AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆದಿಪುರುಷ್’ ಚಿತ್ರದ ಮತ್ತೊಂದು ಟ್ರೇಲರ್ ನೋಡಲು ರೆಡಿ ಆಗಿ; ಇದರಲ್ಲಿ ಇರಲಿದೆ ದೃಶ್ಯ ವೈಭವ

Adipurush Movie: ‘ಆದಿಪುರುಷ್’ ಚಿತ್ರಕ್ಕೆ ಅಬ್ಬರದ ಪ್ರಚಾರ ನೀಡಲಾಗುತ್ತಿದೆ. ಇದರ ಭಾಗವಾಗಿ ಮತ್ತೊಂದು ಟ್ರೇಲರ್ ತರಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ವರದಿ ಆಗಿದೆ.

‘ಆದಿಪುರುಷ್’ ಚಿತ್ರದ ಮತ್ತೊಂದು ಟ್ರೇಲರ್ ನೋಡಲು ರೆಡಿ ಆಗಿ; ಇದರಲ್ಲಿ ಇರಲಿದೆ ದೃಶ್ಯ ವೈಭವ
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on:Jun 01, 2023 | 8:05 AM

Share

‘ಆದಿಪುರುಷ್’ ಸಿನಿಮಾ (Adipurush Movie) ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬರಲು ಸಿದ್ಧವಾಗಿದೆ. ರಾಮಾಯಣ ಆಧರಿಸಿ ಸಿದ್ಧಗೊಂಡ ಈ ಚಿತ್ರದಲ್ಲಿ ಪ್ರಭಾಸ್ ರಾಮನ ಪಾತ್ರ ಮಾಡಿದರೆ ಸೀತೆಯಾಗಿ ಕೃತಿ ಸನೋನ್ ಕಾಣಿಸಿಕೊಂಡಿದ್ದಾರೆ. ರಾವಣನಾಗಿ ಬಾಲಿವುಡ್ ಸ್ಟಾರ್ ನಟ ಸೈಫ್ ಅಲಿ ಖಾನ್ ಮತ್ತು ಲಕ್ಷ್ಮಣನಾಗಿ ಸನ್ನಿ ಸಿಂಗ್ ಬಣ್ಣ ಹಚ್ಚಿದ್ದಾರೆ. ಬಾಲಿವುಡ್ ನಿರ್ದೇಶಕ ಓಂ ರಾವತ್ (Om Raut) ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಪೋಸ್ಟರ್, ಹಾಡುಗಳು ಹಾಗೂ ಟ್ರೇಲರ್​ ಸಿನಿಮಾ ಬಗ್ಗೆ ಇರುವ ನಿರೀಕ್ಷೆ ಹೆಚ್ಚಿಸಿದೆ. ಈಗ ‘ಆದಿಪುರುಷ್​’ ಚಿತ್ರದ ಮತ್ತೊಂದು ಟ್ರೇಲರ್ ರಿಲೀಸ್​ ಮಾಡಲು ಚಿತ್ರತಂಡ ಪ್ಲ್ಯಾನ್ ರೂಪಿಸಿದೆ.

‘ಆದಿಪುರುಷ್’ ಚಿತ್ರಕ್ಕೆ ಅಬ್ಬರದ ಪ್ರಚಾರ ನೀಡಲಾಗುತ್ತಿದೆ. ಇದರ ಭಾಗವಾಗಿ ಮತ್ತೊಂದು ಟ್ರೇಲರ್ ತರಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ವರದಿ ಆಗಿದೆ. ಸಿನಿಮಾ ಬಿಡುಗಡೆಗೆ ಕೆಲವು ದಿನಗಳ ಮೊದಲು ಈ ಟ್ರೇಲರ್ ಬಿಡುಗಡೆಯಾಗಲಿದೆ ಎಂಬ ಮಾತು ಕೇಳಿಬರುತ್ತಿದೆ. ಈ ಟ್ರೇಲರ್​ನಲ್ಲಿ ಹಿಂದೆಂದೂ ಕಾಣದ ದೃಶ್ಯ ವೈಭವ ಇರಲಿದೆ ಎಂಬುದು ಮೂಲಗಳ ಮಾಹಿತಿ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

‘ಆದಿಪುರುಷ್’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ಅದ್ದೂರಿಯಾಗಿ ಆಯೋಜಿಸಲಾಗಿದೆ. ಜೂನ್ 6ರಂದು ತಿರುಪತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸಿನಿಮಾ ಪ್ರಚಾರದಲ್ಲಿ ಪ್ರಭಾಸ್ ಅಭಿಮಾನಿಗಳು ಕೂಡ ಭಾಗಿ ಆಗುತ್ತಿದ್ದಾರೆ. ರಾಮನ ಹೆಸರಲ್ಲಿ ರ‍್ಯಾಲಿಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ಶನಿವಾರ ಮತ್ತು ಭಾನುವಾರದಂದು ಪ್ರಮುಖ ನಗರಗಳಲ್ಲಿ ಅಭಿಮಾನಿಗಳಿಂದ ಈ ರ‍್ಯಾಲಿ ನಡೆಯುತ್ತಿದೆ.

ಇದನ್ನೂ ಓದಿ: ಮೇ 29ರಂದು ರಿಲೀಸ್​ ಆಗಲಿದೆ ‘ಆದಿಪುರುಷ್’ ಚಿತ್ರದ 2ನೇ ಹಾಡು ‘ರಾಮ್​ ಸಿಯಾ ರಾಮ್​’

‘ಬಾಹುಬಲಿ 2’ ಸಿನಿಮಾ ತೆರೆಕಂಡ ಬಳಿಕ ಪ್ರಭಾಸ್​ಗೆ ನಿರೀಕ್ಷಿತ ಮಟ್ಟದ ಗೆಲುವು ಸಿಗಲೇ ಇಲ್ಲ. ಅವರ ನಟನೆಯ ‘ಸಾಹೋ’ ಹಾಗೂ ‘ರಾಧೆ ಶ್ಯಾಮ್​’ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಸೋತವು. ಹೀಗಾಗಿ ಅವರಿಗೆ ಒಂದು ತುರ್ತಾದ ಗೆಲುವಿನ ಅವಶ್ಯಕತೆ ಇದೆ. ‘ಆದಿಪುರುಷ್’ ಮೂಲಕ ಗೆಲ್ಲುವ ಭರವಸೆಯಲ್ಲಿ ಅವರಿದ್ದಾರೆ. ಆದರೆ, ಈ ಚಿತ್ರಕ್ಕೆ ಎದುರಾದ ಟ್ರೋಲ್​ಗಳು ಸಿನಿಮಾ ತಂಡವನ್ನು ಆತಂಕಕ್ಕೆ ಒಡ್ಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:58 am, Thu, 1 June 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ