‘ಕೆಜಿಎಫ್ 2’ ದಾಖಲೆ ಮುರಿಯಲಿದೆಯೇ ‘ಆದಿಪುರುಷ್’ ಸಿನಿಮಾ? ಸಾಧ್ಯವೇ ಇಲ್ಲ ಎನ್ನುತ್ತಿದೆ ಲೆಕ್ಕಾಚಾರ

ಯಶ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ಸಿನಿಮಾ ಹಿಂದಿಯಲ್ಲಿ ಮೊದಲ ದಿನ 53 ಕೋಟಿ ರೂಪಾಯಿ ಗಳಿಕೆ ಮಾಡಿತ್ತು.ಈ ದಾಖಲೆಯನ್ನು ‘ಆದಿಪುರುಷ್’ ಚಿತ್ರದ ಬಳಿ ಹಿಂದಿಕ್ಕಲು ಸಾಧ್ಯವಿಲ್ಲ ಎನ್ನಲಾಗುತ್ತಿದೆ.  

‘ಕೆಜಿಎಫ್ 2’ ದಾಖಲೆ ಮುರಿಯಲಿದೆಯೇ ‘ಆದಿಪುರುಷ್’ ಸಿನಿಮಾ? ಸಾಧ್ಯವೇ ಇಲ್ಲ ಎನ್ನುತ್ತಿದೆ ಲೆಕ್ಕಾಚಾರ
‘ಆದಿಪುರುಷ್​’ ಸಿನಿಮಾ ಪೋಸ್ಟರ್​
Follow us
|

Updated on: Jun 15, 2023 | 11:13 AM

‘ಆದಿಪುರುಷ್’ ಸಿನಿಮಾ (Adipurush Movie) 2020ರಲ್ಲಿ ಘೋಷಣೆ ಆಯಿತು. ಈ ಸಿನಿಮಾ ಸುಮಾರು ಮೂರು ವರ್ಷಗಳ ಬಳಿಕ ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ‘ಆದಿಪುರುಷ್’ ಚಿತ್ರಕ್ಕೆ ಓಂ ರಾವತ್ (Om Raut) ಅವರು ನಿರ್ದೇಶನ ಮಾಡಿದ್ದಾರೆ. ರಾಮನಾಗಿ​ ಪ್ರಭಾಸ್ ಹಾಗೂ ​ಸೀತೆಯ ಪಾತ್ರದಲ್ಲಿ ಕೃತಿ ಸನೋನ್ ನಟಿಸಿದ್ದಾರೆ. ಈ ಚಿತ್ರ ಮೊದಲು ದಿನ ಎಷ್ಟು ಕಲೆಕ್ಷನ್ ಮಾಡಬಹುದು ಎನ್ನುವ ಬಗ್ಗೆ ಅನೇಕರಿಗೆ ಕುತೂಹಲ ಇದೆ. ‘ಕೆಜಿಎಫ್ 2’ ದಾಖಲೆಯನ್ನು ಈ ಸಿನಿಮಾ ಮುರಿಯಲಿದೆಯೇ ಎನ್ನುವ ಪ್ರಶ್ನೆ ಕೂಡ ಮೂಡಿದೆ.

ಯಶ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ಸಿನಿಮಾ ಹಿಂದಿಯಲ್ಲಿ ಮೊದಲ ದಿನ 53 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈ ಮೂಲಕ ಬಾಲಿವುಡ್​ನಲ್ಲಿ ಅತಿ ಹೆಚ್ಚು ಓಪನಿಂಗ್ ಕಂಡ ಎರಡನೇ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಈ ದಾಖಲೆಯನ್ನು ‘ಆದಿಪುರುಷ್’ ಚಿತ್ರದ ಬಳಿ ಹಿಂದಿಕ್ಕಲು ಸಾಧ್ಯವಿಲ್ಲ ಎನ್ನಲಾಗುತ್ತಿದೆ.

ಪ್ರಭಾಸ್​ ಇರುವ ಕಾರಣದಿಂದ ತೆಲುಗು ಬೆಲ್ಟ್​ನಲ್ಲಿ ಚಿತ್ರಕ್ಕೆ ಬೇಡಿಕೆ ಸೃಷ್ಟಿ ಆಗಿದೆ. ಈ ಸಿನಿಮಾ ತೆಲುಗು ಭಾಷಿಕ ರಾಜ್ಯಗಳಲ್ಲಿ ದೊಡ್ಡ ಮಟ್ಟದ ಗಳಿಕೆ ಮಾಡುವ ಸಾಧ್ಯತೆ ಇದೆ. ಹಿಂದಿಯಲ್ಲೂ ಚಿತ್ರಕ್ಕೆ ಬೇಡಿಕೆ ಸೃಷ್ಟಿ ಆಗಿದೆಯಾದರೂ ಹಿಂದಿ ಅವತರಣಿಕೆ ಮೊದಲ ದಿನ 50 ಕೋಟಿ ರೂಪಾಯಿ ದಾಟೋದು ಅನುಮಾನ ಎನ್ನಲಾಗುತ್ತಿದೆ.

ಇದನ್ನೂ ಓದಿ: Adipurush: 2250 ರೂಪಾಯಿಗೆ ಏರಿತು ‘ಆದಿಪುರುಷ್​’ ಸಿನಿಮಾ ಟಿಕೆಟ್​ ಬೆಲೆ; ಮುಗಿಬಿದ್ದು ಖರೀದಿಸಿದ ಪ್ರೇಕ್ಷಕರು

‘ಆದಿಪುರುಷ್’ ಸಿನಿಮಾ ಮೊದಲ ದಿನದ ಒಟ್ಟಾರೆ ಕಲೆಕ್ಷನ್ 50 ಕೋಟಿ ರೂಪಾಯಿ ಆಗಲಿದೆ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಊಹೆ. ಈ ಬಗ್ಗೆ ಪಕ್ಕಾ ಲೆಕ್ಕಾ ಸಿಗಬೇಕು ಎಂದರೆ ಜೂನ್ 17ರವರೆಗೆ ನಾವು ಕಾಯಲೇಬೇಕು. ಆ ಬಳಿಕ ಸ್ಪಷ್ಟ ಲೆಕ್ಕಾಚಾರ ಸಿಗಲಿದೆ.

ದೇಶಾದ್ಯಂತ ‘ಆದಿಪುರುಷ್​’ ಸಿನಿಮಾವನ್ನು ಸ್ವಾಗತಿಸಲು ಪ್ರೇಕ್ಷಕರು ಸಜ್ಜಾಗಿದ್ದಾರೆ. ಅದರಲ್ಲೂ ದೆಹಲಿಯಲ್ಲಿ ಈ ಸಿನಿಮಾದ ಕ್ರೇಜ್​ ಕೊಂಚ ಜಾಸ್ತಿಯೇ ಇದೆ. ರಾಷ್ಟ್ರ ರಾಜಧಾನಿಯಲ್ಲಿ ಈ ಸಿನಿಮಾದ ಟಿಕೆಟ್​ ಬೆಲೆ ಮುಗಿಲು ಮುಟ್ಟಿದೆ. 2250 ರೂಪಾಯಿ ಟಿಕೆಟ್​ ದರ ಇರುವ ಮಾಲ್​ಗಳಲ್ಲೂ ಬಹುತೇಕ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿವೆ. ಇದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್