AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀನಾಯ ಸ್ಥಿತಿ ತಲುಪಿದ ‘ಆದಿಪುರುಷ್’ ಕಲೆಕ್ಷನ್; ಸಿನಿಮಾ ಕಿತ್ತೊಗೆಯುತ್ತಿದ್ದಾರೆ ಚಿತ್ರಮಂದಿರದ ಮಾಲೀಕರು

‘ಆದಿಪುರುಷ್’ ಚಿತ್ರವನ್ನು ಟೀಕಿಸಲು ಭರಪೂರ ವಿಚಾರಗಳು ಸಿಗುತ್ತಿವೆ. ಸೈಫ್ ಅಲಿ ಖಾನ್ ಮಾಡಿರುವ ರಾವಣನ ಪಾತ್ರದಿಂದ ಹಿಡಿದು, ಚಿತ್ರದ ಸಂಭಾಷಣೆವರೆಗೆ ಅನೇಕ ರೀತಿಯ ಟೀಕೆಗಳು ವ್ಯಕ್ತವಾಗಿದೆ.

ಹೀನಾಯ ಸ್ಥಿತಿ ತಲುಪಿದ ‘ಆದಿಪುರುಷ್’ ಕಲೆಕ್ಷನ್; ಸಿನಿಮಾ ಕಿತ್ತೊಗೆಯುತ್ತಿದ್ದಾರೆ ಚಿತ್ರಮಂದಿರದ ಮಾಲೀಕರು
ಪ್ರಭಾಸ್, ಕೃತಿ ಸನೋನ್​
ರಾಜೇಶ್ ದುಗ್ಗುಮನೆ
|

Updated on:Jun 24, 2023 | 2:08 PM

Share

‘ಆದಿಪುರುಷ್’ ಸಿನಿಮಾದ (Adipurush Movie) ಕಲೆಕ್ಷನ್ ದಿನೇ ದಿನೇ ತಗ್ಗುತ್ತಿದೆ. ಸಿನಿಮಾ ಕ್ಷೇತ್ರದವರಿಗೆ ಶುಕ್ರವಾರ ವಿಶೇಷ ದಿನ. ಆ ದಿನವೂ ‘ಆದಿಪುರುಷ್’ ಸಿನಿಮಾ ಗಳಿಕೆ ಮಾಡಿದ್ದು ಕೇವಲ 3 ಕೋಟಿ ರೂಪಾಯಿ. 150 ರೂಪಾಯಿ ಟಿಕೆಟ್ ಆಫರ್​​ ಕೂಡ ಕೆಲಸ ಮಾಡಿಲ್ಲ. ಮತ್ತೊಂದು ಕಡೆ ಚಿತ್ರಮಂದಿರದಿಂದ ‘ಆದಿಪುರುಷ್’ ಶೋನ ಕಡಿತ ಮಾಡುವ ಕೆಲಸ ಆಗುತ್ತಿದೆ. ಅನೇಕ ಕಡೆಗಳಲ್ಲಿ ಶೋನ ಕಿತ್ತೆಸೆಯಲಾಗಿದೆ. ಹೀಗಾಗಿ, ವೀಕೆಂಡ್ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದ ಚಿತ್ರತಂಡಕ್ಕೆ ಸಾಕಷ್ಟು ಹಿನ್ನಡೆ ಉಂಟಾಗಿದೆ.

‘ಆದಿಪುರುಷ್’ ಸಿನಿಮಾದಲ್ಲಿ ಪ್ರಭಾಸ್ ರಾಮನ ಪಾತ್ರ ಮಾಡಿದ್ದಾರೆ. ಕೃತಿ ಸನೋನ್ ಸೀತೆಯಾಗಿ ಕಾಣಿಸಿಕೊಂಡಿದ್ದಾರೆ. ಓಂ ರಾವತ್ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಮೂಲಕ ಗೆಲ್ಲುವ ನಿರೀಕ್ಷೆಯಲ್ಲಿ ಇವರಿದ್ದರು. ಆದರೆ, ರಾಮಾಯಣವನ್ನು ಅಣಕಿಸಿದ ರೀತಿಯಲ್ಲಿ ‘ಆದಿಪುರುಷ್’ ಚಿತ್ರ ಇದೆ ಎಂದು ಅನೇಕರು ಆರೋಪಿಸಿದ್ದಾರೆ. ಈ ಕಾರಣಕ್ಕೆ ಸಿನಿಮಾಗೆ ಹಿನ್ನಡೆ ಉಂಟಾಗಿದೆ.

‘ಆದಿಪುರುಷ್’ ಚಿತ್ರವನ್ನು ಟೀಕಿಸಲು ಭರಪೂರ ವಿಚಾರಗಳು ಸಿಗುತ್ತಿವೆ. ಸೈಫ್ ಅಲಿ ಖಾನ್ ಮಾಡಿರುವ ರಾವಣನ ಪಾತ್ರದಿಂದ ಹಿಡಿದು, ಚಿತ್ರದ ಸಂಭಾಷಣೆವರೆಗೆ ಅನೇಕ ರೀತಿಯ ಟೀಕೆಗಳು ವ್ಯಕ್ತವಾಗಿದೆ. ರಾಮನ ಪಾತ್ರಕ್ಕೆ ಪ್ರಭಾಸ್ ಹೊಂದುತ್ತಿಲ್ಲ ಎಂಬುದು ಕೆಲವರ ಅಭಿಪ್ರಾಯ. ಸಿನಿಮಾ ರಿಲೀಸ್​ಗೂ ಮೊದಲು ಇದು ಸಂಪೂರ್ಣವಾಗಿ ರಾಮಾಯಣ ಆಧರಿತ ಚಿತ್ರ ಎನ್ನುತ್ತಿದ್ದ ತಂಡದವರು, ಸಿನಿಮಾ ರಿಲೀಸ್ ಆದ ಬಳಿಕ ‘ನಾವು ರಾಮಾಯಣವನ್ನು ಸ್ಫೂರ್ತಿಯಾಗಿ ಇಟ್ಟುಕೊಂಡು ಸಿನಿಮಾ ಮಾಡಿದ್ದೇವೆ ಅಷ್ಟೇ’ ಎಂದು ಹೇಳಿಕೆ ನೀಡಿದ್ದರು. ಇದು ಕೂಡ ಚಿತ್ರತಂಡಕ್ಕೆ ಹಿನ್ನಡೆ ಆಯಿತು.

ಇದನ್ನೂ ಓದಿ: Adipurush: ರಾಮ-ಸೀತೆ ಗೆಟಪ್​ನಲ್ಲಿ ಯಶ್​-ರಾಧಿಕಾ ಪಂಡಿತ್​; ವೈರಲ್​ ಆಗಿದೆ ಫೋಟೋ

ದೇಶದ ಹಲವು ಕಡೆಗಳಲ್ಲಿ ‘ಆದಿಪುರುಷ್’ ಸಿನಿಮಾ ಶೋ ಕಡಿಮೆ ಮಾಡಲಾಗುತ್ತಿದೆ. ಸೋಮವಾರ (ಜೂನ್ 19) 10+ ಕೋಟಿ ರೂಪಾಯಿ ಗಳಿಕೆ ಮಾಡಿದ್ದ ಈ ಚಿತ್ರ ಶುಕ್ರವಾರ (ಜೂನ್​ 23) ಕೇವಲ 3 ಕೋಟಿ ರೂಪಾಯಿ ಬಾಚಿಕೊಂಡಿದೆ. ಇಂದು (ಜೂನ್ 24) ಹಾಗೂ ನಾಳೆ (ಜೂನ್ 25) ಸಿನಿಮಾದ ಗಳಿಕೆ ಎಷ್ಟಾಗಲಿದೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:05 pm, Sat, 24 June 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ