AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush Movie: ಟೀಕೆಗಳ ಮಧ್ಯೆಯೇ ‘ಆದಿಪುರುಷ್’ ಚಿತ್ರಕ್ಕೆ ಹೈಕೋರ್ಟ್​ನಿಂದ ದೊಡ್ಡ ರಿಲೀಫ್

‘ಆದಿಪುರುಷ್’ ರಿಲೀಸ್ ಆದ ಬಳಿಕ ಹಿಂದೂ ಸೇನಾ ಮುಖ್ಯಸ್ಥ ವಿಷ್ಣು ಗುಪ್ತಾ ಅವರು ದೆಹಲಿ ಹೈಕೋರ್ಟ್​ಗೆ ಸ್ವಯಂ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಚಿತ್ರದ ಮೇಲೆ ನಿಷೇಧ ಹೇರುವಂತೆ ಕೋರಿದ್ದರು.

Adipurush Movie: ಟೀಕೆಗಳ ಮಧ್ಯೆಯೇ ‘ಆದಿಪುರುಷ್’ ಚಿತ್ರಕ್ಕೆ ಹೈಕೋರ್ಟ್​ನಿಂದ ದೊಡ್ಡ ರಿಲೀಫ್
ಪ್ರಭಾಸ್-ಕೃತಿ ಸನೋನ್
ರಾಜೇಶ್ ದುಗ್ಗುಮನೆ
|

Updated on:Jun 22, 2023 | 8:21 AM

Share

ಹಲವು ನಿರೀಕ್ಷೆಗಳ ನಡುವೆ ಪ್ರಭಾಸ್ (Prabhas) ನಟನೆಯ ‘ಆದಿಪುರುಷ್’ ಚಿತ್ರ ವಿಶ್ವದಾದ್ಯಂತ ರಿಲೀಸ್ ಆಯಿತು. ಜೂನ್ 16ರಂದು ಬಿಡುಗಡೆಯಾದ ಈ ಸಿನಿಮಾ ಟೀಕೆಗೆ ಗುರಿಯಾಗುತ್ತಿದೆ. ರಾಮಾಯಣವನ್ನು ನಂಬುವವರು ಸಾಕಷ್ಟು ಜನರಿದ್ದಾರೆ. ರಾಮ ಹಾಗೂ ಹನುಮಂತನ ಭಕ್ತರ ಸಂಖ್ಯೆಯೂ ದೊಡ್ಡದಿದೆ. ಇವರ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ‘ಆದಿಪುರುಷ್’ (Adipurush Movie) ಮಾಡಿದೆ. ಈ ಕಾರಣಕ್ಕೆ ಚಿತ್ರರಂಗದ ಗಣ್ಯರು ಸೇರಿ ಅನೇಕ ರಂಗದವರು ಇದನ್ನು ತೀವ್ರವಾಗಿ ಟೀಕಿಸಿದ್ದಾರೆ. ಈ ಸಿನಿಮಾ ಮೇಲೆ ನಿಷೇಧ ಹೇರುವಂತೆ ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ‘ತುರ್ತಾಗಿ ಅರ್ಜಿ ವಿಚಾರಣೆ ನಡೆಸುವ ಅಗತ್ಯವಿಲ್ಲ’ ಎಂದಿರುವ ಕೋರ್ಟ್​, ಮುಂದಿನ ವಿಚಾರಣೆಯನ್ನು ಜೂನ್​ 30ಕ್ಕೆ ಮುಂದೂಡಿದೆ.

‘ಆದಿಪುರುಷ್’ ರಿಲೀಸ್ ಆದ ಬಳಿಕ ಹಿಂದೂ ಸೇನಾ ಮುಖ್ಯಸ್ಥ ವಿಷ್ಣು ಗುಪ್ತಾ ಅವರು ದೆಹಲಿ ಹೈಕೋರ್ಟ್​ಗೆ ಸ್ವಯಂ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಚಿತ್ರದ ಮೇಲೆ ನಿಷೇಧ ಹೇರುವಂತೆ ಕೋರಿದ್ದರು. ಈ ಅರ್ಜಿಯ ವಿಚಾರಣೆ ಹೈಕೋರ್ಟ್​ನಲ್ಲಿ ನಡೆದಿದೆ. ಕೋರ್ಟ್ ಆದೇಶದಿಂದ ‘ಆದಿಪುರುಷ್’ ಚಿತ್ರಕ್ಕೆ ರಿಲೀಫ್ ಸಿಕ್ಕಂತೆ ಆಗಿದೆ.

‘ನೇಪಾಳ ಈ ಸಿನಿಮಾನ ಬ್ಯಾನ್ ಮಾಡಿದೆ. ಚಿತ್ರದಲ್ಲಿ ಅನೇಕ ವಿವಾದಾತ್ಮಕ ವಿಚಾರಗಳಿವೆ. ಅದರಿಂದ ಅಂತರರಾಷ್ಟ್ರೀಯ ಸಂಬಂಧಗಳಿಗೆ ಅಡ್ಡಿಯಾಗಬಹುದು. ತುರ್ತಾಗಿ ಅರ್ಜಿ ವಿಚಾರಣೆ ನಡೆಸಬೇಕು’ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ಆದರೆ, ಇದಕ್ಕೆ ಹೈಕೋರ್ಟ್ ಒಪ್ಪಿಲ್ಲ. ‘ಸಿನಿಮಾ ಈಗಾಗಲೇ ರಿಲೀಸ್ ಆಗಿದೆ. ಇನ್ನಾವುದೇ ತರಾತುರಿ ಇಲ್ಲ. ಜೂನ್ 30ಕ್ಕೆ ಬನ್ನಿ’ ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿ: Kriti Sanon: ಟ್ರೋಲ್​ಗಳ ನಡುವೆಯೂ ಶಾಲೆ ಮಕ್ಕಳಿಗೆ ಉಚಿತವಾಗಿ ‘ಆದಿಪುರುಷ್​’ ಚಿತ್ರ ತೋರಿಸಲು ಮುಂದಾದ ಕೃತಿ ಸನೋನ್​

ಈಗಾಗಲೇ ‘ಆದಿಪುರುಷ್’ ಚಿತ್ರಕ್ಕೆ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಲೆಕ್ಷನ್ ತಗ್ಗಿದೆ. ಈ ವೀಕೆಂಡ್​ನಲ್ಲಿ ಸಿನಿಮಾ ಕೊಂಚ ಗಳಿಕೆ ಮಾಡಬಹುದು. ಅರ್ಜಿಯ ಮುಂದಿನ ವಿಚಾರಣೆ ವೇಳೆಗೆ ‘ಆದಿಪುರುಷ್’ ಸಿನಿಮಾ ಬಹುತೇಕ ಚಿತ್ರಮಂದಿರದಿಂದ ಕಾಲ್ಕಿತ್ತಿರುತ್ತದೆ. ಹೀಗಾಗಿ, ಕೋರ್ಟ್ ಯಾವುದೇ ರೀತಿಯಲ್ಲಿ ಆದೇಶ ಕೊಟ್ಟರೂ ಅದು ಅಷ್ಟೊಂದು ಪ್ರಭಾವ ಬೀರುವುದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:40 am, Thu, 22 June 23

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ