AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush Movie: ಟೀಕೆಗಳ ಮಧ್ಯೆಯೇ ‘ಆದಿಪುರುಷ್’ ಚಿತ್ರಕ್ಕೆ ಹೈಕೋರ್ಟ್​ನಿಂದ ದೊಡ್ಡ ರಿಲೀಫ್

‘ಆದಿಪುರುಷ್’ ರಿಲೀಸ್ ಆದ ಬಳಿಕ ಹಿಂದೂ ಸೇನಾ ಮುಖ್ಯಸ್ಥ ವಿಷ್ಣು ಗುಪ್ತಾ ಅವರು ದೆಹಲಿ ಹೈಕೋರ್ಟ್​ಗೆ ಸ್ವಯಂ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಚಿತ್ರದ ಮೇಲೆ ನಿಷೇಧ ಹೇರುವಂತೆ ಕೋರಿದ್ದರು.

Adipurush Movie: ಟೀಕೆಗಳ ಮಧ್ಯೆಯೇ ‘ಆದಿಪುರುಷ್’ ಚಿತ್ರಕ್ಕೆ ಹೈಕೋರ್ಟ್​ನಿಂದ ದೊಡ್ಡ ರಿಲೀಫ್
ಪ್ರಭಾಸ್-ಕೃತಿ ಸನೋನ್
ರಾಜೇಶ್ ದುಗ್ಗುಮನೆ
|

Updated on:Jun 22, 2023 | 8:21 AM

Share

ಹಲವು ನಿರೀಕ್ಷೆಗಳ ನಡುವೆ ಪ್ರಭಾಸ್ (Prabhas) ನಟನೆಯ ‘ಆದಿಪುರುಷ್’ ಚಿತ್ರ ವಿಶ್ವದಾದ್ಯಂತ ರಿಲೀಸ್ ಆಯಿತು. ಜೂನ್ 16ರಂದು ಬಿಡುಗಡೆಯಾದ ಈ ಸಿನಿಮಾ ಟೀಕೆಗೆ ಗುರಿಯಾಗುತ್ತಿದೆ. ರಾಮಾಯಣವನ್ನು ನಂಬುವವರು ಸಾಕಷ್ಟು ಜನರಿದ್ದಾರೆ. ರಾಮ ಹಾಗೂ ಹನುಮಂತನ ಭಕ್ತರ ಸಂಖ್ಯೆಯೂ ದೊಡ್ಡದಿದೆ. ಇವರ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ‘ಆದಿಪುರುಷ್’ (Adipurush Movie) ಮಾಡಿದೆ. ಈ ಕಾರಣಕ್ಕೆ ಚಿತ್ರರಂಗದ ಗಣ್ಯರು ಸೇರಿ ಅನೇಕ ರಂಗದವರು ಇದನ್ನು ತೀವ್ರವಾಗಿ ಟೀಕಿಸಿದ್ದಾರೆ. ಈ ಸಿನಿಮಾ ಮೇಲೆ ನಿಷೇಧ ಹೇರುವಂತೆ ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ‘ತುರ್ತಾಗಿ ಅರ್ಜಿ ವಿಚಾರಣೆ ನಡೆಸುವ ಅಗತ್ಯವಿಲ್ಲ’ ಎಂದಿರುವ ಕೋರ್ಟ್​, ಮುಂದಿನ ವಿಚಾರಣೆಯನ್ನು ಜೂನ್​ 30ಕ್ಕೆ ಮುಂದೂಡಿದೆ.

‘ಆದಿಪುರುಷ್’ ರಿಲೀಸ್ ಆದ ಬಳಿಕ ಹಿಂದೂ ಸೇನಾ ಮುಖ್ಯಸ್ಥ ವಿಷ್ಣು ಗುಪ್ತಾ ಅವರು ದೆಹಲಿ ಹೈಕೋರ್ಟ್​ಗೆ ಸ್ವಯಂ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಚಿತ್ರದ ಮೇಲೆ ನಿಷೇಧ ಹೇರುವಂತೆ ಕೋರಿದ್ದರು. ಈ ಅರ್ಜಿಯ ವಿಚಾರಣೆ ಹೈಕೋರ್ಟ್​ನಲ್ಲಿ ನಡೆದಿದೆ. ಕೋರ್ಟ್ ಆದೇಶದಿಂದ ‘ಆದಿಪುರುಷ್’ ಚಿತ್ರಕ್ಕೆ ರಿಲೀಫ್ ಸಿಕ್ಕಂತೆ ಆಗಿದೆ.

‘ನೇಪಾಳ ಈ ಸಿನಿಮಾನ ಬ್ಯಾನ್ ಮಾಡಿದೆ. ಚಿತ್ರದಲ್ಲಿ ಅನೇಕ ವಿವಾದಾತ್ಮಕ ವಿಚಾರಗಳಿವೆ. ಅದರಿಂದ ಅಂತರರಾಷ್ಟ್ರೀಯ ಸಂಬಂಧಗಳಿಗೆ ಅಡ್ಡಿಯಾಗಬಹುದು. ತುರ್ತಾಗಿ ಅರ್ಜಿ ವಿಚಾರಣೆ ನಡೆಸಬೇಕು’ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ಆದರೆ, ಇದಕ್ಕೆ ಹೈಕೋರ್ಟ್ ಒಪ್ಪಿಲ್ಲ. ‘ಸಿನಿಮಾ ಈಗಾಗಲೇ ರಿಲೀಸ್ ಆಗಿದೆ. ಇನ್ನಾವುದೇ ತರಾತುರಿ ಇಲ್ಲ. ಜೂನ್ 30ಕ್ಕೆ ಬನ್ನಿ’ ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿ: Kriti Sanon: ಟ್ರೋಲ್​ಗಳ ನಡುವೆಯೂ ಶಾಲೆ ಮಕ್ಕಳಿಗೆ ಉಚಿತವಾಗಿ ‘ಆದಿಪುರುಷ್​’ ಚಿತ್ರ ತೋರಿಸಲು ಮುಂದಾದ ಕೃತಿ ಸನೋನ್​

ಈಗಾಗಲೇ ‘ಆದಿಪುರುಷ್’ ಚಿತ್ರಕ್ಕೆ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಲೆಕ್ಷನ್ ತಗ್ಗಿದೆ. ಈ ವೀಕೆಂಡ್​ನಲ್ಲಿ ಸಿನಿಮಾ ಕೊಂಚ ಗಳಿಕೆ ಮಾಡಬಹುದು. ಅರ್ಜಿಯ ಮುಂದಿನ ವಿಚಾರಣೆ ವೇಳೆಗೆ ‘ಆದಿಪುರುಷ್’ ಸಿನಿಮಾ ಬಹುತೇಕ ಚಿತ್ರಮಂದಿರದಿಂದ ಕಾಲ್ಕಿತ್ತಿರುತ್ತದೆ. ಹೀಗಾಗಿ, ಕೋರ್ಟ್ ಯಾವುದೇ ರೀತಿಯಲ್ಲಿ ಆದೇಶ ಕೊಟ್ಟರೂ ಅದು ಅಷ್ಟೊಂದು ಪ್ರಭಾವ ಬೀರುವುದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:40 am, Thu, 22 June 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?