AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿಪುರುಷ್ ಟ್ರೈಲರ್: ರಾಮಾಯಣಕ್ಕೆ ತಂತ್ರಜ್ಞಾನದ ಮೆರುಗು, ‘ಮಾಸ್’ ಅವತಾರದಲ್ಲಿ ಶ್ರೀರಾಮ

Adipurush Trailer: ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾದ ಟ್ರೈಲರ್ (ಜೂನ್ 06) ಇಂದು ಬಿಡುಗಡೆ ಆಗಿದೆ. ತಂತ್ರಜ್ಞಾನ ಬಳಸಿ ಬೃಹತ್ ಕ್ಯಾನ್ವಾಸ್​ನಲ್ಲಿ ರಾಮಾಯಣವನ್ನು ಮತ್ತೊಮ್ಮೆ ಹೇಳಲಾಗಿದೆ.

ಆದಿಪುರುಷ್ ಟ್ರೈಲರ್: ರಾಮಾಯಣಕ್ಕೆ ತಂತ್ರಜ್ಞಾನದ ಮೆರುಗು, 'ಮಾಸ್' ಅವತಾರದಲ್ಲಿ ಶ್ರೀರಾಮ
ಆದಿಪುರುಷ್
ಮಂಜುನಾಥ ಸಿ.
|

Updated on:Jun 06, 2023 | 10:23 PM

Share

ಭಾರತದ ಅತಿ ದೊಡ್ಡ ಬಜೆಟ್ ಸಿನಿಮಾ ಎನ್ನಲಾಗುತ್ತಿರುವ ಆದಿಪುರುಷ್ (Adipurush) ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಟ್ರೈಲರ್ ಇಂದು (ಜೂನ್ 06) ಬಿಡುಗಡೆ ಆಗಿದೆ. ತಿರುಪತಿಯಲ್ಲಿ ನಡೆದ ಅದ್ಧೂರಿ ಪ್ರೀ ರಿಲೀಸ್ ಇವೆಂಟ್​ನಲ್ಲಿ ಆದಿಪುರುಷ್ ಟ್ರೈಲರ್ (Adipurush Trailer) ಅನ್ನು ಬಿಡುಗಡೆ ಮಾಡಲಾಯ್ತು. ಈ ಹಿಂದೆ ಬಿಡುಗಡೆ ಆಗಿದ್ದ ಸಿನಿಮಾದ ಟೀಸರ್​ಗೆ ಅಷ್ಟೇನೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಆದರೆ ಇದೀಗ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದ್ದು ಟ್ರೈಲರ್​ನಲ್ಲಿ ಶ್ರೀರಾಮನನ್ನು ಮಾಸ್ ಅವತಾರದಲ್ಲಿ ತೋರಿಸಲಾಗಿದೆ.

ರಾವಣ, ಸೀತೆಯನ್ನು ಹೊತ್ತುಕೊಂಡು ಹೋಗುವ ಸನ್ನಿವೇಶದಿಂದ ಆರಂಭವಾಗುವ ಆದಿಪುರುಷ್ ಟ್ರೈಲರ್​ ಸಿನಿಮಾದಲ್ಲ ಬಳಸಿಕೊಳ್ಳಲಾಗಿರುವ ತಂತ್ರಜ್ಞಾನದಿಂದ ಗಮನ ಸೆಳೆಯುತ್ತಿದೆ. ಅದ್ಧೂರಿ ಸೆಟ್​ಗಳು, ಅದ್ಭುತ ವಿಎಫ್​ಎಕ್ಸ್ ಮೂಲಕ ರಾಮಾಯಣವನ್ನು ಭಾರಿ ಬೃಹತ್ ಆಗಿ ತೋರಿಸುವ ಪ್ರಯತ್ನವನ್ನು ನಿರ್ದೇಶಕ ಓಂ ರಾವತ್ ಮಾಡಿರುವುದು ಟ್ರೈಲರ್​ನಿಂದ ಗೊತ್ತಾಗುತ್ತಿದೆ. ಹಾಗಿದ್ದರೂ ಸಹ ಕೆಲವು ಕಡೆಗಳಲ್ಲಿ ವಿಎಫ್​ಎಕ್ಸ್ ತೀರ ಸಾಮಾನ್ಯ ಎನಿಸುತ್ತದೆ.

ಸ್ವತಃ ಓಂ ರಾವತ್ ಹೇಳಿರುವಂತೆ ಆದಿಪುರುಷ್ ಸಿನಿಮಾ ಒಟ್ಟಾರೆ ರಾಮಾಯಣವಲ್ಲ ಬದಲಿಗೆ ರಾಮ ಅರಣ್ಯವಾಸಿಯಾದ ಬಳಿಕ ನಡೆವ ಸನ್ನಿವೇಶಗಳ ಚಿತ್ರಣ. ಹಾಗಾಗಿ ಆದಿಪುರುಷ್ ಸಿನಿಮಾ ರಾಮ ಹಾಗೂ ರಾವಣನ ಮುಖಾಮುಖಿ ಅದರ ನಡುವೆ ನಡೆದ ಸನ್ನಿವೇಶಗಳನ್ನಷ್ಟೆ ಆಯ್ದು ಸಿನಿಮಾ ಮಾಡಲಾಗಿದೆ. ಹಾಗಾಗಿ ಸಿನಿಮಾದಲ್ಲಿ ಯುದ್ಧದ ದೃಶ್ಯಗಳು ಹೆಚ್ಚಿಗಿವೆ ಎಂಬುದನ್ನು ಟ್ರೈಲರ್ ಸಹ ಸಾರಿ ಹೇಳುತ್ತಿದೆ. ಇನ್ನು ಮರ್ಯಾದಾ ಪುರುಶೋತ್ತಮ, ಶಾಂತಮೂರ್ತಿ ಶ್ರೀರಾಮ, ಕೆಲವು ಖಡಕ್ ಡೈಲಾಗ್​ಗಳನ್ನು ಹೊಡೆಯುತ್ತಿರುವಂತೆಯೂ ಚಿತ್ರಿಸಲಾಗಿದ್ದು ಕೆಲವು ಡೈಲಾಗ್​ಗಳ ಝಲಕ್ ಟ್ರೈಲರ್​ನಲ್ಲಿದೆ.

ಟ್ರೈಲರ್​ನಲ್ಲಿ ಶ್ರೀರಾಮ ಪಾತ್ರಧಾರಿ ಪ್ರಭಾಸ್, ಹಾಗೂ ಹನುಮಂತ ಪಾತ್ರಧಾರಿ ದೇವದತ್ತ ನಾಗೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದೆ. ಸೀತಾ ಪಾತ್ರಧಾರಿ ಕೃತಿ ಸೆನನ್ ಎರಡು ದೃಶ್ಯಗಳಲ್ಲಿ, ರಾವಣ ಪಾತ್ರಧಾರಿ ಸೈಫ್ ಅಲಿ ಖಾನ್ ಒಂದೆರಡು ಬಾರಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಆದರೆ ಟ್ರೈಲರ್​ನಲ್ಲಿ ಸಿನಿಮಾದಲ್ಲಿ ಬಳಸಲಾಗಿರುವ ವಿಎಫ್​ಎಕ್ಸ್ ಗಮನ ಸೆಳೆಯುತ್ತಿದೆ.

ಆದಿಪುರುಷ್ ಸಿನಿಮಾವನ್ನು ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಓಂ ರಾವತ್ ನಿರ್ದೇಶನ ಮಾಡಿದ್ದು, ರಾಮನ ಪಾತ್ರದಲ್ಲಿ ಪ್ರಭಾಸ್, ಸೀತೆ ಪಾತ್ರಧಾರಿ ಕೃತಿ ಸೆನನ್, ರಾವಣನ ಪಾತ್ರದಲ್ಲಿ ಸೈಫ್ ಅಲಿ ಖಾನ್, ಲಕ್ಷ್ಮಣನ ಪಾತ್ರದಲ್ಲಿ ಸನ್ನಿ ಸಿಂಗ್, ಹನುಮಂತನ ಪಾತ್ರದಲ್ಲಿ ದೇವದತ್ತ ನಟಿಸಿದ್ದಾರೆ. ಸಿನಿಮಾಕ್ಕೆ ಟಿ ಸೀರೀಸ್ ಮಾಲೀಕ ಭೂಷಣ್ ಕುಮಾರ್ ಬಂಡವಾಳ ಹೂಡಿದ್ದು, ಈ ಸಿನಿಮಾ ಈವರೆಗಿನ ಭಾರತದ ಅತ್ಯಂತ ದುಬಾರಿ ಸಿನಿಮಾ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:13 pm, Tue, 6 June 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ