ಟೀಕೆ ಬಂದರೇನಂತೆ? ಮೊದಲ ದಿನ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆದ ತೆಗೆದ ‘ಆದಿಪುರುಷ್’ ಸಿನಿಮಾ

Adipurush Movie First Day Collection: ಒಳ್ಳೆಯ ಓಪನಿಂಗ್ ಪಡೆಯಲೇಬೇಕಾದ ಅನಿವಾರ್ಯತೆ ಬಿಗ್ ಬಜೆಟ್ ಚಿತ್ರಗಳಿಗೆ ಇರುತ್ತದೆ. ಹಾಗಾದರೆ ಮಾತ್ರ ನಿರ್ಮಾಪಕರು ಲಾಭ ಕಾಣುತ್ತಾರೆ. ‘ಆದಿಪುರುಷ್’ ಚಿತ್ರಕ್ಕೂ ಕಲೆಕ್ಷನ್ ಮಾಡಲೇಬೇಕಾದ ಅನಿವಾರ್ಯತೆ ಇದೆ.

ಟೀಕೆ ಬಂದರೇನಂತೆ? ಮೊದಲ ದಿನ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆದ ತೆಗೆದ ‘ಆದಿಪುರುಷ್’ ಸಿನಿಮಾ
ಸೈಫ್​-ಪ್ರಭಾಸ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 17, 2023 | 10:55 AM

ಪ್ರಭಾಸ್ ಹಾಗೂ ಕೃತಿ ಸನೋನ್​ ನಟನೆಯ ‘ಆದಿಪುರುಷ್’ ಸಿನಿಮಾ (Adipurush Movie) ಬಗ್ಗೆ ಕೇಳಿ ಬಂದ ಟೀಕೆಗಳು ಒಂದೆರಡಲ್ಲ. ಈ ಚಿತ್ರಕ್ಕೆ ಸಾಕಷ್ಟು ನೆಗೆಟಿವ್ ಕಮೆಂಟ್​ಗಳು ಬಂದವು. ವಿಮರ್ಶೆಯಲ್ಲಿ ಮಿಶ್ರಪ್ರತಿಕ್ರಿಯೆ ಸಿಕ್ಕಿತು. ಈ ಚಿತ್ರ ಐಎಂಡಿಬಿಯಲ್ಲಿ ಕಡಿಮೆ ರೇಟಿಂಗ್ ಪಡೆದಿದೆ. ಆದರೆ, ಚಿತ್ರದ ಬಾಕ್ಸ್ ಆಫೀಸ್​ ಮೇಲೆ ಇದೆಲ್ಲ ಅಷ್ಟಾಗಿ ಪ್ರಭಾವ ಬೀರಲೇ ಇಲ್ಲ. ಹೌದು, ಮೊದಲ ದಿನ ‘ಆದಿಪುರುಷ್’ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದಿದೆ. ವಿಶ್ವಾದ್ಯಂತ ಈ ಸಿನಿಮಾದ ಮೊದಲ ದಿನದ ಕಲೆಕ್ಷನ್ 150 ಕೋಟಿ ರೂಪಾಯಿ ದಾಟಿದೆ ಎಂದು ವರದಿ ಆಗಿದೆ. ಈ ಮೂಲಕ ಒಳ್ಳೆಯ ಓಪನಿಂಗ್ ಪಡೆದಿದೆ.

ಒಳ್ಳೆಯ ಓಪನಿಂಗ್ ಪಡೆಯಲೇಬೇಕಾದ ಅನಿವಾರ್ಯತೆ ಬಿಗ್ ಬಜೆಟ್ ಚಿತ್ರಗಳಿಗೆ ಇರುತ್ತದೆ. ಹಾಗಾದರೆ ಮಾತ್ರ ನಿರ್ಮಾಪಕರು ಲಾಭ ಕಾಣುತ್ತಾರೆ. ಅದೇ ರೀತಿಯಲ್ಲಿ ‘ಆದಿಪುರುಷ್’ ಸಿನಿಮಾ ಮೊದಲ ದಿನ ಭರ್ಜರಿ ಕಲೆಕ್ಷನ್ ಮಾಡಿದೆ. ಜೂನ್ 16ರಂದು ರಿಲೀಸ್ ಈ ಚಿತ್ರ ಇಂದು (ಜೂನ್17) ಹಾಗೂ ನಾಳೆ (ಜೂನ್ 18) ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ.

ಹಿಂದಿ, ತೆಲುಗು, ಕನ್ನಡ ಸೇರಿ ಐದು ಭಾಷೆಗಳಲ್ಲಿ ‘ಆದಿಪುರುಷ್’ ರಿಲೀಸ್ ಆಗಿದೆ. ಭಾರತದಲ್ಲಿ ಈ ಚಿತ್ರ 110-112 ಕೋಟಿ ರೂಪಾಯಿ ಬಾಚಿಕೊಂಡಿದೆ. ಹಿಂದಿ ವರ್ಷನ್​ನ ಒಂದರಲ್ಲೇ ಈ ಚಿತ್ರದ ಗಳಿಕೆ 36-38 ಕೋಟಿ ರೂಪಾಯಿ ಆಗಿದೆ. ವಿಶ್ವಾದ್ಯಂತ ಈ ಚಿತ್ರ 150 ಕೋಟಿ ರೂಪಾಯಿ ಗಳಿಸಿದೆ. ಮುಂದಿನ ದಿನಗಳಲ್ಲಿ ಸಿನಿಮಾದ ಕಲೆಕ್ಷನ್ ಮತ್ತಷ್ಟು ಏರಿಕೆ ಆಗಬಹುದು.

ಇದನ್ನೂ ಓದಿ: ಐಎಂಡಿಬಿಯಲ್ಲಿ ಅತೀ ಕಡಿಮೆ ರೇಟಿಂಗ್ ಪಡೆದ ‘ಆದಿಪುರುಷ್’; ಬುಕ್ ಮೈ ಶೋ ರೇಟಿಂಗ್ ಎಷ್ಟು?

ಇಂಟರ್ನೆಟ್ ಮೂವೀ ಡೇಟಾಬೇಸ್​ನಲ್ಲಿ (ಐಎಂಡಿಬಿ) ‘ಆದಿಪುರುಷ್’ ಚಿತ್ರಕ್ಕೆ ಕಡಿಮೆ ರೇಟಿಂಗ್ ಸಿಕ್ಕಿದೆ. ಈ ಸಿನಿಮಾ ಸದ್ಯ 2.9 ರೇಟಿಂಗ್ ಪಡೆದುಕೊಂಡಿದೆ. ಈ ಮೂಲಕ ಸಿನಿಮಾಗೆ ಅತೀ ಕಡಿಮೆ ರೇಟಿಂಗ್ ಸಿಕ್ಕಿದೆ. ಮುಂದಿನ ದಿನಗಳಲ್ಲಿ ರೇಟಿಂಗ್ ಹೆಚ್ಚಬಹುದು ಅನ್ನೋದು ಅಭಿಮಾನಿಗಳ ನಂಬಿಕೆ. ಐಎಂಡಿಬಿಗೆ ಹೋಲಿಕೆ ಮಾಡಿದರೆ ಬುಕ್ ಮೈ ಶೋನಲ್ಲಿ ‘ಆದಿಪುರುಷ್’ ರೇಟಿಂಗ್ ಕೊಂಚ ಉತ್ತಮವಾಗಿದೆ. ಈವರೆಗೆ 81 ಸಾವಿರ ಮಂದಿ ರೇಟಿಂಗ್ ನೀಡಿದ್ದು, 10ಕ್ಕೆ 7.4 ರೇಟಿಂಗ್ ಪಡೆದಿದೆ. ಈ ಚಿತ್ರಕ್ಕೆ ಓಂ ರಾವತ್ ನಿರ್ದೇಶನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:33 am, Sat, 17 June 23

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು