Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀನಾಯ ಸ್ಥಿತಿ ತಲುಪಿದ ‘ಆದಿಪುರುಷ್’ ಕಲೆಕ್ಷನ್; ಸಿನಿಮಾ ಕಿತ್ತೊಗೆಯುತ್ತಿದ್ದಾರೆ ಚಿತ್ರಮಂದಿರದ ಮಾಲೀಕರು

‘ಆದಿಪುರುಷ್’ ಚಿತ್ರವನ್ನು ಟೀಕಿಸಲು ಭರಪೂರ ವಿಚಾರಗಳು ಸಿಗುತ್ತಿವೆ. ಸೈಫ್ ಅಲಿ ಖಾನ್ ಮಾಡಿರುವ ರಾವಣನ ಪಾತ್ರದಿಂದ ಹಿಡಿದು, ಚಿತ್ರದ ಸಂಭಾಷಣೆವರೆಗೆ ಅನೇಕ ರೀತಿಯ ಟೀಕೆಗಳು ವ್ಯಕ್ತವಾಗಿದೆ.

ಹೀನಾಯ ಸ್ಥಿತಿ ತಲುಪಿದ ‘ಆದಿಪುರುಷ್’ ಕಲೆಕ್ಷನ್; ಸಿನಿಮಾ ಕಿತ್ತೊಗೆಯುತ್ತಿದ್ದಾರೆ ಚಿತ್ರಮಂದಿರದ ಮಾಲೀಕರು
ಪ್ರಭಾಸ್, ಕೃತಿ ಸನೋನ್​
Follow us
ರಾಜೇಶ್ ದುಗ್ಗುಮನೆ
|

Updated on:Jun 24, 2023 | 2:08 PM

‘ಆದಿಪುರುಷ್’ ಸಿನಿಮಾದ (Adipurush Movie) ಕಲೆಕ್ಷನ್ ದಿನೇ ದಿನೇ ತಗ್ಗುತ್ತಿದೆ. ಸಿನಿಮಾ ಕ್ಷೇತ್ರದವರಿಗೆ ಶುಕ್ರವಾರ ವಿಶೇಷ ದಿನ. ಆ ದಿನವೂ ‘ಆದಿಪುರುಷ್’ ಸಿನಿಮಾ ಗಳಿಕೆ ಮಾಡಿದ್ದು ಕೇವಲ 3 ಕೋಟಿ ರೂಪಾಯಿ. 150 ರೂಪಾಯಿ ಟಿಕೆಟ್ ಆಫರ್​​ ಕೂಡ ಕೆಲಸ ಮಾಡಿಲ್ಲ. ಮತ್ತೊಂದು ಕಡೆ ಚಿತ್ರಮಂದಿರದಿಂದ ‘ಆದಿಪುರುಷ್’ ಶೋನ ಕಡಿತ ಮಾಡುವ ಕೆಲಸ ಆಗುತ್ತಿದೆ. ಅನೇಕ ಕಡೆಗಳಲ್ಲಿ ಶೋನ ಕಿತ್ತೆಸೆಯಲಾಗಿದೆ. ಹೀಗಾಗಿ, ವೀಕೆಂಡ್ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದ ಚಿತ್ರತಂಡಕ್ಕೆ ಸಾಕಷ್ಟು ಹಿನ್ನಡೆ ಉಂಟಾಗಿದೆ.

‘ಆದಿಪುರುಷ್’ ಸಿನಿಮಾದಲ್ಲಿ ಪ್ರಭಾಸ್ ರಾಮನ ಪಾತ್ರ ಮಾಡಿದ್ದಾರೆ. ಕೃತಿ ಸನೋನ್ ಸೀತೆಯಾಗಿ ಕಾಣಿಸಿಕೊಂಡಿದ್ದಾರೆ. ಓಂ ರಾವತ್ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಮೂಲಕ ಗೆಲ್ಲುವ ನಿರೀಕ್ಷೆಯಲ್ಲಿ ಇವರಿದ್ದರು. ಆದರೆ, ರಾಮಾಯಣವನ್ನು ಅಣಕಿಸಿದ ರೀತಿಯಲ್ಲಿ ‘ಆದಿಪುರುಷ್’ ಚಿತ್ರ ಇದೆ ಎಂದು ಅನೇಕರು ಆರೋಪಿಸಿದ್ದಾರೆ. ಈ ಕಾರಣಕ್ಕೆ ಸಿನಿಮಾಗೆ ಹಿನ್ನಡೆ ಉಂಟಾಗಿದೆ.

‘ಆದಿಪುರುಷ್’ ಚಿತ್ರವನ್ನು ಟೀಕಿಸಲು ಭರಪೂರ ವಿಚಾರಗಳು ಸಿಗುತ್ತಿವೆ. ಸೈಫ್ ಅಲಿ ಖಾನ್ ಮಾಡಿರುವ ರಾವಣನ ಪಾತ್ರದಿಂದ ಹಿಡಿದು, ಚಿತ್ರದ ಸಂಭಾಷಣೆವರೆಗೆ ಅನೇಕ ರೀತಿಯ ಟೀಕೆಗಳು ವ್ಯಕ್ತವಾಗಿದೆ. ರಾಮನ ಪಾತ್ರಕ್ಕೆ ಪ್ರಭಾಸ್ ಹೊಂದುತ್ತಿಲ್ಲ ಎಂಬುದು ಕೆಲವರ ಅಭಿಪ್ರಾಯ. ಸಿನಿಮಾ ರಿಲೀಸ್​ಗೂ ಮೊದಲು ಇದು ಸಂಪೂರ್ಣವಾಗಿ ರಾಮಾಯಣ ಆಧರಿತ ಚಿತ್ರ ಎನ್ನುತ್ತಿದ್ದ ತಂಡದವರು, ಸಿನಿಮಾ ರಿಲೀಸ್ ಆದ ಬಳಿಕ ‘ನಾವು ರಾಮಾಯಣವನ್ನು ಸ್ಫೂರ್ತಿಯಾಗಿ ಇಟ್ಟುಕೊಂಡು ಸಿನಿಮಾ ಮಾಡಿದ್ದೇವೆ ಅಷ್ಟೇ’ ಎಂದು ಹೇಳಿಕೆ ನೀಡಿದ್ದರು. ಇದು ಕೂಡ ಚಿತ್ರತಂಡಕ್ಕೆ ಹಿನ್ನಡೆ ಆಯಿತು.

ಇದನ್ನೂ ಓದಿ: Adipurush: ರಾಮ-ಸೀತೆ ಗೆಟಪ್​ನಲ್ಲಿ ಯಶ್​-ರಾಧಿಕಾ ಪಂಡಿತ್​; ವೈರಲ್​ ಆಗಿದೆ ಫೋಟೋ

ದೇಶದ ಹಲವು ಕಡೆಗಳಲ್ಲಿ ‘ಆದಿಪುರುಷ್’ ಸಿನಿಮಾ ಶೋ ಕಡಿಮೆ ಮಾಡಲಾಗುತ್ತಿದೆ. ಸೋಮವಾರ (ಜೂನ್ 19) 10+ ಕೋಟಿ ರೂಪಾಯಿ ಗಳಿಕೆ ಮಾಡಿದ್ದ ಈ ಚಿತ್ರ ಶುಕ್ರವಾರ (ಜೂನ್​ 23) ಕೇವಲ 3 ಕೋಟಿ ರೂಪಾಯಿ ಬಾಚಿಕೊಂಡಿದೆ. ಇಂದು (ಜೂನ್ 24) ಹಾಗೂ ನಾಳೆ (ಜೂನ್ 25) ಸಿನಿಮಾದ ಗಳಿಕೆ ಎಷ್ಟಾಗಲಿದೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:05 pm, Sat, 24 June 23

ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!