AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ಮೇ 29ರಂದು ರಿಲೀಸ್​ ಆಗಲಿದೆ ‘ಆದಿಪುರುಷ್’ ಚಿತ್ರದ 2ನೇ ಹಾಡು ‘ರಾಮ್​ ಸಿಯಾ ರಾಮ್​’

Adipurush Movie Songs: ಟೀಸರ್​, ಟ್ರೇಲರ್​ ಮಾತ್ರವಲ್ಲದೇ ಹಾಡುಗಳ ಮೂಲಕವೂ ‘ಆದಿಪುರುಷ್​’ ಸಿನಿಮಾ ಗಮನ ಸೆಳೆಯುತ್ತಿದೆ. ಈ ಚಿತ್ರದ ಎರಡನೇ ಹಾಡು ‘ರಾಮ್​ ಸಿಯಾ ರಾಮ್​’ ಬಿಡುಗಡೆಗೆ ಈಗ ದಿನಾಂಕ ನಿಗದಿ ಆಗಿದೆ. ಮೇ 29ರಂದು ಈ ಗೀತೆ ರಿಲೀಸ್​ ಆಗಲಿದೆ.

Adipurush: ಮೇ 29ರಂದು ರಿಲೀಸ್​ ಆಗಲಿದೆ ‘ಆದಿಪುರುಷ್’ ಚಿತ್ರದ 2ನೇ ಹಾಡು ‘ರಾಮ್​ ಸಿಯಾ ರಾಮ್​’
ಆದಿಪುರುಷ್
Follow us
ಮದನ್​ ಕುಮಾರ್​
|

Updated on: May 25, 2023 | 12:58 PM

ಟೀಸರ್​, ಟ್ರೇಲರ್​ ಮಾತ್ರವಲ್ಲದೇ ಹಾಡುಗಳ ಮೂಲಕವೂ ‘ಆದಿಪುರುಷ್​’ ಸಿನಿಮಾ (Adipurush Movie) ಗಮನ ಸೆಳೆಯುತ್ತಿದೆ. ಈ ಚಿತ್ರದ ಎರಡನೇ ಹಾಡು ‘ರಾಮ್​ ಸಿಯಾ ರಾಮ್​’ (Ram Siya Ram) ಬಿಡುಗಡೆಗೆ ಈಗ ದಿನಾಂಕ ನಿಗದಿ ಆಗಿದೆ. ಮೇ 29ರಂದು ಈ ಗೀತೆ ರಿಲೀಸ್​ ಆಗಲಿದೆ. ಈ ಚಿತ್ರದ ಮೊದಲ ಹಾಡು ‘ಜೈ ಶ್ರೀರಾಮ್​..’ ಇತ್ತೀಚೆಗೆ ಬಿಡುಗಡೆ ಆಗಿ ಜನಮೆಚ್ಚುಗೆ ಗಳಿಸಿತು. ಈಗ ಎರಡನೇ ಹಾಡಿಗಾಗಿ ಫ್ಯಾನ್ಸ್​ ಕಾದಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕರಾದ ಅಜಯ್​-ಅತುಲ್ ಅವರು ‘ಆದಿಪುರುಷ್​’ ಸಿನಿಮಾಗೆ ಸಂಗೀತ ನೀಡಿದ್ದಾರೆ. ರಾಮಾಯಣ ಆಧರಿಸಿದ ಈ ಸಿನಿಮಾದಲ್ಲಿ ಪ್ರಭಾಸ್​ (Prabhas) ಅವರು ರಾಮನಾಗಿ ಕಾಣಿಸಿಕೊಂಡಿದ್ದಾರೆ. ಸೀತೆ ಪಾತ್ರಕ್ಕೆ ಕೃತಿ ಸನೋನ್​ ಬಣ್ಣ ಹಚ್ಚಿದ್ದಾರೆ. ಜೂನ್​ 16ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ರಿಲೀಸ್​ ಆಗಲಿದೆ.

ಸೆಟ್ಟೇರಿದ ದಿನದಿಂದಲೂ ‘ಆದಿಪುರುಷ್​’ ಚಿತ್ರ ಸಾಕಷ್ಟು ಸದ್ದು ಮಾಡುತ್ತಲೇ ಇತ್ತು. ಈಗ ಈ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರ ಆಗಿದೆ. ಮೇ 9ರಂದು ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ ಮಾಡುವ ಮೂಲಕ ಕೌತುಕ ಹೆಚ್ಚಿಸಲಾಯಿತು. ಓಂ ರಾವತ್​ ಅವರು ನಿರ್ದೇಶನ ಮಾಡಿದ್ದಾರೆ. ರಾವಣನಾಗಿ ಸೈಫ್​ ಅಲಿ ಖಾನ್​, ಆಂಜನೇಯನಾಗಿ ದೇವದತ್ತ​ ನಾಗೆ, ಲಕ್ಷ್ಮಣನಾಗಿ ಸನ್ನಿ ಸಿಂಗ್​ ನಟಿಸಿದ್ದಾರೆ. ಬಹುಕೋಟಿ ರೂಪಾಯಿ ವೆಚ್ಚದಲ್ಲಿ ಈ ಚಿತ್ರ ನಿರ್ಮಾಣ ಆಗಿದೆ. ಟ್ರೇಲರ್​ನಲ್ಲಿ ಅದ್ದೂರಿತನ ಕಾಣಿಸಿದೆ. ದೊಡ್ಡ ಪರದೆಯಲ್ಲಿ ‘ಆದಿಪುರುಷ್​’ ಚಿತ್ರವನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. 3ಡಿ ಅವತರಣಿಕೆಯಲ್ಲಿ ಈ ಸಿನಿಮಾ ಪ್ರದರ್ಶನ ಆಗಲಿದೆ.

ಇದನ್ನೂ ಓದಿ: Kriti Sanon: ಮೊದಲ ಬಾರಿ ಫೋಟೋಶೂಟ್​ ಮಾಡಿಸಿದಾಗ ಅಳುತ್ತಾ ಮನೆಗೆ ಬಂದಿದ್ದ ಕೃತಿ ಸನೋನ್​; ಕಾರಣ ಏನು?

‘ಟಿ ಸೀರೀಸ್‌’ನ ಭೂಷಣ್‌ ಕುಮಾರ್ ಅವರು ‘ಆದಿಪುರುಷ್​’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ತೆರೆಕಾಣಲಿದೆ. ಮೊದಲ ದಿನ ಈ ಚಿತ್ರಕ್ಕೆ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಪ್ರಭಾಸ್​ ಅವರು ‘ಆದಿಪುರುಷ್​’ ಸಿನಿಮಾ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಯಾಕೆಂದರೆ ‘ಬಾಹುಬಲಿ 2’ ಬಳಿಕ ಅವರು ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಹಾಗಾಗಿ ‘ಆದಿಪುರುಷ್​’ ಚಿತ್ರ ಗೆಲ್ಲಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. ಇದಲ್ಲದೇ ‘ಸಲಾರ್​’, ‘ಪ್ರಾಜೆಕ್ಟ್​ ಕೆ’ ಸಿನಿಮಾದ ಕೆಲಸದಲ್ಲೂ ಪ್ರಭಾಸ್​ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: Kriti Sanon: 24 ಕ್ಯಾರೆಟ್​ ಗೋಲ್ಡ್​ ಇರುವ ಸೀರೆ ಧರಿಸಿ ಬಂದ ನಟಿ ಕೃತಿ ಸನೋನ್​; ಸೀತೆ ಪಾತ್ರದಲ್ಲಿ ಮಿಂಚಿಂಗ್​

ಈಗಾಗಲೇ ರಾಮಾಯಣ ಆಧರಿಸಿ ಹಲವು ಧಾರಾವಾಹಿ ಹಾಗೂ ಸಿನಿಮಾಗಳು ಬಂದು ಹೋಗಿವೆ. ಆದಾಗ್ಯೂ ಓಂ ರಾವತ್ ಇದೇ ಕಥೆ ಆಧರಿಸಿ ಸಿನಿಮಾ ಮಾಡುವ ಪ್ರಯತ್ನ ಮಾಡಿದ್ದಾರೆ. ಪ್ರೇಕ್ಷಕರು ಈ ಚಿತ್ರಕ್ಕೆ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!