ಆದಿಪುರುಷ್ ಟ್ರೈಲರ್: ರಾಮಾಯಣಕ್ಕೆ ತಂತ್ರಜ್ಞಾನದ ಮೆರುಗು, ‘ಮಾಸ್’ ಅವತಾರದಲ್ಲಿ ಶ್ರೀರಾಮ

Adipurush Trailer: ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾದ ಟ್ರೈಲರ್ (ಜೂನ್ 06) ಇಂದು ಬಿಡುಗಡೆ ಆಗಿದೆ. ತಂತ್ರಜ್ಞಾನ ಬಳಸಿ ಬೃಹತ್ ಕ್ಯಾನ್ವಾಸ್​ನಲ್ಲಿ ರಾಮಾಯಣವನ್ನು ಮತ್ತೊಮ್ಮೆ ಹೇಳಲಾಗಿದೆ.

ಆದಿಪುರುಷ್ ಟ್ರೈಲರ್: ರಾಮಾಯಣಕ್ಕೆ ತಂತ್ರಜ್ಞಾನದ ಮೆರುಗು, 'ಮಾಸ್' ಅವತಾರದಲ್ಲಿ ಶ್ರೀರಾಮ
ಆದಿಪುರುಷ್
Follow us
|

Updated on:Jun 06, 2023 | 10:23 PM

ಭಾರತದ ಅತಿ ದೊಡ್ಡ ಬಜೆಟ್ ಸಿನಿಮಾ ಎನ್ನಲಾಗುತ್ತಿರುವ ಆದಿಪುರುಷ್ (Adipurush) ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಟ್ರೈಲರ್ ಇಂದು (ಜೂನ್ 06) ಬಿಡುಗಡೆ ಆಗಿದೆ. ತಿರುಪತಿಯಲ್ಲಿ ನಡೆದ ಅದ್ಧೂರಿ ಪ್ರೀ ರಿಲೀಸ್ ಇವೆಂಟ್​ನಲ್ಲಿ ಆದಿಪುರುಷ್ ಟ್ರೈಲರ್ (Adipurush Trailer) ಅನ್ನು ಬಿಡುಗಡೆ ಮಾಡಲಾಯ್ತು. ಈ ಹಿಂದೆ ಬಿಡುಗಡೆ ಆಗಿದ್ದ ಸಿನಿಮಾದ ಟೀಸರ್​ಗೆ ಅಷ್ಟೇನೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಆದರೆ ಇದೀಗ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದ್ದು ಟ್ರೈಲರ್​ನಲ್ಲಿ ಶ್ರೀರಾಮನನ್ನು ಮಾಸ್ ಅವತಾರದಲ್ಲಿ ತೋರಿಸಲಾಗಿದೆ.

ರಾವಣ, ಸೀತೆಯನ್ನು ಹೊತ್ತುಕೊಂಡು ಹೋಗುವ ಸನ್ನಿವೇಶದಿಂದ ಆರಂಭವಾಗುವ ಆದಿಪುರುಷ್ ಟ್ರೈಲರ್​ ಸಿನಿಮಾದಲ್ಲ ಬಳಸಿಕೊಳ್ಳಲಾಗಿರುವ ತಂತ್ರಜ್ಞಾನದಿಂದ ಗಮನ ಸೆಳೆಯುತ್ತಿದೆ. ಅದ್ಧೂರಿ ಸೆಟ್​ಗಳು, ಅದ್ಭುತ ವಿಎಫ್​ಎಕ್ಸ್ ಮೂಲಕ ರಾಮಾಯಣವನ್ನು ಭಾರಿ ಬೃಹತ್ ಆಗಿ ತೋರಿಸುವ ಪ್ರಯತ್ನವನ್ನು ನಿರ್ದೇಶಕ ಓಂ ರಾವತ್ ಮಾಡಿರುವುದು ಟ್ರೈಲರ್​ನಿಂದ ಗೊತ್ತಾಗುತ್ತಿದೆ. ಹಾಗಿದ್ದರೂ ಸಹ ಕೆಲವು ಕಡೆಗಳಲ್ಲಿ ವಿಎಫ್​ಎಕ್ಸ್ ತೀರ ಸಾಮಾನ್ಯ ಎನಿಸುತ್ತದೆ.

ಸ್ವತಃ ಓಂ ರಾವತ್ ಹೇಳಿರುವಂತೆ ಆದಿಪುರುಷ್ ಸಿನಿಮಾ ಒಟ್ಟಾರೆ ರಾಮಾಯಣವಲ್ಲ ಬದಲಿಗೆ ರಾಮ ಅರಣ್ಯವಾಸಿಯಾದ ಬಳಿಕ ನಡೆವ ಸನ್ನಿವೇಶಗಳ ಚಿತ್ರಣ. ಹಾಗಾಗಿ ಆದಿಪುರುಷ್ ಸಿನಿಮಾ ರಾಮ ಹಾಗೂ ರಾವಣನ ಮುಖಾಮುಖಿ ಅದರ ನಡುವೆ ನಡೆದ ಸನ್ನಿವೇಶಗಳನ್ನಷ್ಟೆ ಆಯ್ದು ಸಿನಿಮಾ ಮಾಡಲಾಗಿದೆ. ಹಾಗಾಗಿ ಸಿನಿಮಾದಲ್ಲಿ ಯುದ್ಧದ ದೃಶ್ಯಗಳು ಹೆಚ್ಚಿಗಿವೆ ಎಂಬುದನ್ನು ಟ್ರೈಲರ್ ಸಹ ಸಾರಿ ಹೇಳುತ್ತಿದೆ. ಇನ್ನು ಮರ್ಯಾದಾ ಪುರುಶೋತ್ತಮ, ಶಾಂತಮೂರ್ತಿ ಶ್ರೀರಾಮ, ಕೆಲವು ಖಡಕ್ ಡೈಲಾಗ್​ಗಳನ್ನು ಹೊಡೆಯುತ್ತಿರುವಂತೆಯೂ ಚಿತ್ರಿಸಲಾಗಿದ್ದು ಕೆಲವು ಡೈಲಾಗ್​ಗಳ ಝಲಕ್ ಟ್ರೈಲರ್​ನಲ್ಲಿದೆ.

ಟ್ರೈಲರ್​ನಲ್ಲಿ ಶ್ರೀರಾಮ ಪಾತ್ರಧಾರಿ ಪ್ರಭಾಸ್, ಹಾಗೂ ಹನುಮಂತ ಪಾತ್ರಧಾರಿ ದೇವದತ್ತ ನಾಗೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದೆ. ಸೀತಾ ಪಾತ್ರಧಾರಿ ಕೃತಿ ಸೆನನ್ ಎರಡು ದೃಶ್ಯಗಳಲ್ಲಿ, ರಾವಣ ಪಾತ್ರಧಾರಿ ಸೈಫ್ ಅಲಿ ಖಾನ್ ಒಂದೆರಡು ಬಾರಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಆದರೆ ಟ್ರೈಲರ್​ನಲ್ಲಿ ಸಿನಿಮಾದಲ್ಲಿ ಬಳಸಲಾಗಿರುವ ವಿಎಫ್​ಎಕ್ಸ್ ಗಮನ ಸೆಳೆಯುತ್ತಿದೆ.

ಆದಿಪುರುಷ್ ಸಿನಿಮಾವನ್ನು ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಓಂ ರಾವತ್ ನಿರ್ದೇಶನ ಮಾಡಿದ್ದು, ರಾಮನ ಪಾತ್ರದಲ್ಲಿ ಪ್ರಭಾಸ್, ಸೀತೆ ಪಾತ್ರಧಾರಿ ಕೃತಿ ಸೆನನ್, ರಾವಣನ ಪಾತ್ರದಲ್ಲಿ ಸೈಫ್ ಅಲಿ ಖಾನ್, ಲಕ್ಷ್ಮಣನ ಪಾತ್ರದಲ್ಲಿ ಸನ್ನಿ ಸಿಂಗ್, ಹನುಮಂತನ ಪಾತ್ರದಲ್ಲಿ ದೇವದತ್ತ ನಟಿಸಿದ್ದಾರೆ. ಸಿನಿಮಾಕ್ಕೆ ಟಿ ಸೀರೀಸ್ ಮಾಲೀಕ ಭೂಷಣ್ ಕುಮಾರ್ ಬಂಡವಾಳ ಹೂಡಿದ್ದು, ಈ ಸಿನಿಮಾ ಈವರೆಗಿನ ಭಾರತದ ಅತ್ಯಂತ ದುಬಾರಿ ಸಿನಿಮಾ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:13 pm, Tue, 6 June 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ