AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ದಾಖಲೆ ಮುರಿಯಲಿದೆಯೇ ‘ಆದಿಪುರುಷ್’ ಸಿನಿಮಾ? ಸಾಧ್ಯವೇ ಇಲ್ಲ ಎನ್ನುತ್ತಿದೆ ಲೆಕ್ಕಾಚಾರ

ಯಶ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ಸಿನಿಮಾ ಹಿಂದಿಯಲ್ಲಿ ಮೊದಲ ದಿನ 53 ಕೋಟಿ ರೂಪಾಯಿ ಗಳಿಕೆ ಮಾಡಿತ್ತು.ಈ ದಾಖಲೆಯನ್ನು ‘ಆದಿಪುರುಷ್’ ಚಿತ್ರದ ಬಳಿ ಹಿಂದಿಕ್ಕಲು ಸಾಧ್ಯವಿಲ್ಲ ಎನ್ನಲಾಗುತ್ತಿದೆ.  

‘ಕೆಜಿಎಫ್ 2’ ದಾಖಲೆ ಮುರಿಯಲಿದೆಯೇ ‘ಆದಿಪುರುಷ್’ ಸಿನಿಮಾ? ಸಾಧ್ಯವೇ ಇಲ್ಲ ಎನ್ನುತ್ತಿದೆ ಲೆಕ್ಕಾಚಾರ
‘ಆದಿಪುರುಷ್​’ ಸಿನಿಮಾ ಪೋಸ್ಟರ್​
ರಾಜೇಶ್ ದುಗ್ಗುಮನೆ
|

Updated on: Jun 15, 2023 | 11:13 AM

Share

‘ಆದಿಪುರುಷ್’ ಸಿನಿಮಾ (Adipurush Movie) 2020ರಲ್ಲಿ ಘೋಷಣೆ ಆಯಿತು. ಈ ಸಿನಿಮಾ ಸುಮಾರು ಮೂರು ವರ್ಷಗಳ ಬಳಿಕ ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ‘ಆದಿಪುರುಷ್’ ಚಿತ್ರಕ್ಕೆ ಓಂ ರಾವತ್ (Om Raut) ಅವರು ನಿರ್ದೇಶನ ಮಾಡಿದ್ದಾರೆ. ರಾಮನಾಗಿ​ ಪ್ರಭಾಸ್ ಹಾಗೂ ​ಸೀತೆಯ ಪಾತ್ರದಲ್ಲಿ ಕೃತಿ ಸನೋನ್ ನಟಿಸಿದ್ದಾರೆ. ಈ ಚಿತ್ರ ಮೊದಲು ದಿನ ಎಷ್ಟು ಕಲೆಕ್ಷನ್ ಮಾಡಬಹುದು ಎನ್ನುವ ಬಗ್ಗೆ ಅನೇಕರಿಗೆ ಕುತೂಹಲ ಇದೆ. ‘ಕೆಜಿಎಫ್ 2’ ದಾಖಲೆಯನ್ನು ಈ ಸಿನಿಮಾ ಮುರಿಯಲಿದೆಯೇ ಎನ್ನುವ ಪ್ರಶ್ನೆ ಕೂಡ ಮೂಡಿದೆ.

ಯಶ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ಸಿನಿಮಾ ಹಿಂದಿಯಲ್ಲಿ ಮೊದಲ ದಿನ 53 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈ ಮೂಲಕ ಬಾಲಿವುಡ್​ನಲ್ಲಿ ಅತಿ ಹೆಚ್ಚು ಓಪನಿಂಗ್ ಕಂಡ ಎರಡನೇ ಸಿನಿಮಾ ಎನ್ನುವ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಈ ದಾಖಲೆಯನ್ನು ‘ಆದಿಪುರುಷ್’ ಚಿತ್ರದ ಬಳಿ ಹಿಂದಿಕ್ಕಲು ಸಾಧ್ಯವಿಲ್ಲ ಎನ್ನಲಾಗುತ್ತಿದೆ.

ಪ್ರಭಾಸ್​ ಇರುವ ಕಾರಣದಿಂದ ತೆಲುಗು ಬೆಲ್ಟ್​ನಲ್ಲಿ ಚಿತ್ರಕ್ಕೆ ಬೇಡಿಕೆ ಸೃಷ್ಟಿ ಆಗಿದೆ. ಈ ಸಿನಿಮಾ ತೆಲುಗು ಭಾಷಿಕ ರಾಜ್ಯಗಳಲ್ಲಿ ದೊಡ್ಡ ಮಟ್ಟದ ಗಳಿಕೆ ಮಾಡುವ ಸಾಧ್ಯತೆ ಇದೆ. ಹಿಂದಿಯಲ್ಲೂ ಚಿತ್ರಕ್ಕೆ ಬೇಡಿಕೆ ಸೃಷ್ಟಿ ಆಗಿದೆಯಾದರೂ ಹಿಂದಿ ಅವತರಣಿಕೆ ಮೊದಲ ದಿನ 50 ಕೋಟಿ ರೂಪಾಯಿ ದಾಟೋದು ಅನುಮಾನ ಎನ್ನಲಾಗುತ್ತಿದೆ.

ಇದನ್ನೂ ಓದಿ: Adipurush: 2250 ರೂಪಾಯಿಗೆ ಏರಿತು ‘ಆದಿಪುರುಷ್​’ ಸಿನಿಮಾ ಟಿಕೆಟ್​ ಬೆಲೆ; ಮುಗಿಬಿದ್ದು ಖರೀದಿಸಿದ ಪ್ರೇಕ್ಷಕರು

‘ಆದಿಪುರುಷ್’ ಸಿನಿಮಾ ಮೊದಲ ದಿನದ ಒಟ್ಟಾರೆ ಕಲೆಕ್ಷನ್ 50 ಕೋಟಿ ರೂಪಾಯಿ ಆಗಲಿದೆ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಊಹೆ. ಈ ಬಗ್ಗೆ ಪಕ್ಕಾ ಲೆಕ್ಕಾ ಸಿಗಬೇಕು ಎಂದರೆ ಜೂನ್ 17ರವರೆಗೆ ನಾವು ಕಾಯಲೇಬೇಕು. ಆ ಬಳಿಕ ಸ್ಪಷ್ಟ ಲೆಕ್ಕಾಚಾರ ಸಿಗಲಿದೆ.

ದೇಶಾದ್ಯಂತ ‘ಆದಿಪುರುಷ್​’ ಸಿನಿಮಾವನ್ನು ಸ್ವಾಗತಿಸಲು ಪ್ರೇಕ್ಷಕರು ಸಜ್ಜಾಗಿದ್ದಾರೆ. ಅದರಲ್ಲೂ ದೆಹಲಿಯಲ್ಲಿ ಈ ಸಿನಿಮಾದ ಕ್ರೇಜ್​ ಕೊಂಚ ಜಾಸ್ತಿಯೇ ಇದೆ. ರಾಷ್ಟ್ರ ರಾಜಧಾನಿಯಲ್ಲಿ ಈ ಸಿನಿಮಾದ ಟಿಕೆಟ್​ ಬೆಲೆ ಮುಗಿಲು ಮುಟ್ಟಿದೆ. 2250 ರೂಪಾಯಿ ಟಿಕೆಟ್​ ದರ ಇರುವ ಮಾಲ್​ಗಳಲ್ಲೂ ಬಹುತೇಕ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿವೆ. ಇದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ