದೇಶಕ ಓಂ ರಾವತ್​ ಅವರು ಸರಿಯಾಗಿ ಪ್ರಚಾರ ಮಾಡುತ್ತಿಲ್ಲ ಎಂದು ಪ್ರಭಾಸ್​ ಫ್ಯಾನ್ಸ್ ಗರಂ ಆಗಿದ್ದಾರೆ. ಸ್ಟಾರ್​ ನಟರ ಸಿನಿಮಾಗೆ ಎರಡೂವರೆ ತಿಂಗಳು ಮಾತ್ರ ಬಾಕಿ ಇದೆ ಎಂದಾಗ ಭರ್ಜರಿಯಾಗಿ ಪ್ರಚಾರ ಕಾರ್ಯ ಆರಂಭ ಆಗುತ್ತದೆ. ಆದರೆ ಓಂ ರಾವತ್​ (Om Raut) ಸುಮ್ಮನೆ ಕುಳಿತಿರುವುದಕ್ಕೆ ಅವರನ್ನು ಪ್ರಭಾಸ್​ ಫ್ಯಾನ್ಸ್​ ಟ್ರೋಲ್​ ಮಾಡುತ್ತಿದ್ದಾರೆ.

‘ಆದಿಪುರುಷ್​’ ಸಿನಿಮಾದ ರಿಲೀಸ್​ ದಿನಾಂಕ ಮುಂದೂಡಿಕೆ ಆಗಬಹುದೇ ಎಂದು ಅನೇಕರು ಊಹಿಸಿದ್ದರು. ಆದರೆ ಹೊಸ ಪೋಸ್ಟರ್​ ಹಂಚಿಕೊಳ್ಳುವ ಮೂಲಕ ರಿಲೀಸ್​ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನಿರ್ಮಾಪಕರು ತಿಳಿಸಿದ್ದರು. ಎಲ್ಲವೂ ಅಂದುಕೊಂಡಂತೆ ನಡೆದರೆ ಜೂನ್​ 16ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಆದಿಪುರುಷ್​’ ಸಿನಿಮಾ ರಿಲೀಸ್​ ಆಗಲಿದೆ. ಆದರೆ ಪ್ರಚಾರದ ವಿಚಾರದಲ್ಲಿ ಈ ಚಿತ್ರತಂಡ ಡಲ್​ ಹೊಡೆಯುತ್ತಿದೆ.

ಇದನ್ನೂ ಓದಿ: Prabhas: 1 ರೂಪಾಯಿ ಸಂಭಾವನೆ ಕೂಡ ಬೇಡ ಎಂಬ ನಿರ್ಧಾರಕ್ಕೆ ಬಂದ ಪ್ರಭಾಸ್​; ಏನಿದು ಹೊಸ ತಂತ್ರ?

ಇದನ್ನೂ ಓದಿ
Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ
Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​

ರಾಮಾಯಣದ ಕಥೆ ಆಧರಿಸಿ ‘ಆದಿಪುರುಷ್​’ ಚಿತ್ರ ಮೂಡಿಬರುತ್ತಿದೆ. ನಿರ್ದೇಶಕ ಓಂ ರಾವತ್​ ಅವರು ಟ್ರೋಲ್​ ಆಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಸಿನಿಮಾದ ಟೀಸರ್​ ಬಿಡುಗಡೆ ಮಾಡಲಾಗಿತ್ತು. ಅದರಲ್ಲಿನ ಕಳಪೆ ಗ್ರಾಫಿಕ್ಸ್​ ನೋಡಿ ಸಿನಿಪ್ರಿಯರಿಗೆ ಬೇಸರವಾಗಿತ್ತು. ಅಲ್ಲದೇ, ವಾನರ ಸೇನೆಯಲ್ಲಿ ವಿಚಿತ್ರ ಪ್ರಾಣಿಗಳನ್ನು ನೋಡಿ ಎಲ್ಲರಿಗೂ ಅಚ್ಚರಿ ಆಯಿತು. ರಾವಣನ ವೇಷ ಕೂಡ ಖಿಲ್ಜಿ ರೂಪದಲ್ಲಿತ್ತು. ಈ ಎಲ್ಲ ಕಾರಣಗಳಿಂದಾಗಿ ಓಂ ರಾವತ್​ ಅವರನ್ನು ಟ್ರೋಲ್​ ಮಾಡಲಾಗಿತ್ತು.

ಇದನ್ನೂ ಓದಿ: Prabhas Engagement: ಪ್ರಭಾಸ್​ ಜತೆ ಕೃತಿ ಸನೋನ್​ ನಿಶ್ಚಿತಾರ್ಥ ಆಗಲಿದೆ ಅಂತ ಬ್ರೇಕಿಂಗ್ ನ್ಯೂಸ್​ ನೀಡಿದ ಉಮೈರ್​ ಸಂಧು

ಟೀಸರ್​ನಿಂದ ನೆಗೆಟಿವ್​ ಪ್ರತಿಕ್ರಿಯೆ ಪಡೆದುಕೊಂಡಿರುವ ‘ಆದಿಪುರುಷ್​’ ತಂಡವು ಸಾಕಷ್ಟು ದೃಶ್ಯಗಳನ್ನು ಬದಲಾಯಿಸಿಕೊಂಡಿದೆ ಎಂದು ಸುದ್ದಿ ಆಗಿದೆ. ಈಗ ಹೊಸ ಟೀಸರ್​, ಟ್ರೇಲರ್​, ಪೋಸ್ಟರ್​ಗಳ ಮೂಲಕ ಅಭಿಮಾನಿಗಳನ್ನು ಸೆಳೆಯುವ ಕೆಲಸ ಆಗಬೇಕಿದೆ. ಆದರೆ ನಿರ್ದೇಶಕ ಓಂ ರಾವತ್​ ಅವರು ಪ್ರಚಾರದ ಬಗ್ಗೆ ಕಿಂಚಿತ್ತೂ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ ಎಂದು ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಟ್ರೋಲ್​ ಮಾಡಲಾಗುತ್ತಿದೆ. ಈ ಬಗ್ಗೆ ಪ್ರಭಾಸ್​ ಮೌನ ಮುರಿಯುವ ಸಾಧ್ಯತೆ ಇದೆ.

‘ಆದಿಪುರುಷ್​’ ಚಿತ್ರದಲ್ಲಿ ರಾಮನಾಗಿ ಪ್ರಭಾಸ್​ ನಟಿಸಿದ್ದರೆ, ಸೀತೆ ಪಾತ್ರಕ್ಕೆ ಕೃತಿ ಸನೋನ್​ ಬಣ್ಣ ಹಚ್ಚಿದ್ದಾರೆ. ರಾವಣನಾಗಿ ಸೈಫ್​ ಅಲಿ ಖಾನ್​ ಅಬ್ಬರಿಸಲಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:07 pm, Fri, 24 March 23

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us